ಸಿದ್ದರಾಮಯ್ಯಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್: ಸಿಎಂ ವಿರುದ್ಧ ವಿಚಾರಣಾ ನ್ಯಾಯಾಲಯಗಳು ವಿಚಾರಣೆ ನಡೆಸುವಂತಿಲ್ಲ- ಹೈಕೋರ್ಟ್‌ ಸೂಚನೆ

Most read

ಮುಡಾ ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ನಡೆಸಿರುವ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನಲ್ಲಿ ಮುಂದಿನ ವಿಚಾರಣೆಯನ್ನು ಆಗಸ್ಟ್‌ 29ಕ್ಕೆ ಮುಂದೂಡಿದೆ ಮತ್ತು ಆಗಸ್ಟ್ 29ರವರೆಗೆ ಸಿಎಂ ವಿರುದ್ಧ ಯಾವುದೇ ವಿಚಾರಣಾ ನ್ಯಾಯಾಲಯಗಳು ವಿಚಾರಣೆ ನಡೆಸುವಂತಿಲ್ಲ ಎಂದು ಆದೇಶ ನೀಡುವ ಮೂಲಕ ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್ ನೀಡಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠದ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಿತು. ಸಿಎಂ ಪರವಾಗಿ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಅಭಿಷೇಕ್ ಮನು ಸಂಘ್ವಿ ವಾದ ಮಂಡಿಸಿದರು.

“ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸಾಂವಿಧಾನಿಕ ತತ್ವಗಳಿಗೆ ವಿರುದ್ಧವಾಗಿದ್ದು, ಇದು ಶಾಸನಬದ್ಧ ಆದೇಶಗಳನ್ನು ಉಲ್ಲಂಘಿಸಲಾಗಿದೆ. ಸಚಿವ ಸಂಪುಟದ ಸಲಹೆಯನ್ನು ರಾಜ್ಯಪಾಲರು ನಿರಾಕರಿಸಿದ್ದಾರೆ. ಯಾವ ಕಾರಣಕ್ಕೆ ಅನುಮತಿ ನೀಡಲಾಗಿದೆ ಎಂಬ ಅಂಶವನ್ನೇ ಅವರು ಇನ್ನು ವಿವರಿಸಿಲ್ಲ. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಕೂಡಿದೆ. ಹಾಗಾಗಿ, ಈ ಅನುಮತಿ ರಾಜಕೀಯ ದುರುದ್ಧೇಶಗಳಿಂದ ಕೂಡಿದೆ ಎಂದು ಪರಿಗಣಿಸಬೇಕು” ಎಂದು ಅವರು ವಾದ ಮಂಡಿಸಿದ್ದಾರೆ. ಈ ಸಂದರ್ಭದಲ್ಲಿ ನ್ಯಾಯಪೀಠ, ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಪಾತ್ರವಿಲ್ಲವೇ” ಎಂದು ಪ್ರಶ್ನಿಸಿತು.

ಇದಕ್ಕೆ ವಕೀಲ ಸಿಂಘ್ವಿ, “ನಿವೇಶನಗಳ ಬದಲಿ ಹಂಚಿಕೆ ಮಾಡಿರುವ ಪ್ರಕ್ರಿಯೆ ಈ ಬಿಜೆಪಿ ಅವಧಿಯಲ್ಲಿ ಇದ್ದಾಗ ನಡೆದಿದೆ. ಸಿದ್ದರಾಮಯ್ಯ ವಿರುದ್ದ ಯಾವುದೇ ದಾಖಲೆಗಳು ಕಂಡು ಬಂದಿಲ್ಲ ಮತ್ತವರ ಪಾತ್ರವಿಲ್ಲ. ಅಲ್ಲದೆ, BNSS ಸೆಕ್ಷನ್ 218ರ ಅಡಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಆದರೆ, ಈ ಸೆಕ್ಷನ್ ಅಡಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕಾದಲ್ಲಿ ನಿರ್ಧಿಷ್ಟ ಅಪರಾದವನ್ನು ಒಳಗೊಂಡಿರಬೇಕು. ಅಲ್ಲದೆ, ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಇದು ನಡೆದಿರಬೇಕು ” ಎಂದು ವಾದಿಸಿದ್ದಾರೆ.

ಅಬ್ರಾಹಂ ದೂರು ಸಲ್ಲಿಸಿದ ದಿನವೇ ರಾಜ್ಯಪಾಲರು ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಆದರೆ, ರಾಜ್ಯಪಾಲರ ಮುಂದೆ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸುಮಾರು 12 ಅರ್ಜಿಗಳು ಬಾಕಿಯಿವೆ. ಇವೆಲ್ಲನ್ನು ಬಿಟ್ಟು ದೂರು ಕೊಟ್ಟ ತಕ್ಷಣದಲ್ಲಿ ನೋಟಿಸಿ ನೀಡಿ ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿರುವುದು ರಾಜಕೀಯ ಉದ್ದೇಶವಾಗಿದೆ” ಎಂದು ವಿವರಿಸಿದ್ದಾರೆ.

ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಮುಂದಿನ ವಿಚಾರಣೆಯನ್ನು ಆಗಸ್ಟ್‌ 29ಕ್ಕೆ ಮುಂದೂಡಲಾಗಿದೆ ಎಂದು ತಿಳಿಸಿದೆ. ಇದರ ಜೊತೆಗೆ ಆ29ರ ವರೆಗೂ ವಿಚಾರಣಾ ನ್ಯಾಯಾಲಯಗಳು ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ತೀರ್ಪು ನೀಡುವಂತಿಲ್ಲ ಎಂದು ಹೇಳಿದೆ.

ಹೈಕೋರ್ಟ್‌ನಲ್ಲಿ ಮುಂದಿನ ವಿಚಾರಣೆಯ ದಿನಾಂಕದವರೆಗೆ ರಾಜ್ಯಪಾಲರ ಅನುಮತಿಯ ಆಧಾರದ ಮೇಲೆ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದಂತೆ ಉಚ್ಛ ನ್ಯಾಯಾಲಯವು ವಿಚಾರಣಾ ನ್ಯಾಯಾಲಯಗಳಿಗೆ ಸೂಚಿಸಿದೆ.

More articles

Latest article