CATEGORY

ರಾಜ್ಯ

ಟಾಟಾ ಪವರ್ ಅರ್ಜಿ ದಾಖಲೆಗಳು ಕನ್ನಡದಲ್ಲಿಯೂ ಇರಲಿ : ಪುರುಷೋತ್ತಮ ಬಿಳಿಮಲೆ ಆಗ್ರಹ

ಬೆಂಗಳೂರು :  ಕರ್ನಾಟಕದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಪಡೆಯಲು ಟಾಟಾ ಪವರ್ ಸಂಸ್ಥೆ ಸಲ್ಲಿಸಿರುವ ಅರ್ಜಿ ನಮೂನೆಗಳು, ಅನುಬಂಧಗಳು ಹಾಗೂ ಸಂಬಂಧಿತ ಎಲ್ಲ ಮಾಹಿತಿ ದಾಖಲೆಗಳು ಸಂಪೂರ್ಣವಾಗಿ ಆಂಗ್ಲಭಾಷೆಯಲ್ಲಿದ್ದು, ಅಸಂಖ್ಯ...

ಕೆರೆಗೆ ವೈದ್ಯಕೀಯ ತ್ಯಾಜ್ಯ ಹಾಕಿದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಈಶ್ವರ ಖಂಡ್ರೆ ಆದೇಶ

ನೆಲಮಂಗಲ : ಕೆರೆಗಳು, ನದಿ, ಸರೋವರ ಸೇರಿದಂತೆ ಜಲ ಮೂಲಗಳಿಗೆ ವೈದ್ಯಕೀಯ ತ್ಯಾಜ್ಯ, ಇ-ತ್ಯಾಜ್ಯ ಸುರಿದು ಕಲುಷಿತಗೊಳಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ...

1500 ಕ್ಕೂ ಹೆಚ್ಚು ಅಸಹಜ ಸಾವಿನ ಪ್ರಕರಣಗಳನ್ನು ಪರಿಶೀಲಿಸುತ್ತಿರುವ ವಿಶೇಷ ತನಿಖಾ ತಂಡ

ಬೆಂಗಳೂರು :  ಧರ್ಮಸ್ಥಳದಲ್ಲಿ ನಡೆದ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ 1,500 ಕ್ಕೂ ಹೆಚ್ಚು ಅಸಹಜ ಸಾವಿನ ಪ್ರಕರಣಗಳನ್ನು ಪರಿಶೀಲಿಸಲಾಗುತ್ತಿದೆ ಎಂದು   ರಾಜ್ಯ ಮಹಿಳಾ ಆಯೋಗಕ್ಕೆ...

ಕೋಲಾರ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ

ಕೋಲಾರ : ಇಲ್ಲಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಿಗೆ ಇ-ಮೈಲ್ ಮುಖಾಂತರ ಬಾಂಬ್‌ ಬೆದರಿಕೆಯ ಇ-ಮೇಲ್ ಸಂದೇಶವೊಂದು ಬಂದಿದ್ದು ಬಾಂಬ್ ನಿಷ್ಕ್ರಿಯ ದಳ ಇಡೀ ನ್ಯಾಯಾಲಯದ ಶೋಧ ಕಾರ್ಯ ನಡೆಯುತ್ತಿದೆ. ಬೆಳಗ್ಗೆ ಕಾರ್ಯಕಲಾಪಗಳು ಪ್ರಾರಂಭವಾಗುತ್ತಿದ್ದಂತೆ...

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸರ್ವಾನುಮತದ ಅಂಗೀಕಾರ

ಚೆನ್ನೈ: ಕರ್ನಾಟಕವು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ವಿರೋಧಿಸಿ ಮುಖ್ಯಮಂತ್ರಿ ಸಿ ಜೋಸೆಫ್ ವಿಜಯ್ ಮಂಡಿಸಿದ ನಿರ್ಣಯವನ್ನು ತಮಿಳುನಾಡು ವಿಧಾನಸಭೆ ಶುಕ್ರವಾರ ಸರ್ವಾನುಮತದಿಂದ ಅಂಗೀಕರಿಸಿದೆ. ಈ ಯೋಜನೆಗೆ ಯಾವುದೇ ತಾಂತ್ರಿಕ...

ಜಿಗಜಿಣಗಿಯ “ದಲಿತ ಮನುಷ್ಯ” ಎಂಬ ಧ್ವನಿಯ ಸುತ್ತ….

ಜಿಗಜಿಣಗಿಯವರ ಆರೆಸ್ಸೆಸ್‌ ಮನಸ್ಥಿತಿ ಎಷ್ಟು ಕರ್ಮಠದ್ದೆನ್ನುವುದಕ್ಕೆ ಒಂದು ನಿದರ್ಶನವುಂಟು. ಕಳೆದ ಲೋಕಸಭಾ ಚುನಾವಣೆಯ ಪ್ರಚಾರದ ಸಮಯದಲ್ಲಿ ಅವರು, ‘ನಾನು ಸಂಸದನಾಗಿದ್ದರೂ, ಮೇಲ್ಜಾತಿ ಜನರ ಮನಸಿಗೆ ಬೇಸರವಾಗಬಾರದೆಂಬ ಕಾರಣಕ್ಕೆ ದೇವಸ್ಥಾನಗಳಿಗೆ ಭೇಟಿ ನೀಡಿದಾಗ, ಒಳಹೋಗದೆ...

ಪಕ್ಷ ಬಿಡುವವರು ಬಿಟ್ಟು ಹೋಗಲಿ, ಜೆನ್ ಝಿಗಳಿಂದ ಪಕ್ಷ ಕಟ್ಟುತ್ತೇನೆ : ಹೆಚ್‌.ಡಿ.ಕುಮಾರಸ್ವಾಮಿ

ಮೈಸೂರು: ಪಕ್ಷ ಬಿಟ್ಟುಹೋಗುವವರು ಹೋಗಲು, ಜೆನ್ ಝಿ ಗಳನ್ನು ಪಕ್ಷಕ್ಕೆ ಕರೆದುಕೊಂಡು ಬಂದು ಪಕ್ಷ ಕಟ್ಟುತ್ತೇನೆ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹೇಳೀದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,  ಅಡ್ಡ ಮತದಾನ ನನಗೆ ಅಚ್ಚರಿ ತಂದಿಲ್ಲ....

ಜೂ. 20 ರಿಂದ ಜು.12 ರವರೆಗೆ  ಮಹಾರಾಜ ಟ್ರೋಫಿ , ಮೈಸೂರು ವಾರಿಯರ್ಸ್ ಗೆ ವೈಶಾಖ್ ವಿಜಯ್ ಕುಮಾರ್ ನಾಯಕ

ಮೈಸೂರು: ಬಹುನಿರೀಕ್ಷಿತ ಮಹಾರಾಜ ಟ್ರೋಫಿ ಕೆಎಸ್‌ಸಿಎ ಟಿ20 ಟೂರ್ನಿಯು  ಜೂನ್ 20 ರಿಂದ ಜುಲೈ 12 ರವರೆಗೆ ನಡೆಯಲಿದೆ. ಇದರ ಅಧಿಕೃತ ಗೀತೆಯನ್ನು ಮೈಸೂರಿನಲ್ಲಿ ಬಿಡುಗಡೆ ಮಾಡಲಾಯಿತು. ಮೈಸೂರು ವಾರಿಯರ್ಸ್ ತಂಡ ಪ್ರಕಟಲಾಗಿದೆ. ತಂಡದ ನಾಯಕನಾಗಿ ವೈಶಾಖ್ ವಿಜಯ್ ಕುಮಾರ್ ಆಯ್ಕೆಯಾಗಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಹಾಗೂ ಕೆಎಸ್‌ಸಿಎ ಮಾಜಿ ಕಾರ್ಯದರ್ಶಿ ಜಾವಗಲ್ ಶ್ರೀನಾಥ್, ಕೆಎಸ್‌ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಮತ್ತು ಮೈಸೂರು ವಲಯದ ಸಂಚಾಲಕ ಶ್ರೀನಿವಾಸ್ ಪ್ರಸಾದ್ ಅವರೊಂದಿಗೆ ಸೇರಿ ಈ ಗೀತೆಯನ್ನು ಬಿಡುಗಡೆ ಮಾಡಿದರು. ಬಳಿಕ ಮಾತನಾಡಿದ ಜಾವಗಲ್ ಶ್ರೀನಾಥ್, ಮಹಾರಾಜ ಟ್ರೋಫಿಯು ಪ್ರಾದೇಶಿಕ ಪ್ರತಿಭೆಗಳಿಗೆ ಸದಾ ಅತ್ಯುತ್ತಮ ವೇದಿಕೆಯನ್ನು ಒದಗಿಸುತ್ತಾ ಬಂದಿದೆ. ಈ ಹೊಸ  ಅಧಿಕೃತ ಗೀತೆಯ ಹಿಂದಿರುವ ಉತ್ಸಾಹವನ್ನು ನೋಡಿದರೆ,2026 ರ ಸೀಸನ್ ಕರ್ನಾಟಕದಾದ್ಯಂತ ಸ್ಪರ್ಧಾತ್ಮಕ ಕ್ರಿಕೆಟ್ ಮತ್ತು ಅಭಿಮಾನಿಗಳ ಮನರಂಜನೆಯಲ್ಲಿ ಒಂದು ಹೊಸ ಮೈಲಿಗಲ್ಲನ್ನು ಸೃಷ್ಟಿಸಲಿದೆ ಎಂಬ ಸಂಪೂರ್ಣ ವಿಶ್ವಾಸ ನನಗಿದೆ ಎಂದರು. ಕೆಎಸ್‌ಸಿಎ ಕಾರ್ಯದರ್ಶಿ ಸಂತೋಷ್ ಮೆನನ್ ಅವರು,ಗ್ರಾಮೀಣ ಮಟ್ಟದ ಪ್ರತಿಭೆಗಳು ಮತ್ತು ವೃತ್ತಿಪರ ಕ್ರಿಕೆಟ್ ವೇದಿಕೆಯ ನಡುವಿನ ಅಂತರವನ್ನು ಕಡಿಮೆ ಮಾಡುವುದು ಕೆಎಸ್‌ ಸಿಎನಲ್ಲಿ ನಮ್ಮ ಪ್ರಮುಖ ಗುರಿಯಾಗಿದೆ. ಈ ಗೀತೆಯು ಕರ್ನಾಟಕದ ಕ್ರಿಕೆಟ್ ಜಗತ್ತಿನ ಚೇತನ, ಹಸಿವು ಮತ್ತು ಉತ್ಸಾಹವನ್ನು ಪ್ರತಿಬಿಂಬಿಸುತ್ತದೆ, ಇದು ವರ್ಷದಿಂದ ವರ್ಷಕ್ಕೆ ಮತ್ತಷ್ಟು ಬಲಗೊಳ್ಳುತ್ತಿದೆ  ಎಂದು ತಿಳಿಸಿದರು. ಮೈಸೂರು ವಲಯದ ಸಂಚಾಲಕ ಶ್ರೀನಿವಾಸ್ ಪ್ರಸಾದ್ ಮಾತನಾಡಿ,ಮೈಸೂರಿಗೆ ಕ್ರೀಡೆಯ ಬಗ್ಗೆ ಅಪಾರ ಪ್ರೀತಿಯಿದೆ. ಈ ಬಾರಿಯ ಆವೃತ್ತಿಯ ಮೊದಲ ಹಂತದ ಪಂದ್ಯಗಳಿಗೆ ನಮ್ಮ ನಗರ ಆತಿಥ್ಯ ವಹಿಸುತ್ತಿರುವುದು ನಮಗೆ ಸಿಕ್ಕ ಗೌರವವಾಗಿದೆ. ನಮ್ಮ ಸಾಂಸ್ಕೃತಿಕ ರಾಜಧಾನಿಯಲ್ಲಿಯೇ ಟೂರ್ನಿಯ ಅಧಿಕೃತ ಗೀತೆಯನ್ನು ಅನಾವರಣಗೊಳಿಸಿರುವುದು ಇಡೀ ಕ್ರಿಕೆಟ್ ಹಬ್ಬಕ್ಕೆ ಅತ್ಯಂತ ರೋಮಾಂಚಕ ಮುನ್ನುಡಿಯನ್ನು ಬರೆದಿದೆ ಎಂದರು. ಈ ಸಂದರ್ಭದಲ್ಲಿ ಸೈಕಲ್ ಪ್ಯೂರ್ ಅಗರಬತ್ತಿ ಪ್ರಾಯೋಜಕತ್ವದ ಹಾಗೂ ಎನ್.ಆರ್. ಗ್ರೂಪ್ ಒಡೆತನದ ಮೈಸೂರು ವಾರಿಯರ್ಸ್ ತಂಡವು ಮುಂಬರುವ ಸೀಸನ್‌ ಗಾಗಿ ತನ್ನ ಬಹುನಿರೀಕ್ಷಿತ ತಂಡವನ್ನು ಅಧಿಕೃತವಾಗಿ ಘೋಷಿಸಿತು. ಕರ್ನಾಟಕ ಮತ್ತು ಐಪಿಎಲ್‌ ನ ಪ್ರಸಿದ್ಧ ವೇಗದ ಬೌಲರ್ ವೈಶಾಖ್ ವಿಜಯ್ ಕುಮಾರ್ ಅವರಿಗೆ ಈ ಸೀಸನ್‌ ನಲ್ಲಿ ತಂಡವನ್ನು ಮುನ್ನಡೆಸುವ ನಾಯಕತ್ವದ  ಜವಾಬ್ದಾರಿನೀಡಲಾಗಿದೆ ಎಂದು ಫ್ರಾಂಚೈಸಿ ಘೋಷಿಸಿತು. ವೈಶಾಖ್ ಅವರು ತಮ್ಮ ದೇಶಿ ಮತ್ತು ಐಪಿಎಲ್ ಕ್ರಿಕೆಟ್‌ ನ ಅಪಾರ ಅನುಭವವನ್ನು ತಂಡಕ್ಕೆ ಧಾರೆ ಎರೆಯಲಿದ್ದು, ತಂಡದ ಯುವ ಆಟಗಾರರಿಗೆ ಮಾರ್ಗದರ್ಶಕರಾಗಿಯೂ ದ್ವಿಪಾತ್ರ ನಿರ್ವಹಿಸಲಿದ್ದಾರೆ. ಮುಖ ಆಟಗಾರರು: ಅಂತರರಾಷ್ಟ್ರೀಯ ತಾರೆ ದೇವದತ್ ಪಡಿಕ್ಕಲ್, ಆಕ್ರಮಣಕಾರಿ ಆಲ್ ರೌಂಡರ್ ಮನೋಜ್ ಭಾಂಡಗೆ, ಚೇತನ್ ಎಲ್.ಆರ್. ಮತ್ತು ರಿತೇಶ್ ಭಟ್ಕಲ್. ಈ ಸೀಸನ್‌ ನಲ್ಲಿ ಗ್ರಾಮೀಣ ಮತ್ತು ತಳಮಟ್ಟದ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಫ್ರಾಂಚೈಸಿ ವಿಶೇಷ ಒತ್ತು ನೀಡಿದೆ. ಹೊಸ ತಂಡದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಸೈಕಲ್ ಪ್ಯೂರ್ ಅಗರಬತ್ತಿಯ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮೈಸೂರು ವಾರಿಯರ್ಸ್ ತಂಡದ ಮಾಲೀಕ ಅರ್ಜುನ್ ರಂಗ ಅವರು, ಈ ವರ್ಷದ ತಂಡವು ಕರ್ನಾಟಕ ಕ್ರಿಕೆಟ್‌ನ ಉಜ್ವಲ ಭವಿಷ್ಯವನ್ನು ಪ್ರತಿಬಿಂಬಿಸುತ್ತದೆ. ಯುವ ಆಟಗಾರರಲ್ಲಿ ಗೆಲ್ಲುವ ಹಸಿವು ಎದ್ದು ಕಾಣುತ್ತಿದೆ. ಗ್ರಾಮೀಣ ಮಟ್ಟದಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿರುವ ಪ್ರತಿಭೆಗಳಿಗೆ ಇಂತಹ ಪ್ರಮುಖ ವೇದಿಕೆಯನ್ನು ಕಲ್ಪಿಸಿಕೊಡಲು ನಾವು ಹೆಮ್ಮೆಪಡುತ್ತೇವೆ,” ಎಂದು ಹೇಳಿದರು. ಮುಖ್ಯ ಕೋಚ್ ಆರ್.ಎಕ್ಸ್ ಮುರಳೀಧರ್ ಅವರು ತಂಡದ ಕಾರ್ಯತಂತ್ರದ ಬಗ್ಗೆ ಇದೇ ರೀತಿಯ ಆಶಾವಾದವನ್ನು ವ್ಯಕ್ತಪಡಿಸಿ, “ನಮ್ಮ ತಂಡವು ಅನುಭವ ಮತ್ತು ಯುವ ಶಕ್ತಿಯ ಪರಿಪೂರ್ಣ ಸಮತೋಲನವನ್ನು ಹೊಂದಿದೆ. ವೈಶಾಖ್ ಅವರಂತಹ ನಾಯಕನ ನೇತೃತ್ವದಲ್ಲಿ ನಮ್ಮ ತಂಡವು ಈ ಸೀಸನ್‌ನಲ್ಲಿ ಅತ್ಯಂತ ಸಕಾರಾತ್ಮಕ ಮತ್ತು ನಿರ್ಭೀತ ಕ್ರಿಕೆಟ್ ಆಡಲಿದ್ದು, ಅಭಿಮಾನಿಗಳಿಗೆ ಭರಪೂರ ಮನರಂಜನೆ ನೀಡಲಿದೆ ಎಂದು ತಿಳಿಸಿದರು. ನಾಯಕತ್ವದ ಜವಾಬ್ದಾರಿಯನ್ನು ಸ್ವೀಕರಿಸಿದ ನಾಯಕ ವೈಶಾಖ್ ವಿಜಯ್ ಕುಮಾರ್ ಅವರು ತಮ್ಮ ತಂಡದ ಮೇಲೆ ಅಪಾರ ವಿಶ್ವಾಸ ವ್ಯಕ್ತಪಡಿಸಿದ್ದು, ಮೈಸೂರು ನಗರವು ಹೆಮ್ಮೆಪಡುವಂತಹ ಕ್ರಿಕೆಟ್ ಪ್ರದರ್ಶನವನ್ನು ನೀಡುವುದಾಗಿ ಭರವಸೆ ನೀಡಿದರು. ಮೈಸೂರಿನಲ್ಲಿ ಆರಂಭ ಟೂರ್ನಿಯು ಮೈಸೂರಿನಲ್ಲಿ ಪ್ರಾರಂಭವಾಗಿ ನಂತರ ಹುಬ್ಬಳ್ಳಿ ಮತ್ತು ಬೆಂಗಳೂರಿಗೆ ಸ್ಥಳಾಂತರಗೊಳ್ಳಲಿದ್ದು, ಕರ್ನಾಟಕದಾದ್ಯಂತ ಇರುವ ಅಭಿಮಾನಿಗಳಿಗೆ ಉನ್ನತ ಗುಣಮಟ್ಟದ ಕ್ರಿಕೆಟ್ ರಸದೌತಣವನ್ನು ಉಣಬಡಿಸಲಿದೆ. ಕ್ರಿಕೆಟ್ ಪ್ರೇಮಿಗಳು ಜೂನ್ 20 ರಿಂದ ಜುಲೈ 12,  ರವರೆಗೆ ನಡೆಯುವ ಎಲ್ಲಾ ಪಂದ್ಯಗಳನ್ನು ಕಣ್ಣುಂಬಿಕೊಳ್ಳಬಹುದು.  ಪಂದ್ಯಗಳ ಟಿಕೆಟ್‌ಗಳು ಡಿಸ್ಟ್ರಿಕ್ಟ್ ಬೈ ಜೊಮ್ಯಾಟೋ ಆಪ್‌ನಲ್ಲಿ ಲಭ್ಯವಿರುತ್ತವೆ.

14 ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರಕಾರವು 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಬಿಡಿಎ ಆಯುಕ್ತ ಮೇಜರ್ ಪಿ.ಮಣಿವಣ್ಣನ್ ಅವರಿಗೆ ನಗರ ಭೂ ಸಾರಿಗೆ ನಿರ್ದೇಶನಾಲಯದ ಆಯುಕ್ತರ ಹುದ್ದೆಯ...

ಇರುವ ವ್ಯವಸ್ಥೆಯಲ್ಲೇ ಪರಿಣಾಮಕಾರಿಯಾಗಿ ಕೆಲಸ ಮಾಡಿ, ಕಸದ ಸಮಸ್ಯೆ ನಿವಾರಿಸಲು ಸಚಿವ ಕೃಷ್ಣ ಬೈರೇಗೌಡ ಸೂಚನೆ

ಬೆಂಗಳೂರು : ನಗರದಲ್ಲಿನ ಕಸದ ಸಮಸ್ಯೆ ನಿವಾರಣೆಗಾಗಿ ಈಗಿರುವ ವ್ಯವಸ್ಥೆಯನ್ನೇ ಪರಿಣಾಮಕಾರಿಯಾಗಿ ಬಳಸಿಕೊಂಡು ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ  ಕೃಷ್ಣ ಬೈರೇಗೌಡ  ತಿಳಿಸಿದರು. ಗ್ರೇಟರ್ ಬೆಂಗಳೂರು...

Latest news