40 ಪ್ರಯಾಣಿಕರಿದ್ದ ಐರಾವತ ಬಸ್​ಗೆ ಬೆಂಕಿ: ಸುಟ್ಟು ಕರಕಲು, ಪ್ರಯಾಣಿಕರು ಸೇಫ್

Most read

40‌ ಪ್ರಯಾಣಿಕರಿದ್ದ ಸರ್ಕಾರಿ ಐರಾವತ ಬಸ್​ನಲ್ಲಿ​​ ರಸ್ತೆ ಮಧ್ಯೆ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಇಂದು ಮುಂಜಾನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ.

ಡ್ರೈವರ್-ಕಂಡಕ್ಟರ್ ಸೇರಿ 40 ಜ‌ನ ಪ್ರಯಾಣಿಕರಿದ್ದ ಐರಾವತ ಎಸಿ ಸ್ಲೀಪರ್ ಬಸ್ ಶಿವಮೊಗ್ಗದಿಂದ ಮೈಸೂರಿಗೆ ತೆರಳುತ್ತಿತ್ತು. ಮುಂಜಾನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ನೇರಲಕೆರೆ ಕ್ರಾಸ್​ ಬಳಿ ಬಸ್​ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ.

ತಕ್ಷಣ ಚಾಲಕ- ನಿರ್ವಾಹಕ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಅಗ್ನಿ ಶಾಮಕ ದಳದ ಸಿಬ್ಬಂದಿಗೆ ಮಾಹಿತಿ ರವಾನಿಸಿದರು. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯ ಮಾಡಿದೆ. ಆದರೂ ಬಸ್​ ಶೇ. 90ರಷ್ಟು ಸುಟ್ಟು ಕರಕಲಾಗಿದೆ.

ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

More articles

Latest article