ವಿಜಯಪುರ: ಮನಗೂಳಿ ಕೆನರಾ ಬ್ಯಾಂಕ್‌ ನಲ್ಲಿ 59ಕೆಜಿ ಚಿನ್ನಾಭರಣ ದರೋಡೆ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್  ಶಾಖೆಯಲ್ಲಿ 59 ಕೆ.ಜಿ. ಚಿನ್ನಾಭರಣ ಹಾಗೂ ರೂ. 5.20 ಲಕ್ಷ ಹಣವನ್ನು ದರೋಡೆ ಮಾಡಲಾಗಿದೆ. ಮೇ 23ರಿಂದ 25ರ ನಡುವೆ ಬ್ಯಾಂಕಿನ ದರೋಡೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮೇ 26ರಂದು ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಕಲ್ಮೇಶ ಪೂಜಾರಿ ದೂರು ನೀಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ.

ಬ್ಯಾಂಕಿನ ಮುಖ್ಯ ದ್ವಾರದ ಶೆಟರ್ಸ್ ಗೆ ಹಾಕಿದ ಕೀಲಿ ಮತ್ತು ಕಿಟಕಿಯ ಸರಳುಗಳನ್ನು ಮುರಿದು ದರೋಡೆಕೋರರು ಒಳಗೆ ಪ್ರವೇಶಿಸಿದ್ದಾರೆ. ಬಂಗಾರದ ಆಭರಣ ಹಾಗೂ ನಗದು ಇರಿಸಿದ್ದ ಸೇಪ್ ಲಾಕರ್ ನ ಕೀಲಿ ತೆಗೆದು ಅದರ ಒಳಗೆ ಇರುವ ಕಬ್ಬಿಣದ ಬಾಗಿಲಿನ ಸರಳುಗಳನ್ನು ಕತ್ತರಿಸಿ ಒಳಗೆ ಪ್ರವೇಶಿಸಿ ಕಬ್ಬಿಣದ ಟ್ರಜರಿಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ದರೋಡೆಕೋರರು ತಮ್ಮ ಗುರುತು ಸಿಗದಂತೆ ಮಾಡಲು ಬ್ಯಾಂಕಿನಲ್ಲಿ ಅಳವಡಿಸಿದ್ದ ಸಿ.ಸಿ.ಟಿವಿ ಕ್ಯಾಮೆರಾದ ಎನ್.ವಿ.ಆರ್. ಯನ್ನೂ ತೆಗೆದುಕೊಂಡು ಹೋಗಿದ್ದಾರೆ. ದರೋಡೆಕೋರರ ಪತ್ತೆಗಾಗಿ ಎಂಟು ತಂಡಗಳನ್ನು ರಚಿಸಲಾಗಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಕೆನರಾ ಬ್ಯಾಂಕ್  ಶಾಖೆಯಲ್ಲಿ 59 ಕೆ.ಜಿ. ಚಿನ್ನಾಭರಣ ಹಾಗೂ ರೂ. 5.20 ಲಕ್ಷ ಹಣವನ್ನು ದರೋಡೆ ಮಾಡಲಾಗಿದೆ. ಮೇ 23ರಿಂದ 25ರ ನಡುವೆ ಬ್ಯಾಂಕಿನ ದರೋಡೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮೇ 26ರಂದು ಬ್ಯಾಂಕಿನ ಸೀನಿಯರ್ ಮ್ಯಾನೇಜರ್ ಕಲ್ಮೇಶ ಪೂಜಾರಿ ದೂರು ನೀಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ.

ಬ್ಯಾಂಕಿನ ಮುಖ್ಯ ದ್ವಾರದ ಶೆಟರ್ಸ್ ಗೆ ಹಾಕಿದ ಕೀಲಿ ಮತ್ತು ಕಿಟಕಿಯ ಸರಳುಗಳನ್ನು ಮುರಿದು ದರೋಡೆಕೋರರು ಒಳಗೆ ಪ್ರವೇಶಿಸಿದ್ದಾರೆ. ಬಂಗಾರದ ಆಭರಣ ಹಾಗೂ ನಗದು ಇರಿಸಿದ್ದ ಸೇಪ್ ಲಾಕರ್ ನ ಕೀಲಿ ತೆಗೆದು ಅದರ ಒಳಗೆ ಇರುವ ಕಬ್ಬಿಣದ ಬಾಗಿಲಿನ ಸರಳುಗಳನ್ನು ಕತ್ತರಿಸಿ ಒಳಗೆ ಪ್ರವೇಶಿಸಿ ಕಬ್ಬಿಣದ ಟ್ರಜರಿಯಲ್ಲಿದ್ದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.

ದರೋಡೆಕೋರರು ತಮ್ಮ ಗುರುತು ಸಿಗದಂತೆ ಮಾಡಲು ಬ್ಯಾಂಕಿನಲ್ಲಿ ಅಳವಡಿಸಿದ್ದ ಸಿ.ಸಿ.ಟಿವಿ ಕ್ಯಾಮೆರಾದ ಎನ್.ವಿ.ಆರ್. ಯನ್ನೂ ತೆಗೆದುಕೊಂಡು ಹೋಗಿದ್ದಾರೆ. ದರೋಡೆಕೋರರ ಪತ್ತೆಗಾಗಿ ಎಂಟು ತಂಡಗಳನ್ನು ರಚಿಸಲಾಗಿದ್ದು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

More articles

Latest article

Most read