ಕಾವೇರಿಯ ವರಪುತ್ರನನ್ನು ನಾಡು ಕಳೆದುಕೊಂಡಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ರಾಜ್ಯ ಮತ್ತು ಬೆಂಗಳೂರಿಗೆ ಅವರು ನೀಡಿದ ಕೊಡುಗೆಯನ್ನು ಅವರು ಸ್ಮರಿಸಿದ್ದಾರೆ. ಕಾವೇರಿ ನೀರಿನ ವಿಚಾರದಲ್ಲಿ ಅಧಿಕಾರ ಹೋದರೂ ಚಿಂತೆಯಲ್ಲ ಎಂದು ಹೋರಾಟ ಮಾಡಿದ ಹೋರಾಟಗಾರ. ಕಾವೇರಿಯ ವರಪುತ್ರನನ್ನು ಕಳೆದುಕೊಂಡಂತಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

ನನ್ನ ರಾಜಕೀಯ ಬದುಕಿನ ಮಾರ್ಗದರ್ಶಕ ಎಸ್. ಎಂ. ಕೃಷ್ಣ, ಅವರ ಅಗಲಿಕೆ ಅಪಾರ ನೋವು ತಂದೊಡ್ಡಿದೆ. ಕರ್ನಾಟಕ ರಾಜಕೀಯ ರಂಗದ ಧೃವ ನಕ್ಷತ್ರ ಕಳಚಿ ಬಿದ್ದಿದೆ ಎಂದು ಅವರು ಮಮ್ಮಲ ಮರುಗಿದ್ದಾರೆ. ಎಸ್. ಎಂ. ಕೃಷ್ಣ ಅವರು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರನ್ನು ಇಡೀ ಜಗತ್ತೇ ತಿರುಗಿ ನೋಡುವಂತೆ ಬದಲಾಯಿಸಿದರು. ಬೆಂಗಳೂರನ್ನು ಸಿಲಿಕಾನ್ ಸಿಟಿ, ಐಟಿ- ಬಿಟಿ ನಗರಿಯನ್ನಾಗಿಸಿ ದೇಶದ ಆರ್ಥಿಕತೆಗೆ ಅತಿದೊಡ್ಡ ಹಾಗೂ ದೂರದೃಷ್ಟಿಯ ಕೊಡುಗೆ ನೀಡಿದವರು ಎಂದು ಸ್ಮರಿಸಿದ್ದಾರೆ. ನಾಡಿನ ಹಲವು ಜನಪರ ಯೋಜನೆಗಳಿಗೆ ಅಡಿಗಲ್ಲು ಹಾಕಿದ ಪ್ರವರ್ತಕ. ಮೆಟ್ರೋ ರೈಲು, ದೇವನಹಳ್ಳಿ ವಿಮಾನ ನಿಲ್ದಾಣ ನಿರ್ಮಾಣದ ಹಿಂದಿನ ಶಕ್ತಿ. ಕೈಗಾರಿಕಾ ಹಾಗೂ ಕೃಷಿ ವಲಯಕ್ಕೆ ಸಮಾನ ಅವಕಾಶಗಳನ್ನು ನೀಡಿ ಅಭಿವೃದ್ಧಿಯಲ್ಲಿಯೂ ಸಮತೋಲನ ಕಾಯ್ದುಕೊಂಡ ಸಮಚಿತ್ತದ ಆಡಳಿತಗಾರ ಎಂದು ಪ್ರಶಂಸಿಸಿದ್ದಾರೆ.

ರಾಜ್ಯದ ವಿಚಾರ ಬಂದಾಗ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಎಲ್ಲಾ ಪಕ್ಷಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತಿದ್ದರು. ಸದಾ ಅಭಿವೃದ್ಧಿ, ರಾಷ್ಟ್ರ ಹಾಗೂ ರಾಜ್ಯದ ಪರವಾಗಿ ಯೋಚನೆ ಮಾಡುತ್ತಿದ್ದ ಕಾಯಕ ಜೀವಿ. ದ್ವಾಪರಯುಗದ ಕೃಷ್ಣನ ಬಗ್ಗೆ ಕೇಳಿದ್ದೇವೆ, ಓದಿದ್ದೇವೆ. ರಾಜಕೀಯ ಮುತ್ಸದ್ದಿಯಾಗಿ ‘ಆ’ ಕೃಷ್ಣನಂತೆ ಈ ಎಸ್.ಎಂ. ಕೃಷ್ಣ ಅವರು ನಮ್ಮ ನಡುವೆ ಬದುಕಿದವರು ಎಂದು ಹೇಳಿದ್ದಾರೆ.

ಅವರ ರಾಜಕೀಯ ಉಚ್ಛಾಯ ಅವಧಿಯಲ್ಲಿ ಅವರ ಜೊತೆಯಾಗಿ ಇದ್ದವನು ನಾನು. ನನಗೆ ರಾಜಕೀಯ ಮಾರ್ಗದರ್ಶಕರಾಗಿದ್ದರು. ಎಡವಿದಾಗ ಕೈ ಹಿಡಿಯುತ್ತಾ, ತಪ್ಪು ಮಾಡಿದಾಗ ತಿದ್ದುತ್ತಾ, ಒಳ್ಳೆಯ ಕೆಲಸ ಮಾಡಿದಾಗ ಬೆನ್ನು ತಟ್ಟುತ್ತಾ ಪ್ರೋತ್ಸಾಹ ನೀಡುತ್ತಿದ್ದರು. ಅವರ ಆಲೋಚನೆಗಳು, ಚಿಂತನೆಗಳು ಹೊಸ ಜನಾಂಗಕ್ಕೆ, ಹಳೆ ತಲೆಮಾರಿನನ್ನು ಬೆಸೆಯುವ ಕೊಂಡಿಯಾಗಿದ್ದವು ಎಂದು ತಿಳಿಸಿದ್ದಾರೆ.

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ರಾಜ್ಯ ಮತ್ತು ಬೆಂಗಳೂರಿಗೆ ಅವರು ನೀಡಿದ ಕೊಡುಗೆಯನ್ನು ಅವರು ಸ್ಮರಿಸಿದ್ದಾರೆ. ಕಾವೇರಿ ನೀರಿನ ವಿಚಾರದಲ್ಲಿ ಅಧಿಕಾರ ಹೋದರೂ ಚಿಂತೆಯಲ್ಲ ಎಂದು ಹೋರಾಟ ಮಾಡಿದ ಹೋರಾಟಗಾರ. ಕಾವೇರಿಯ ವರಪುತ್ರನನ್ನು ಕಳೆದುಕೊಂಡಂತಾಗಿದೆ ಎಂದು ಕಂಬನಿ ಮಿಡಿದಿದ್ದಾರೆ.

ನನ್ನ ರಾಜಕೀಯ ಬದುಕಿನ ಮಾರ್ಗದರ್ಶಕ ಎಸ್. ಎಂ. ಕೃಷ್ಣ, ಅವರ ಅಗಲಿಕೆ ಅಪಾರ ನೋವು ತಂದೊಡ್ಡಿದೆ. ಕರ್ನಾಟಕ ರಾಜಕೀಯ ರಂಗದ ಧೃವ ನಕ್ಷತ್ರ ಕಳಚಿ ಬಿದ್ದಿದೆ ಎಂದು ಅವರು ಮಮ್ಮಲ ಮರುಗಿದ್ದಾರೆ. ಎಸ್. ಎಂ. ಕೃಷ್ಣ ಅವರು ಕೆಂಪೇಗೌಡರು ನಿರ್ಮಿಸಿದ ಬೆಂಗಳೂರನ್ನು ಇಡೀ ಜಗತ್ತೇ ತಿರುಗಿ ನೋಡುವಂತೆ ಬದಲಾಯಿಸಿದರು. ಬೆಂಗಳೂರನ್ನು ಸಿಲಿಕಾನ್ ಸಿಟಿ, ಐಟಿ- ಬಿಟಿ ನಗರಿಯನ್ನಾಗಿಸಿ ದೇಶದ ಆರ್ಥಿಕತೆಗೆ ಅತಿದೊಡ್ಡ ಹಾಗೂ ದೂರದೃಷ್ಟಿಯ ಕೊಡುಗೆ ನೀಡಿದವರು ಎಂದು ಸ್ಮರಿಸಿದ್ದಾರೆ. ನಾಡಿನ ಹಲವು ಜನಪರ ಯೋಜನೆಗಳಿಗೆ ಅಡಿಗಲ್ಲು ಹಾಕಿದ ಪ್ರವರ್ತಕ. ಮೆಟ್ರೋ ರೈಲು, ದೇವನಹಳ್ಳಿ ವಿಮಾನ ನಿಲ್ದಾಣ ನಿರ್ಮಾಣದ ಹಿಂದಿನ ಶಕ್ತಿ. ಕೈಗಾರಿಕಾ ಹಾಗೂ ಕೃಷಿ ವಲಯಕ್ಕೆ ಸಮಾನ ಅವಕಾಶಗಳನ್ನು ನೀಡಿ ಅಭಿವೃದ್ಧಿಯಲ್ಲಿಯೂ ಸಮತೋಲನ ಕಾಯ್ದುಕೊಂಡ ಸಮಚಿತ್ತದ ಆಡಳಿತಗಾರ ಎಂದು ಪ್ರಶಂಸಿಸಿದ್ದಾರೆ.

ರಾಜ್ಯದ ವಿಚಾರ ಬಂದಾಗ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಎಲ್ಲಾ ಪಕ್ಷಗಳನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತಿದ್ದರು. ಸದಾ ಅಭಿವೃದ್ಧಿ, ರಾಷ್ಟ್ರ ಹಾಗೂ ರಾಜ್ಯದ ಪರವಾಗಿ ಯೋಚನೆ ಮಾಡುತ್ತಿದ್ದ ಕಾಯಕ ಜೀವಿ. ದ್ವಾಪರಯುಗದ ಕೃಷ್ಣನ ಬಗ್ಗೆ ಕೇಳಿದ್ದೇವೆ, ಓದಿದ್ದೇವೆ. ರಾಜಕೀಯ ಮುತ್ಸದ್ದಿಯಾಗಿ ‘ಆ’ ಕೃಷ್ಣನಂತೆ ಈ ಎಸ್.ಎಂ. ಕೃಷ್ಣ ಅವರು ನಮ್ಮ ನಡುವೆ ಬದುಕಿದವರು ಎಂದು ಹೇಳಿದ್ದಾರೆ.

ಅವರ ರಾಜಕೀಯ ಉಚ್ಛಾಯ ಅವಧಿಯಲ್ಲಿ ಅವರ ಜೊತೆಯಾಗಿ ಇದ್ದವನು ನಾನು. ನನಗೆ ರಾಜಕೀಯ ಮಾರ್ಗದರ್ಶಕರಾಗಿದ್ದರು. ಎಡವಿದಾಗ ಕೈ ಹಿಡಿಯುತ್ತಾ, ತಪ್ಪು ಮಾಡಿದಾಗ ತಿದ್ದುತ್ತಾ, ಒಳ್ಳೆಯ ಕೆಲಸ ಮಾಡಿದಾಗ ಬೆನ್ನು ತಟ್ಟುತ್ತಾ ಪ್ರೋತ್ಸಾಹ ನೀಡುತ್ತಿದ್ದರು. ಅವರ ಆಲೋಚನೆಗಳು, ಚಿಂತನೆಗಳು ಹೊಸ ಜನಾಂಗಕ್ಕೆ, ಹಳೆ ತಲೆಮಾರಿನನ್ನು ಬೆಸೆಯುವ ಕೊಂಡಿಯಾಗಿದ್ದವು ಎಂದು ತಿಳಿಸಿದ್ದಾರೆ.

More articles

Latest article

Most read