ರಾಜ್ಯದ ಹಲವು ನ್ಯಾಯಾಲಯಗಳಿಗೆ ಬಾಂಬ್‌ ಬೆದರಿಕೆ

ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ

ಬೆಂಗಳೂರು: ಕೊಡಗು, ಧಾರವಾಡ, ದಾವಣಗೆರೆ, ಹಾಸನ ಸೇರಿ ರಾಜ್ಯದ ಹಲವು ಜಿಲ್ಲೆಗಳ ನ್ಯಾಯಾಲಯಗಳಿಗೆ ಏಕಕಾಲಕ್ಕೆ ಬಾಂಬ್‌ ಬೆದರಿಕೆ ಬಂದಿದೆ. ಪೊಲೀಸರು  ಬಾಂಬ್‌ ನಿಷ್ಕ್ರಿಯ ದಳ, ಶ್ವಾನದಳದೊಂದಿಗೆ ದೌಡಾಯಿಸಿದ್ದು, ತಪಾಸಣೆ ಕೈಗೊಂಡಿದ್ದಾರೆ.
ಮುನ್ನೆಚ್ಚರಿಕೆಯಾಗಿ ನ್ಯಾಯಾಲಯದ ಒಳಗಿದ್ದ ಸಿಬ್ಬಂದಿ, ವಕೀಲರು ಹಾಗೂ ಇತರೆ ಸಿಬ್ಬಂದಿಯನ್ನ ಹೊರಗೆ ಕಳುಹಿಸಲಾಗಿದೆ. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. 

ನ್ಯಾಯಾಲಯ ಸಂಕೀರ್ಣಕ್ಕೆ ಪೊಲೀಸ್ ವಿಶೇಷ ಭದ್ರತಾ ಪಡೆ, ಶ್ವಾನ ದಳ ಹಾಗೂ ಬಾಂಬ್‌ ನಿಷ್ಕ್ರೀಯ ದಳಗಳು ಧಾವಿಸಿದ್ದು, ಪರಿಶೀಲನೆ‌ ನಡೆಸುತ್ತಿದೆ. ಮಡಿಕೇರಿಯಲ್ಲಿ ನ್ಯಾಯಾಲಯ ಸಂಕೀರ್ಣದ ಪ್ರತಿಯೊಂದು‌ ಭಾಗವನ್ನೂ ಸೂಕ್ಷ್ಮವಾಗಿ ತಪಾಸಣೆ ನಡೆಸುತ್ತಿರುವ ಪೊಲೀಸರು ಅನುಮಾನಾಸ್ಪದ ವಸ್ತುಗಳ ಶೋಧ ನಡೆಸುತ್ತಿದ್ದಾರೆ. ಅಲ್ಲದೇ ಬೆದರಿಕೆ ಬಂದ ಇ-ಮೇಲ್ ಮೂಲ ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ.

ಧಾರವಾಡ ಹೈಕೋರ್ಟ್‌  ಹಾಗೂ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಕೂಡಲೇ ಕೋರ್ಟ್‌ ಸಿಬ್ಬಂದಿ ಹಾಗೂ ವಕೀಲಯರನ್ನ ಹೊರಗೆ ಕಳುಹಿಸಿದ್ದು, ಬಳಿಕ ಧಾರವಾಡ ಗರಗ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕೋರ್ಟ್‌ ಆವರಣಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಎಸ್ಪಿ ಗುಂಜನ್ ಆರ್ಯ ನೇತೃತ್ವದಲ್ಲಿ ಶೋಧ ನಡೆಸಿದ್ದಾರೆ. 

ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೂ ಅಪರಿಚಿತ ಇ-ಮೇಲ್‌ ವಿಳಾಸದಿಂದ ಬಾಂಬ್‌ ಬೆದರಿಕೆ ಬಂದಿದೆ. ʻಇಂದು ಮಧ್ಯಾಹ್ನ 12:30ರ ಹೊತ್ತಿಗೆ ಆರ್‌ಡಿಎಕ್ಸ್ ಸ್ಫೋಟವಾಗಲಿದೆʼ ಎಂಬ ಸಂದೇಶ ಬಂದಿದೆ. ಈ ಹಿನ್ನೆಲೆ ಕೂಡಲೇ ಕಲಾಪಗಳನ್ನ ಸ್ಥಗಿತಗೊಳಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಕೂಡಲೇ ಬಾಂಬ್‌ ನಿಷ್ಕ್ರಿಯ ದಳ ಹಾಗೂ ಶ್ವಾನದಳದೊಂದಿಗೆ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಇ-ಮೇಲ್‌ ವಿಳಾಸ ತಮಿಳುನಾಡಿನಲ್ಲಿ ಪತ್ತೆಯಾಗಿದೆ.   
ಹಾಸನದಲ್ಲಿ ಕೋರ್ಟ್‌ ಸಿಬ್ಬಂದಿ, ವಕೀಲರನ್ನ ಆವರಣದಿಂದ ಹೊರಗೆ ಕಳಿಸಿದ್ದು, ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಪಾರ್ಕಿಂಗ್, ಕೋರ್ಟ್ ಆವರಣ, ಒಳಾಂಗಣಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ತಪಾಸಣೆ ನಡೆಸುತ್ತಿವೆ.

ಬೆಂಗಳೂರು: ಕೊಡಗು, ಧಾರವಾಡ, ದಾವಣಗೆರೆ, ಹಾಸನ ಸೇರಿ ರಾಜ್ಯದ ಹಲವು ಜಿಲ್ಲೆಗಳ ನ್ಯಾಯಾಲಯಗಳಿಗೆ ಏಕಕಾಲಕ್ಕೆ ಬಾಂಬ್‌ ಬೆದರಿಕೆ ಬಂದಿದೆ. ಪೊಲೀಸರು  ಬಾಂಬ್‌ ನಿಷ್ಕ್ರಿಯ ದಳ, ಶ್ವಾನದಳದೊಂದಿಗೆ ದೌಡಾಯಿಸಿದ್ದು, ತಪಾಸಣೆ ಕೈಗೊಂಡಿದ್ದಾರೆ.
ಮುನ್ನೆಚ್ಚರಿಕೆಯಾಗಿ ನ್ಯಾಯಾಲಯದ ಒಳಗಿದ್ದ ಸಿಬ್ಬಂದಿ, ವಕೀಲರು ಹಾಗೂ ಇತರೆ ಸಿಬ್ಬಂದಿಯನ್ನ ಹೊರಗೆ ಕಳುಹಿಸಲಾಗಿದೆ. ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. 

ನ್ಯಾಯಾಲಯ ಸಂಕೀರ್ಣಕ್ಕೆ ಪೊಲೀಸ್ ವಿಶೇಷ ಭದ್ರತಾ ಪಡೆ, ಶ್ವಾನ ದಳ ಹಾಗೂ ಬಾಂಬ್‌ ನಿಷ್ಕ್ರೀಯ ದಳಗಳು ಧಾವಿಸಿದ್ದು, ಪರಿಶೀಲನೆ‌ ನಡೆಸುತ್ತಿದೆ. ಮಡಿಕೇರಿಯಲ್ಲಿ ನ್ಯಾಯಾಲಯ ಸಂಕೀರ್ಣದ ಪ್ರತಿಯೊಂದು‌ ಭಾಗವನ್ನೂ ಸೂಕ್ಷ್ಮವಾಗಿ ತಪಾಸಣೆ ನಡೆಸುತ್ತಿರುವ ಪೊಲೀಸರು ಅನುಮಾನಾಸ್ಪದ ವಸ್ತುಗಳ ಶೋಧ ನಡೆಸುತ್ತಿದ್ದಾರೆ. ಅಲ್ಲದೇ ಬೆದರಿಕೆ ಬಂದ ಇ-ಮೇಲ್ ಮೂಲ ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ.

ಧಾರವಾಡ ಹೈಕೋರ್ಟ್‌  ಹಾಗೂ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಕೂಡಲೇ ಕೋರ್ಟ್‌ ಸಿಬ್ಬಂದಿ ಹಾಗೂ ವಕೀಲಯರನ್ನ ಹೊರಗೆ ಕಳುಹಿಸಿದ್ದು, ಬಳಿಕ ಧಾರವಾಡ ಗರಗ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಕೋರ್ಟ್‌ ಆವರಣಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಎಸ್ಪಿ ಗುಂಜನ್ ಆರ್ಯ ನೇತೃತ್ವದಲ್ಲಿ ಶೋಧ ನಡೆಸಿದ್ದಾರೆ. 

ದಾವಣಗೆರೆ ಜಿಲ್ಲಾ ನ್ಯಾಯಾಲಯಕ್ಕೂ ಅಪರಿಚಿತ ಇ-ಮೇಲ್‌ ವಿಳಾಸದಿಂದ ಬಾಂಬ್‌ ಬೆದರಿಕೆ ಬಂದಿದೆ. ʻಇಂದು ಮಧ್ಯಾಹ್ನ 12:30ರ ಹೊತ್ತಿಗೆ ಆರ್‌ಡಿಎಕ್ಸ್ ಸ್ಫೋಟವಾಗಲಿದೆʼ ಎಂಬ ಸಂದೇಶ ಬಂದಿದೆ. ಈ ಹಿನ್ನೆಲೆ ಕೂಡಲೇ ಕಲಾಪಗಳನ್ನ ಸ್ಥಗಿತಗೊಳಿಸಲಾಗಿದೆ. ಮಾಹಿತಿ ಪಡೆದ ಪೊಲೀಸರು ಕೂಡಲೇ ಬಾಂಬ್‌ ನಿಷ್ಕ್ರಿಯ ದಳ ಹಾಗೂ ಶ್ವಾನದಳದೊಂದಿಗೆ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಇ-ಮೇಲ್‌ ವಿಳಾಸ ತಮಿಳುನಾಡಿನಲ್ಲಿ ಪತ್ತೆಯಾಗಿದೆ.   
ಹಾಸನದಲ್ಲಿ ಕೋರ್ಟ್‌ ಸಿಬ್ಬಂದಿ, ವಕೀಲರನ್ನ ಆವರಣದಿಂದ ಹೊರಗೆ ಕಳಿಸಿದ್ದು, ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಪಾರ್ಕಿಂಗ್, ಕೋರ್ಟ್ ಆವರಣ, ಒಳಾಂಗಣಗಳಲ್ಲಿ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ತಪಾಸಣೆ ನಡೆಸುತ್ತಿವೆ.

More articles

Latest article

Most read