ಚಾಮರಾಜನಗರ ಶೂಟೌಟ್ ಪ್ರಕರಣ ಫೈರಿಂಗ್ ಮಾಡಿದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆತರುವಂತೆ ಮೃತರ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ
ಹನೂರಿನಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು ಮಲೆಮಹದೇಶ್ವರ ಬೆಟ್ಟದ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಪೋಲೀಸರು ಮತ್ತು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದ್ದು ಪ್ರತಿಭಟನಾಕಾರರು ಪೋಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸ್ಥಳಕ್ಕೆ ಆಗಮಿಸಬೇಕು, ಶೂಟೌಟ್ ಮಾಡಿದವರ ಹೆಸರು ಬಹಿರಂಗಪಡಿಸಬೇಕು ಅಲ್ಲಿಯ ವರೆಗೂ ಮರಣೋತ್ತರ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.
ಈ ನಡುವೆ ತಹಸೀಲ್ದಾರರು ಮನವೊಲಿಸಿದ ನಂತರ ಎರಡು ಮೃತ ದೇಹಗಳ ಕುಟುಂಬಸ್ಥರು ಮೃತ ದೇಹಗಳ ಪಂಚನಾಮೆಗೆ ಒಪ್ಪಿದ್ದಾರೆ ಎನ್ನಲಾಗಿದೆ.

