ಹೊಸ ಪ್ರವಾಸೋದ್ಯಮ ನೀತಿಗೆ ಸಚಿವ ಸಂಪುಟ ಅನುಮೋದನೆ; ರೂ.1500 ಕೋಟಿ ಹೂಡಿಕೆಯ ಗುರಿ

Most read

ಬೆಂಗಳೂರು: ಕರ್ನಾಟಕ ಪ್ರವಾಸೋದ್ಯಮ ನೀತಿ 2024-29ನ್ನು ರಾಜ್ಯ ಸಚಿವ ಸಂಪುಟ ಅಂಗೀಕರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ಇಂದು ತಿಳಿಸಿದ್ದಾರೆ.

ಕರ್ನಾಟಕ ಪ್ರವಾಸೋದ್ಯಮದ ಹೊಸ ನೀತಿಯು ಪ್ರವಾಸೋದ್ಯಮ ಕ್ಷೇತ್ರವನ್ನು ಅತ್ಯಂತ ಆದ್ಯತೆಯ ಉತ್ಸಾಹದಾಯಕ ಮತ್ತು ಪುಷ್ಟಿಕರಿಸಿದ ಪ್ರವಾಸೋದ್ಯಮ ತಾಣವಾಗಿ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ. ಸಮಾಜದ ಎಲ್ಲಾ ಸ್ಥರಗಳ ಬಡ, ಮಧ್ಯಮ ವರ್ಗದ ಮತ್ತು ಮೇಲ್ಮಧ್ಯಮ ವರ್ಗದ ಹಾಗೂ ಗಣ್ಯ ವರ್ಗದ ಪ್ರವಾಸಿ ಅವಶ್ಯಕತೆಗಳನ್ನು ಗಮನದಲ್ಲಿರಿಸಿಕೊಂಡು ಹೊಸ ನೀತಿಯನ್ನು ರಚಿಸಲಾಗಿದೆ.

ಶಾಲಾ-ಬಾಲಕರ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸ, ಕೃಷಿ ಪ್ರವಾಸ, ಆರೋಗ್ಯ ಕ್ಷೇತ್ರದ ಹೊಸ ಅನುಭವಗಳ Wellness ಪ್ರವಾಸೋದ್ಯಮ, ಆಧ್ಯಾತ್ಮಿಕ, ಯಾತ್ರಾತೀರ್ಥಗಳ ಪ್ರವಾಸ, ಪಾರಂಪರಿಕ ತಾಣಗಳ ಭೇಟಿ ಅಧ್ಯಯನ ಪ್ರವಾಸ, ಸಾಹಸ ಪ್ರವಾಸೋದ್ಯಮದ ಜೊತೆಗೆ ವಿರಾಮ, ವಿನೋದ, ಜ್ಞಾನಾರ್ಜನೆ, ಮನ:ಶಾಂತಿ, ವಿಶ್ರಾಂತಿ ಮುಂತಾದವುಗಳಿಗಾಗಿ ಸಮಗ್ರವಾದ ನೀತಿಯೊಂದನ್ನು ರೂಪಿಸಲಾಗಿದೆ.

  • ಈ ನೀತಿಯು ಕರ್ನಾಟಕದಲ್ಲಿ ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾದ ವಾತಾವರಣ ನಿರ್ಮಿಸುತ್ತಿದೆ.
  • ಉತ್ತಮ ಗುಣಮಟ್ಟದ ಪ್ರವಾಸಿ ಸೌಕರ್ಯಗಳನ್ನು ಕಲ್ಪಿಸಲು ಕ್ರಮವಹಿಸುತ್ತದೆ.
  • ಆಕರ್ಷಣಿಯ ಮತ್ತು ವಿಹಾರದಾಯಕ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ.
  • ಪ್ರವಾಸೋದ್ಯಮ ವಲಯದಲ್ಲಿ ಸಾರ್ವಜನಿಕ ಖಾಸಗಿ ಭಾಗವಹಿಸುವಿಕೆಯನ್ನು ಉತ್ತೇಜಿಸಲಾಗುವುದು. ಅದಕ್ಕಾಗಿ ಕರ್ನಾಟಕವನ್ನು ಆದ್ಯತೆಯ ತಾಣವನ್ನಾಗಿ ಪರಿವರ್ತಿಸಲು ಹೂಡಿಕೆ ಸ್ನೇಹಿ ನೀತಿಗಳೊಂದಿಗೆ ಅನುಕೂಲಕರ ವಾಣಿಜ್ಯ ವಾತಾವರಣವನ್ನು ಉತ್ತೇಜಿಸಲಾಗುವುದು.
  • ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ನೀಡಲಾಗುವುದು.
  • 9 ಪ್ರಮುಖ ಕೇಂದ್ರೀಕೃತ ಕ್ಷೇತ್ರಗಳನ್ನು ಗುರುತಿಸಿದೆ.
  • ಪ್ರವಾಸೋದ್ಯಮ ಅನುಭವಗಳ ಅಭಿವೃದ್ಧಿಗಾಗಿ 25 ವಿಷಯಾಧಾರಿತ ಕ್ಷೇತ್ರಗಳನ್ನು ಅರ್ಹ ಪ್ರವಾಸೋದ್ಯಮ ಯೋಜನೆಯಡಿ 44 ವಿವಿಧ ರೀತಿಯ ಪ್ರವಾಸೋದ್ಯಮ ಯೋಜನೆಗಳನ್ನು ಗುರುತಿಸಲಾಗಿದೆ.
  • ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ವಿಶೇಷ ಆದ್ಯತೆ ನೀಡಲಾಗಿದೆ.
  • 30000 ಜನರಿಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಉದ್ಯೋಗಾವಕಾಶ ಒದಗಿಸಲಾಗುವುದು.
  • ರೂ.1500 ಕೋಟಿ ಹೂಡಿಕೆ ಯೋಜಿಸಿದೆ.
  • ಆತೀಥೆಯ ಉದ್ಯಮ ಉತ್ತೇಜನಕ್ಕೆ ಶೇ.5 ರಷ್ಟು ಬಂಡವಾಳ ಹೂಡಿಕೆಗೆ ಸಹಾಯಧನವನ್ನು ಹೆಚ್ಚುವರಿಯಾಗಿ ಒದಗಿಸಲಾಗುವುದು.
  • 09 ಪ್ರೋತ್ಸಾಹಕಗಳನ್ನು ಎರಡು ರೀತಿಯ ಸಹಾಯಧನಗಳನ್ನು, 07 ರೀತಿಯ ರಿಯಾಯಿತಿಗಳನ್ನು ಪ್ರಕಟಿಸಲಾಗಿದೆ.
  • ಹೊಸ ನೀತಿಯು ಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಗಳನ್ನು ಆಕರ್ಷಿಸಲು, ವಿದೇಶಿ ವಿನಿಮಯ ಗಳಿಕೆಯನ್ನು ಹೆಚ್ಚಿಸಲು, ಉದ್ಯೋಗವನ್ನು ಸೃಷ್ಟಿಸಲು, ಕರ್ನಾಟಕದ ಜನರಿಗೆ ಸಾಮಾಜಿಕ-ಆರ್ಥಿಕ ಉನ್ನತಿಯನ್ನು ಸುಗಮಗೊಳಿಸಲು ಮತ್ತು ರಾಜ್ಯದ ಜಿ.ಎಸ್.ಡಿ.ಪಿ ಗೆ ಪ್ರವಾಸೋದ್ಯಮ ಕ್ಷೇತ್ರದ ಕೊಡುಗೆಯನ್ನು ಹೆಚ್ಚಿಸಲು ಮೂಲಭೂತ ಬಲವಾದ ಅಡಿಪಾಯವನ್ನು ಒದಗಿಸುತ್ತದೆ.

ಈ ನೀತಿಯು 5ನೇ ವರ್ಷದ ಅಂತ್ಯಕ್ಕೆ ಸಾಧಿಸಲು ನಿಗಧಿಪಡಿಸಿರುವ ಗುರಿಗಳು ಕೆಳಕಂಡಂತಿವೆ:

  1. ದೇಶಿಯ ಪ್ರವಾಸಿಗರ ಭೇಟಿಯಲ್ಲಿ ದೇಶದಲ್ಲಿಯೇ ಪ್ರಥಮ 3 ರಾಜ್ಯಗಳಲ್ಲಿ ಒಂದಾಗುವುದು (48 ಕೋಟಿ).
  2. ವಿದೇಶಿ ಪ್ರವಾಸಿಗರ ಭೇಟಿಯಲ್ಲಿ ದೇಶದಲ್ಲಿಯೇ ಪ್ರಥಮ 5 ರಾಜ್ಯಗಳಲ್ಲಿ ಒಂದಾಗುವುದು (20 ಲಕ್ಷ).
  3. ಕನಿಷ್ಟ 47000 ಜನರಿಗೆ ನೇರ ಉದ್ಯೋಗವನ್ನು ಸೃಜಿಸುವುದು.
  4. ಒಂದು ಲಕ್ಷ ಜನರಿಗೆ ಪರೋಕ್ಷ ಮತ್ತು ಪ್ರೇರಿತ ಉದ್ಯೋಗವನ್ನು ಸೃಷ್ಟಿಸುವುದು.
  5. ರೂ.7,800/- ಕೋಟಿ ಹೂಡಿಕೆಯನ್ನು ಆಕರ್ಷಿಸುವುದು.
  6. ರಾಜ್ಯಾದ್ಯಂತ ಇಲಾಖೆಯ ಮಾಲೀಕತ್ವದಲ್ಲಿರುವ 680 ಎಕರೆ ಭೂಮಿಯನ್ನು ಪ್ರವಾಸೋದ್ಯಮ ಯೋಜನೆಗಳಿಗಾಗಿ Monetize ಮಾಡುವುದು.
  7. ಒಂದು ಜಿಲ್ಲೆ ಒಂದು ತಾಣ ಯೋಜನೆಯಡಿ ಪ್ರತಿ ಜಿಲ್ಲೆಗೆ ಒಂದರಂತೆ ಕನಿಷ್ಟ 30 ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವುದು.
  8. ಕರ್ನಾಟಕವನ್ನು ಕನಿಷ್ಠ 50 ಅಂತಾರಾಷ್ಟ್ರೀಯ ಪ್ರವಾಸಿ ಮೇಳಗಳಲ್ಲಿ ಪ್ರಚಾರಪಡಿಸುವುದು ಈ ನೀತಿಯ ಉದ್ಧೇಶವಾಗಿದೆ.

More articles

Latest article