ಬಿಜೆಪಿ ನೂರು ಜನ್ಮ ತಾಳಿದ್ರೂ ಗ್ಯಾರಂಟಿ ಯೋಜನೆ ನಿಲ್ಲಿಸೋಕಾಗಲ್ಲ: ಡಿಕೆ ಶಿವಕುಮಾರ್

Most read

ಬಿಜೆಪಿಯವ್ರು ಇನ್ನೂ ನೂರು ಜನ್ಮ ತಾಳಿದ್ರೂ ಈ ಐದು ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸೋದಕ್ಕೆ ಆಗೊಲ್ಲ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸವೆಂದರೆ ದೇಶದ ಇತಿಹಾಸ ಎಂದು ಡಿಸಿಎಂ ಡಿಕೆ ಶಿವಕುಮಾರ ಹೇಳಿದ್ದಾರೆ.

 ಇಂದು ಪದ್ಮನಾಭನಗರದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿಯ ಉದ್ಘಾಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು, ರಾಜಕೀಯ ಎಂದಮೇಲೆ ಅಲ್ಲಿ ಸೋಲು ಗೆಲುವು ಇದ್ದೇ ಇರುತ್ತೆ. ಆದ್ರೆ ಈ ಐದು ಯೋಜನೆಗಳು ಹೇಗೆ ಬಂತು? ನಾವು ಜನರ ಬದುಕಿನ ಮೇಲೆ ಯೋಜನೆ ರೂಪಿಸುತ್ತೇವೆ. ಬಿಜೆಪಿ ಅವರು ಭಾವನೆಗಳ ಮೇಲೆ ಯೋಜನೆ ರೂಪಿಸುತ್ತಾರೆ.  ನಾವು ನಮಗೆ ಒಳ್ಳೆಯದಾಗಲಿ, ಮಕ್ಕಳಿಗೆ ಮನೆಗೆ ಒಳ್ಳೆಯದು ಮಾಡಲಿ ಎಂದು ದೇವಸ್ಥಾನಕ್ಕೆ ಹೋಗಿ ದೇವರ ಹತ್ರ ಬೇಡಿಕೊಳ್ತೇವೆ.  ನೀವು ದೇವರಲ್ಲಿ ಏನು‌ ಕೇಳ್ತೀರೋ ಅದನ್ನು ನೀಡೋದಕ್ಕೆ ನಾವು ಯೋಜನೆ ರೂಪಿಸುತ್ತೆವೆ ಎಂದು ಹೇಳಿದ್ದಾರೆ.

ಬಿಜೆಪಿಯವ್ರು ಇನ್ನೂ ನೂರು ಜನ್ಮ ತಾಳಿದ್ರೂ ಈ ಐದು ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸೋದಕ್ಕೆ ಆಗೊಲ್ಲ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸವೆಂದರೆ ದೇಶದ ಇತಿಹಾಸ. ನಿಮ್ಮ ಯೋಜನೆಯನ್ನು ಬಿಜೆಪಿಯವರು ಪಡೆದುಕೊಳ್ತಿದ್ದಾರೆ. ಬಿಜೆಪಿ ಅವ್ರು ಫ್ರೀ ಕರೆಂಟು ಪಡೆಯುತ್ತ ಇದ್ದಾರೆ. ಫ್ರೀಯಾಗಿ ಬಸ್‌ನಲ್ಲಿ ಓಡಾಡ್ತಾ ಇದ್ದಾರೆ. ಅಶೋಕ್‌ಗೆ ಹೇಳೋದಕ್ಕೆ ಹೇಳಿ ಬಿಜೆಪಿಯವರು ಎಲ್ಲರೂ ಬಸ್‌ ಟಿಕೆಟ್ ತಗೊಂಡು ಪ್ರಯಾಣ ಮಾಡಲಿ ಅಂತಾ. ಗ್ಯಾರಂಟಿ ಯೋಜನೆಗಳನ್ನ ಪಡೆಯಬೇಡಿ, ಬರೆದುಕೊಡೋಕೆ ಹೇಳಲಿ ಎಂದು ಕಾಂಗ್ರೆಸ್ ಯೋಜನೆಗಳನ್ನು ವಿರೋಧಿಸಿದವರು ಯಾಕೆ ಬಳಸಿಕೊಳ್ತಾರೆ? ಎಂದು ಟೀಕಸಿದ್ದಾರೆ.

More articles

Latest article