ಬಿಜೆಪಿ ಮೇಲ್ಮನೆ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಎನ್. ರವಿಕುಮಾರ್ ವಿರುದ್ಧ ಸಭಾಪತಿಗೆ ಕಾಂಗ್ರೆಸ್‌ ದೂರು

Most read

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಬಿಜೆಪಿ ವಿಧಾನಪರಿಷತ್‌ ಸದಸ್ಯ  ಎನ್. ರವಿಕುಮಾರ್ ವಿರುದ್ಧ ಕಾಂಗ್ರೆಸ್​ ನಾಯಕರು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ದೂರು ನೀಡಿದ್ದಾರೆ.

ಮೇಲ್ಮನೆ ಸದಸ್ಯರಾದ ಪುಟ್ಟಣ್ಣ, ಸಲೀಂ ಅಹಮದ್, ಕೆ.ಗೋವಿಂದರಾಜು, ಸುಧಾಮ್ ದಾಸ್, ಶ್ರೀನಿವಾಸ್ ಅವರ ನಿಯೋಗ ದೂರು ನೀಡಿದೆ. ಎನ್. ರವಿಕುಮಾರ್ ಅವರು ಸರ್ಕಾರಿ ಅಧಿಕಾರಿಗೆ ಪಾಕಿಸ್ತಾನಿ ಎಂದು ನಿಂದಿಸಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಅವರು ಸಚಿವ ಪ್ರಿಯಾಂಕ್ ಖರ್ಗೆ ಅವರನು ನಿಂದಿಸಿದ್ದಾರೆ. ಆದ್ದರಿಂದ ಕೂಡಲೇ ಇಬ್ಬರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಪಡಿಸಿದ್ದಾರೆ.

ನಂತರ ಮಾತನಾಡಿದ ಸಲೀಂ ಅಹಮದ್, ಛಲವಾದಿ ನಾರಾಯಣಸ್ವಾಮಿ ಹಾಗೂ ರವಿಕುಮಾರ್ ಅವರ ಮಾತುಗಳು ಸಮಂಜಸವಲ್ಲ. ಇಬ್ಬ ವಿರುದ್ಧ ಕ್ರಮ ಜರುಗಿಸಬೇಕು ಎಂದು ಮನವಿ ಸಲ್ಲಿಸಿದ್ದೇವೆ. ಸಭಾಪತಿಗಳು ಕ್ರಮದ ಭರವಸೆ ನೀಡಿದ್ದಾರೆ ಎಂದರು.

ಕಾಂಗ್ರೆಸ್​ ನಾಯಕರು ದೂರು ನೀಡಿದ್ದು, ಸ್ವೀಕರಿಸಿದ್ದೇನೆ. ಸದನದ ನಿಯಮಗಳನ್ನ ಪರಿಶೀಲಿಸಿ ಮುಂದುವರೆಯುತ್ತೇನೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

More articles

Latest article