ದರ್ಶನ್ ಸೇರಿ 17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ: ಯಾರು ಎ1, ಎ2 ಆರೋಪಿ?

Most read

ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ವಿರುದ್ಧ 4800 ಪುಟಗಳ ದೋಷಾರೋಪ ಪಟ್ಟಿಯನ್ನು ಪೊಲೀಸರು 24ನೇ ಎಸಿಎಂಎಂ ಕೋರ್ಟ್‌ಗೆ ಬುಧವಾರ ಸಲ್ಲಿಕೆ ಮಾಡಿದ್ದಾರೆ.

ಕೊಲೆ ನಂತರ ಪ್ರಕರಣ ಮುಚ್ಚಿಹಾಕಲು ಹಣ ನೀಡಿದ್ದು ದರ್ಶನ್ ಎನ್ನುವುದು ತಿಳಿದುಬಂದಿದ್ದು, ದೋಷಾರೋಪ ಪಟ್ಟಿಯಲ್ಲಿ ದರ್ಶನ್ ಅವರನ್ನು 2ನೇ ಆರೋಪಿ ಎಂದೇ ದಾಖಲಿಸಲಾಗಿದೆ. ಹತ್ಯೆಗೆ ಮೂಲಕ ಕಾರಣ ಪವಿತ್ರಾ ಗೌಡ ಅನ್ನುವುದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದ್ದು ಪವಿತ್ರಾ 1ನೇ ಆರೋಪಿಯಾಗಿದ್ದಾರೆಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

17 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಆಗಿದ್ದು, 3 ಪ್ರತ್ಯಕ್ಷ ಸಾಕ್ಷಿಗಳು, ಎಫ್​ಎಸ್​ಎಲ್​ ಮತ್ತು ಸಿಎಫ್​ಎಸ್​ಎಲ್​ನಿಂದ 8 ವರದಿಗಳಿರುವುದು, ಈ ಪ್ರಕರಣದಲ್ಲಿ ಒಟ್ಟು 231 ಸಾಕ್ಷಿಗಳಿರುವುದಾಗಿ ತಿಳಿಸಲಾಗಿದೆ.

ಪ್ರಕರಣ ತನಿಖೆ ಪೂರ್ಣಗೊಂಡಿಲ್ಲದಿರುವುದರಿಂದ ಸಿಆರ್​ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

More articles

Latest article