ಭಿಕ್ಷಾಟನೆ ಮಾಡುವ ಮಕ್ಕಳ ಡಿ ಎನ್‌ ಎ ಪರೀಕ್ಷೆಗೆ ಪಂಜಾಬ್ ಸರ್ಕಾರ ಮುಂದಾಗಿದ್ದು ಏಕೆ?

Most read

ಚಂಡೀಗಢ: ಮಕ್ಕಳ ಕಳ್ಳಸಾಗಣೆ ಮತ್ತು ಶೋಷಣೆ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ವಯಸ್ಕರೊಂದಿಗೆ ಭಿಕ್ಷಾಟನೆ ಮಾಡುತ್ತಿರುವ ಮಕ್ಕಳ ಡಿ ಎನ್‌ ಎ ಪರೀಕ್ಷೆ ನಡೆಸುವಂತೆ ಪಂಜಾಬ್ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

ಜೀವನ್‌ ಜ್ಯೋತಿ–2 ಯೋಜನೆ ಅಡಿಯಲ್ಲಿ ಸಾಮಾಜಿಕ ಭದ್ರತಾ ನಿರ್ದೇಶನಾಲಯ (ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ) ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈ ಸೂಚನೆ ನೀಡಿದೆ. ಡಿಎನ್‌ ಎ ಪರೀಕ್ಷೆಯು ಮಕ್ಕಳು ಮತ್ತು ಅವರೊಂದಿಗೆ ಭಿಕ್ಷೆ ಬೇಡುತ್ತಿರುವ ವ್ಯಕ್ತಿಗಳ ನಡುವಿನ ಸಂಬಂಧವನ್ನು ಪತ್ತೆ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಒಂದು ವೇಳೆ ಡಿ ಎನ್‌ ಎ ಪರೀಕ್ಷೆಯಲ್ಲಿ ಭಿಕ್ಷಾಟನೆ ಮಾಡುತ್ತಿರುವ ಮಗು ಮತ್ತು ಮಗುವಿನ ಜೊತೆಯಿರುವ ವ್ಯಕ್ತಿಯ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಕಂಡುಬಂದರೆ ಅಂತವರಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ. ಮಕ್ಕಳ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಮಕ್ಕಳ ಭಿಕ್ಷಾಟನೆ ತೊಡೆದುಹಾಕಲು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

More articles

Latest article