ಬೆಂಗಳೂರು: ರಾಜ್ಯ ವಿಧಾನ ಪರಿಷತ್ತಿನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಪ್ರಕಟಿಸಿದೆ. 2026ರ ನವೆಂಬರ್ ನಲ್ಲಿ ಈ ಚುನಾವಣೆಗಳು ನಡೆಯಲಿವೆ. 4 ಅಭ್ಯರ್ಥಿಗಳ ಆಯ್ಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿದ್ದಾರೆ.
ಅಭ್ಯರ್ಥಿಗಳ ಆಯ್ಕೆ ಹೀಗಿದೆ:
ಬೆಂಗಳೂರು ಶಿಕ್ಷಕರ ಕ್ಷೇತ್ರ– ಪುಟ್ಟಣ್ಣ
ಈಶಾನ್ಯ ಶಿಕ್ಷಕರ ಕ್ಷೇತ್ರ– ಶರಣಪ್ಪ ಮತ್ತೂರ್
ಪಶ್ಚಿಮ ಪದವೀದರ ಕ್ಷೇತ್ರ– ಮೋಹನ್ ಲಿಂಬಿಕಾಯಿ
ಆಗ್ನೇಯ ಪದವೀಧರ ಕ್ಷೇತ್ರ– ಶಶಿ ಹುಲಿಕುಂಟೆಮಠ

