ಅಣೆಕಟ್ಟುಗಳು ಆಧುನಿಕ ಭಾರತದ ದೇವಾಲಯಗಳು : ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ

ಬೆಂಗಳೂರು : ಅಣೆಕಟ್ಟುಗಳು ಆಧುನಿಕ ಭಾರತದ ದೇವಾಲಯಗಳು. ನಮ್ಮ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಅಣೆಕಟ್ಟುಗಳನ್ನು ಆಧುನಿಕ ಭಾರತದ ದೇವಾಲಯಗಳು ಎಂದು ಕರೆದಿದ್ದರು. ಅವು ಕೇವಲ ಕಾಂಕ್ರೀಟ್ ರಚನೆಗಳಲ್ಲ, ಬದಲಿಗೆ ನಮ್ಮ ಕೃಷಿ ಸಮೃದ್ಧಿ ಮತ್ತು ಕೈಗಾರಿಕಾ ಪ್ರಗತಿಯ ಜೀವನಾಡಿಗಳಾಗಿವೆ ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.

ಬೆಂಗಳೂರಿನ ಜೆ.ಎನ್. ಟಾಟಾ ಸಭಾಂಗಣದಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯ, ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಇಲಾಖೆ, ಕೇಂದ್ರ ಜಲ ಆಯೋಗ , ಭಾರತೀಯ ವಿಜ್ಞಾನ ಸಂಸ್ಥೆ   ಮತ್ತು ವಿಶ್ವಬ್ಯಾಂಕ್ ಸಹಯೋಗದಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ  2026ನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿ ಮತ್ತು ದೇವರಾಜ ಅರಸು ಅವರಂತಹ ನಾಯಕರ ನೀರಾವರಿ ಕ್ರಾಂತಿಯನ್ನು ಅವರು ಈ ಸಂದರ್ಭದಲ್ಲಿ ಸ್ಮರಿಸಿದರು.

ಅಣೆಕಟ್ಟು ಸುರಕ್ಷತೆ: ರಾಷ್ಟ್ರೀಯ ಭದ್ರತೆಯ ಆದ್ಯತೆ : ಭಾರತವು ವಿಶ್ವದ ಮೂರನೇ ಅತಿದೊಡ್ಡ ಅಣೆಕಟ್ಟು ಹೊಂದಿರುವ ದೇಶವಾಗಿದ್ದು (6,628 ಅಣೆಕಟ್ಟುಗಳು), ಕರ್ನಾಟಕವು 231 ಅಣೆಕಟ್ಟುಗಳೊಂದಿಗೆ ದೇಶದಲ್ಲೇ ಆರನೇ ಸ್ಥಾನದಲ್ಲಿದೆ. ನಮ್ಮ ದೇಶದ ಶೇ. 70 ರಷ್ಟು ಅಣೆಕಟ್ಟುಗಳು 25 ವರ್ಷಗಳಿಗಿಂತ ಹಳೆಯದಾಗಿವೆ. ಹವಾಮಾನ ಬದಲಾವಣೆಯಿಂದ ಉಂಟಾಗುವ ಹಠಾತ್ ಪ್ರವಾಹ, ಭೂಕಂಪನ ಭೀತಿ ಮತ್ತು ಹೂಳು ತುಂಬುವಿಕೆಯಂತಹ ಸವಾಲುಗಳನ್ನು ಎದುರಿಸಲು ಅಣೆಕಟ್ಟುಗಳ ಸುರಕ್ಷತೆಯನ್ನು ‘ರಾಷ್ಟ್ರೀಯ ಭದ್ರತೆ’ಯ ಭಾಗವಾಗಿ ಪರಿಗಣಿಸುವುದು ಅನಿವಾರ್ಯ ಎಂದು ಒತ್ತಿ ಹೇಳಿದರು.

ತಂತ್ರಜ್ಞಾನ ಮತ್ತು ಸೈಬರ್ ಭದ್ರತೆ : ಅಣೆಕಟ್ಟುಗಳು ಡಿಜಿಟಲ್ ರೂಪದಲ್ಲಿ ಕಾರ್ಯಾಚರಣೆಗೊಳ್ಳುತ್ತಿರುವ ಇಂದಿನ ಕಾಲದಲ್ಲಿ, ತಾಂತ್ರಿಕ ವಿಧ್ವಂಸಕ ಕೃತ್ಯಗಳು ಮತ್ತು ಸೈಬರ್ ದಾಳಿಗಳಿಂದ ಅಣೆಕಟ್ಟುಗಳನ್ನು ರಕ್ಷಿಸುವುದು ಅತ್ಯಂತ ಮುಖ್ಯವಾಗಿದೆ. ರಾಷ್ಟ್ರೀಯ ಮೂಲಸೌಕರ್ಯ ಭದ್ರತೆಯ ಭಾಗವಾಗಿ ಸೈಬರ್ ಸುರಕ್ಷತೆಯನ್ನು ಅನುಸರಿಸಬೇಕು ಎಂದು ತಿಳಿಸಿದರು.

ಅಭಿವೃದ್ಧಿಯ ನಿಜವಾದ ಮಾಪನ ನಾವು ಎಷ್ಟು ಎತ್ತರದ ಅಣೆಕಟ್ಟು ಕಟ್ಟುತ್ತೇವೆ ಎಂಬುದರ ಮೇಲಲ್ಲ, ಬದಲಾಗಿ ನಾವು ಅದನ್ನು ಎಷ್ಟು ಸುರಕ್ಷಿತವಾಗಿ ನಿರ್ವಹಿಸುತ್ತೇವೆ ಎಂಬುದರ ಮೇಲೆ ನಿರ್ಧರಿತವಾಗುತ್ತದೆ ಎಂದು ತಿಳಿಸಿದರು.

ಬೆಂಗಳೂರು : ಅಣೆಕಟ್ಟುಗಳು ಆಧುನಿಕ ಭಾರತದ ದೇವಾಲಯಗಳು. ನಮ್ಮ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಅಣೆಕಟ್ಟುಗಳನ್ನು ಆಧುನಿಕ ಭಾರತದ ದೇವಾಲಯಗಳು ಎಂದು ಕರೆದಿದ್ದರು. ಅವು ಕೇವಲ ಕಾಂಕ್ರೀಟ್ ರಚನೆಗಳಲ್ಲ, ಬದಲಿಗೆ ನಮ್ಮ ಕೃಷಿ ಸಮೃದ್ಧಿ ಮತ್ತು ಕೈಗಾರಿಕಾ ಪ್ರಗತಿಯ ಜೀವನಾಡಿಗಳಾಗಿವೆ ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.

ಬೆಂಗಳೂರಿನ ಜೆ.ಎನ್. ಟಾಟಾ ಸಭಾಂಗಣದಲ್ಲಿ ಕೇಂದ್ರ ಜಲಶಕ್ತಿ ಸಚಿವಾಲಯ, ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಇಲಾಖೆ, ಕೇಂದ್ರ ಜಲ ಆಯೋಗ , ಭಾರತೀಯ ವಿಜ್ಞಾನ ಸಂಸ್ಥೆ   ಮತ್ತು ವಿಶ್ವಬ್ಯಾಂಕ್ ಸಹಯೋಗದಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ  2026ನ್ನು ಉದ್ಘಾಟಿಸಿ ಮಾತನಾಡಿದರು. ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿ ಮತ್ತು ದೇವರಾಜ ಅರಸು ಅವರಂತಹ ನಾಯಕರ ನೀರಾವರಿ ಕ್ರಾಂತಿಯನ್ನು ಅವರು ಈ ಸಂದರ್ಭದಲ್ಲಿ ಸ್ಮರಿಸಿದರು.

ಅಣೆಕಟ್ಟು ಸುರಕ್ಷತೆ: ರಾಷ್ಟ್ರೀಯ ಭದ್ರತೆಯ ಆದ್ಯತೆ : ಭಾರತವು ವಿಶ್ವದ ಮೂರನೇ ಅತಿದೊಡ್ಡ ಅಣೆಕಟ್ಟು ಹೊಂದಿರುವ ದೇಶವಾಗಿದ್ದು (6,628 ಅಣೆಕಟ್ಟುಗಳು), ಕರ್ನಾಟಕವು 231 ಅಣೆಕಟ್ಟುಗಳೊಂದಿಗೆ ದೇಶದಲ್ಲೇ ಆರನೇ ಸ್ಥಾನದಲ್ಲಿದೆ. ನಮ್ಮ ದೇಶದ ಶೇ. 70 ರಷ್ಟು ಅಣೆಕಟ್ಟುಗಳು 25 ವರ್ಷಗಳಿಗಿಂತ ಹಳೆಯದಾಗಿವೆ. ಹವಾಮಾನ ಬದಲಾವಣೆಯಿಂದ ಉಂಟಾಗುವ ಹಠಾತ್ ಪ್ರವಾಹ, ಭೂಕಂಪನ ಭೀತಿ ಮತ್ತು ಹೂಳು ತುಂಬುವಿಕೆಯಂತಹ ಸವಾಲುಗಳನ್ನು ಎದುರಿಸಲು ಅಣೆಕಟ್ಟುಗಳ ಸುರಕ್ಷತೆಯನ್ನು ‘ರಾಷ್ಟ್ರೀಯ ಭದ್ರತೆ’ಯ ಭಾಗವಾಗಿ ಪರಿಗಣಿಸುವುದು ಅನಿವಾರ್ಯ ಎಂದು ಒತ್ತಿ ಹೇಳಿದರು.

ತಂತ್ರಜ್ಞಾನ ಮತ್ತು ಸೈಬರ್ ಭದ್ರತೆ : ಅಣೆಕಟ್ಟುಗಳು ಡಿಜಿಟಲ್ ರೂಪದಲ್ಲಿ ಕಾರ್ಯಾಚರಣೆಗೊಳ್ಳುತ್ತಿರುವ ಇಂದಿನ ಕಾಲದಲ್ಲಿ, ತಾಂತ್ರಿಕ ವಿಧ್ವಂಸಕ ಕೃತ್ಯಗಳು ಮತ್ತು ಸೈಬರ್ ದಾಳಿಗಳಿಂದ ಅಣೆಕಟ್ಟುಗಳನ್ನು ರಕ್ಷಿಸುವುದು ಅತ್ಯಂತ ಮುಖ್ಯವಾಗಿದೆ. ರಾಷ್ಟ್ರೀಯ ಮೂಲಸೌಕರ್ಯ ಭದ್ರತೆಯ ಭಾಗವಾಗಿ ಸೈಬರ್ ಸುರಕ್ಷತೆಯನ್ನು ಅನುಸರಿಸಬೇಕು ಎಂದು ತಿಳಿಸಿದರು.

ಅಭಿವೃದ್ಧಿಯ ನಿಜವಾದ ಮಾಪನ ನಾವು ಎಷ್ಟು ಎತ್ತರದ ಅಣೆಕಟ್ಟು ಕಟ್ಟುತ್ತೇವೆ ಎಂಬುದರ ಮೇಲಲ್ಲ, ಬದಲಾಗಿ ನಾವು ಅದನ್ನು ಎಷ್ಟು ಸುರಕ್ಷಿತವಾಗಿ ನಿರ್ವಹಿಸುತ್ತೇವೆ ಎಂಬುದರ ಮೇಲೆ ನಿರ್ಧರಿತವಾಗುತ್ತದೆ ಎಂದು ತಿಳಿಸಿದರು.

More articles

Latest article

Most read