ಬೆಂಗಳೂರು: ಪಹಲ್ಗಾಮ್ ನರಮೇಧಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಸೇನೆಗೆ ಬೆಂಬಲ ವ್ಯಕ್ತಪಡಿಸಿ ಬೆಂಗಳೂರಿನ ಕೆ ಆರ್ ಸರ್ಕಲ್ ನಿಂದ ಮಿನ್ಸ್ಕ್ ಚೌಕದವರೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಇಂದು ತಿರಂಗಾ ಯಾತ್ರೆ ನಡೆಸಲಾಯಿತು.
ಸಚಿವರಾದ ಎಚ್ ಕೆ ಪಾಟೀಲ್, ಡಾ ಜಿ ಪರಮೇಶ್ವರ್, ಕೆ ಎಚ್ ಮುನಿಯಪ್ಪ, ಡಾ.ಎಚ್.ಸಿ.ಮಹದೇವಪ್ಪ, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಡಾ ಎಂ ಸಿ ಸುಧಾಕರ್, ಬೋಸರಾಜು, ಕೃಷ್ಣ ಭೈರೇಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಶಾಸಕಾರದ ರಿಜ್ವಾನ್ ಆರ್ಷದ್, ಯುವ ಕಾಂಗ್ರೆಸ್ ಅಧ್ಯಕ್ಷ ಹೆಚ್ ಎಸ್ ಮಂಜುನಾಥ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ, ಮತ್ತಿತರರು ಭಾಗವಹಿಸಿದ್ದರು.
ಸರಕಾರಿ, ಖಾಸಗಿ ಉದ್ದಿಮೆಗಳ ಅಧಿಕಾರಿಗಳು, ನೌಕರರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಾವಿರಾರು ವಿದ್ಯಾರ್ಥಿಗಳು ಯಾತ್ರೆಯಲ್ಲಿ ಹೆಜ್ಜೆ ಹಾಕಿದರು.