ಬಿಹಾರದಲ್ಲಿ ಬಿಜೆಪಿ ಎನ್‌ ಡಿಎ ಪರವಾಗಿ ಚುನಾವಣಾ ಅಕ್ರಮ ನಡೆಯಲು ಬಿಡುವುದಿಲ್ಲ: ರಾಹುಲ್ ಗಾಂಧಿ

ಪಟ್ನಾ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎನ್‌ ಡಿಎ ಪರವಾಗಿ ಅಕ್ರಮಗಳನ್ನು ನಡೆಸಲಾಗಿದ್ದು, ಬಿಹಾರದಲ್ಲೂ ಅದನ್ನೇ ಪುನರಾವರ್ತಿಸಲು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಮುಖಂಡ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಗುಡುಗಿದ್ದಾರೆ.

ವರ್ಷಾಂತ್ಯದಲ್ಲಿ ಬಿಹಾರ ವಿಧಾನಭೆಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ತರಾತರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿರುವುದನ್ನು ವಿರೋಧಿಸಿ ಇಂಡಿಯಾ ಬಣ ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ರಾಹುಲ್‌ ಗಾಂಧಿ ಮಾತನಾಡಿದರು.

 ಮಹಾರಾಷ್ಟ್ರದಲ್ಲಿ 2024ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಗೆ ಅನುಕೂಲವಾಗುವಂತೆ ಚುನಾವಣಾ ಅಕ್ರಮಗಳನ್ನು ವ್ಯಾಪಕವಾಗಿ ನಡೆಸಲಾಗಿದೆ. ಬಿಹಾರದಲ್ಲಿಯೂ ಅದೇ ತಂತ್ರವನ್ನು ಪುನರಾವರ್ತಿಸಲು ಕೇಂದ್ರದ ಎನ್‌ಡಿಎ ಸರ್ಕಾರ ಬಯಸುತ್ತಿದೆ ಎಂದು ಅವರು  ಆರೋಪಿಸಿದ್ದಾರೆ.

ಚುನಾವಣಾ ಆಯೋಗವು ಸಂವಿಧಾನವನ್ನು ರಕ್ಷಿಸಬೇಕು. ಆದರೆ  ಬಿಜೆಪಿ ಸೂಚನೆಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತಿದೆ. ಬಿಜೆಪಿ ನಾಮನಿರ್ದೇಶನ ಮಾಡಿದವರೇ ಅದರ ಆಯುಕ್ತರಾಗಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯು ಚುನಾವಣಾ ಫಲಿತಾಂಶವನ್ನು ಕದಿಯುವ ಪ್ರಯತ್ನವಾಗಿದೆ. ನಾಗರಿಕರ ಹಕ್ಕುಗಳನ್ನು ಅದರಲ್ಲೂ, ಯುವಕರ ಹಕ್ಕುಗಳನ್ನು ಕಸಿಯಲು ಚುನಾವಣಾ ಆಯೋಗಕ್ಕೆ ನಾವು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಪಟ್ನಾದಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಯಿಂದ ಚುನಾವಣಾ ಆಯೋಗದ ಕಚೇರಿ ವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಆರ್‌ ಜೆಡಿ ನಾಯಕ ತೇಜಸ್ವಿ ಯಾದವ್‌, ಸಿಪಿಐ(ಎಂಎಲ್‌) ನಾಯಕ ದೀಪಂಕರ್‌ ಭಟ್ಟಾಚಾರ್ಯ, ಸಿಪಿಐ ನಾಯಕ ಡಿ. ರಾಜಾ ಹಾಗೂ ಇತರ ಪಕ್ಷಗಳ ನಾಯಕರೊಂದಿಗೆ ರಾಹುಲ್‌ ಭಾಗವಹಿಸಿದ್ದರು.

ಪಟ್ನಾ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಎನ್‌ ಡಿಎ ಪರವಾಗಿ ಅಕ್ರಮಗಳನ್ನು ನಡೆಸಲಾಗಿದ್ದು, ಬಿಹಾರದಲ್ಲೂ ಅದನ್ನೇ ಪುನರಾವರ್ತಿಸಲು ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಮುಖಂಡ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಗುಡುಗಿದ್ದಾರೆ.

ವರ್ಷಾಂತ್ಯದಲ್ಲಿ ಬಿಹಾರ ವಿಧಾನಭೆಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗವು ತರಾತರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಮುಂದಾಗಿರುವುದನ್ನು ವಿರೋಧಿಸಿ ಇಂಡಿಯಾ ಬಣ ನಡೆಸುತ್ತಿರುವ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ರಾಹುಲ್‌ ಗಾಂಧಿ ಮಾತನಾಡಿದರು.

 ಮಹಾರಾಷ್ಟ್ರದಲ್ಲಿ 2024ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿಗೆ ಅನುಕೂಲವಾಗುವಂತೆ ಚುನಾವಣಾ ಅಕ್ರಮಗಳನ್ನು ವ್ಯಾಪಕವಾಗಿ ನಡೆಸಲಾಗಿದೆ. ಬಿಹಾರದಲ್ಲಿಯೂ ಅದೇ ತಂತ್ರವನ್ನು ಪುನರಾವರ್ತಿಸಲು ಕೇಂದ್ರದ ಎನ್‌ಡಿಎ ಸರ್ಕಾರ ಬಯಸುತ್ತಿದೆ ಎಂದು ಅವರು  ಆರೋಪಿಸಿದ್ದಾರೆ.

ಚುನಾವಣಾ ಆಯೋಗವು ಸಂವಿಧಾನವನ್ನು ರಕ್ಷಿಸಬೇಕು. ಆದರೆ  ಬಿಜೆಪಿ ಸೂಚನೆಗಳಿಗೆ ಅನುಗುಣವಾಗಿ ಕೆಲಸ ಮಾಡುತ್ತಿದೆ. ಬಿಜೆಪಿ ನಾಮನಿರ್ದೇಶನ ಮಾಡಿದವರೇ ಅದರ ಆಯುಕ್ತರಾಗಿದ್ದಾರೆ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯು ಚುನಾವಣಾ ಫಲಿತಾಂಶವನ್ನು ಕದಿಯುವ ಪ್ರಯತ್ನವಾಗಿದೆ. ನಾಗರಿಕರ ಹಕ್ಕುಗಳನ್ನು ಅದರಲ್ಲೂ, ಯುವಕರ ಹಕ್ಕುಗಳನ್ನು ಕಸಿಯಲು ಚುನಾವಣಾ ಆಯೋಗಕ್ಕೆ ನಾವು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಪಟ್ನಾದಲ್ಲಿರುವ ಆದಾಯ ತೆರಿಗೆ ಇಲಾಖೆ ಕಚೇರಿಯಿಂದ ಚುನಾವಣಾ ಆಯೋಗದ ಕಚೇರಿ ವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಆರ್‌ ಜೆಡಿ ನಾಯಕ ತೇಜಸ್ವಿ ಯಾದವ್‌, ಸಿಪಿಐ(ಎಂಎಲ್‌) ನಾಯಕ ದೀಪಂಕರ್‌ ಭಟ್ಟಾಚಾರ್ಯ, ಸಿಪಿಐ ನಾಯಕ ಡಿ. ರಾಜಾ ಹಾಗೂ ಇತರ ಪಕ್ಷಗಳ ನಾಯಕರೊಂದಿಗೆ ರಾಹುಲ್‌ ಭಾಗವಹಿಸಿದ್ದರು.

More articles

Latest article

Most read