Saturday, July 27, 2024

ಬಿಜೆಪಿ ನಾಯಕರ ಪೋಸ್ಟರ್ ಬಿಡುಗಡೆ ಮಾಡಿದ ಕಾಂಗ್ರೆಸ್

Most read

ಬಿಜೆಪಿ ನಾಯಕರ ಹಳೇ ಹಗರಣಗಳನ್ನು ಉಲ್ಲೇಖಿಸಿ, ರಾಜ್ಯಕಾಂಗ್ರೆಸ್ ಪೋಸ್ಟರ್‌ ಬಿಡುಗಡೆ ಮಾಡಿದೆ. ʼನಾನು ಕರಸೇವಕ ನನ್ನನ್ನು ಬಂಧಿಸಿʼ ಎಂದು ಪೋಸ್ಟರ್‌ ಹಿಡಿದು ಕುಳಿತಿದ್ದ ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ತಿರುಗೇಟು ನೀಡಿದೆ.

ಸಾಮಾಜಿಕ ಜಾಲತಣದಲ್ಲಿ ಪೋಸ್ಟರ್‌ ಹಂಚಿಕೊಂಡಿರುವ ರಾಜ್ಯ ಕಾಂಗ್ರೆಸ್‌, ಹಳೇ ಹಗರಣಗಳನ್ನು ಬಿಜೆಪಿ ನಾಯಕರು ಹಿಡಿದ ಪೋಸ್ಟರ್‌ನಲ್ಲಿ ಉಲ್ಲೇಖಿಸಿ ಲೇವಡಿ ಮಾಡಿದೆ. ಬಿಜೆಪಿಯಲ್ಲಿ ಶುರುವಾಗಿದ್ದ ಕರಸೇವಕ ಅಭಿಯಾನಕ್ಕೆ ಕಾಂಗ್ರೆಸ್ ಟಕ್ಕರ್ ಕೊಟ್ಟಿದೆ.

ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ವಿ. ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಸಿ.ಟಿ.ರವಿ ಅವರ ಪೋಸ್ಟರ್ ಅವರಿಗೆ ಟ್ಯಾಗ್ ಮಾಡಿ ತಿರುಗೇಟು ಕೊಟ್ಟಿದೆ.

More articles

Latest article