ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ಚಿತ್ರನಟ ದರ್ಶನ್ಗೆ ಬೆಂಗಳೂರು ವ್ಯಾಪ್ತಿ ಬಿಟ್ಟು ತೆರಳಲು ಹೈಕೋರ್ಟ್ ಅವಕಾಶ ಕಲ್ಪಿಸಿದೆ. ಆದರೆ ವಿದೇಶ ಪ್ರಯಾಣಕ್ಕೆ ನಿರ್ಬಂಧ ಹೇರಿದೆ.
ತಾನು ಸಿನಿಮಾ ನಟನಾಗಿದ್ದು ಚಿತ್ರಿಕರಣಕ್ಕಾಗಿ ಬೆಂಗಳೂರು ಬಿಟ್ಟು ಬೇರೆ ಪ್ರದೇಶಗಳಿಗೆ ಹೋಗಲು ಅವಕಾಶ ನೀಡಬೇಕು ಎಂದು ನಟ ದರ್ಶನ್ ನ್ಯಾಯಾಲಯದಲ್ಲಿಮನವಿ ಮಾಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ನಟ ದರ್ಶನ್ಗೆ ಮಾತ್ರ ಷರತ್ತು ಸಡಿಲಿಸಿ ನುಮತಿ ನೀಡಿದೆ. ನ್ಯಾ. ವಿಶ್ವಜಿತ್ ಶೆಟ್ಟಿ ಅವರ ಪೀಠ, ‘ದರ್ಶನ್ ದೇಶದೊಳಗೆ ಎಲ್ಲಿಗೆ ಬೇಕಾದರೂ ಹೋಗಬಹುದು’ ಆದೇಶ ನೀಡಿದೆ.
ರೆಗ್ಯುಲರ್ ಜಾಮೀನು ನೀಡುವಾಗ ಹೈಕೋರ್ಟ್ ಹಲವು ಷರತ್ತುಗಳನ್ನು ವಿಧಿಸಿತ್ತು. ದರ್ಶನ್ ಜಾಮೀನು ಬಿಡುಗಡೆ ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರಿಗೆ ಕೆಲಸದ ನಿಮಿತ್ತ ಮುಂಬಯಿ ಹಾಗೂ ಹೊಸದಿಲ್ಲಿಗೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. ಪವಿತ್ರಾ ಗೌಡ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿದ ನ್ಯಾಯಾಲಯ, ಮಾರ್ಚ್ 3ರಿಂದ 10 ಹಾಗೂ ಮಾರ್ಚ್ 17ರಿಂದ 26ರವರೆಗೆ ಮುಂಬಯಿ, ದಿಲ್ಲಿಗೆ ತೆರಳಲು ಅನುಮತಿ ನೀಡಿ ಆದೇಶಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ವಿರುದ್ಧ ಸಾಕ್ಷ್ಯ ನುಡಿದು ಮಾಫಿ ಸಾಕ್ಷಿಯಾಗಲು ಸಹ ಆರೋಪಿಗಳಿಗೆ ಪೊಲೀಸರು ಒತ್ತಡ ಹಾಕುತ್ತಿದ್ದಾರೆ ಎಂದು ದರ್ಶನ್ ಪರ ವಕೀಲರು ಆರೋಪಿಸಿದ್ದಾರೆ. ‘=ಪ್ರಕರಣದ ಮೂರ್ನಾಲ್ಕು ಸಹ ಆರೋಪಿಗಳಿಗೆ ಪೊಲೀಸರು ಮಾಫಿ ಸಾಕ್ಷಿಯಾಗುವಂತೆ ಒತ್ತಡ ಹೇರುತ್ತಿದ್ದಾರೆ. ದರ್ಶನ್ ಪರ ಸಾಕ್ಷಿ ನುಡಿಯುವಂತೆ ಆಮಿಷ ಒಡ್ಡುವ ಪ್ರಯತ್ನಗಳಾಗುತ್ತಿವೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ನ್ಯಾಯಾಲಯ ಈ ಆರೋಪಕ್ಕೆ ಸಂಬಂಧಿಸಿ ಲಿಖಿತ ಅರ್ಜಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಏ.8ಕ್ಕೆ ಮುಂದೂಡಿದೆ.