ರೇಣುಕಾಸ್ವಾಮಿ ಕೊಲೆ ಪ್ರಕರಣ : ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್‌: ದರ್ಶನ್‌ ಕೂಡ ಇದ್ದಾರೆಯೇ?

Most read

ಚಿತ್ರದುರ್ಗದ ರೇಣುಕಾಸ್ವಾಮಿ ಅಪಹರಣ ಹಾಗೂ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ 17 ಮಂದಿ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಆರೋಪಿಗಳು ಒಟ್ಟಿಗೆ ಸೇರಿ ಸಾಕ್ಷ್ಯಗಳ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಿ ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಕೊಲೆ ಆರೋಪಿಗಳು ಒಟ್ಟಿಗೆ ಸೇರಿ ಸಾಕ್ಷ್ಯಗಳ ಮೇಲೆ ಪರಿಣಾಮ ಬೀರವುದು, ಜೈಲಿನಲ್ಲಿ ದರ್ಶನ್‌ ಫ್ಯಾನ್ಸ್‌ ನಡುವೆ ಜಗಳ ಸಹ ಆಗಬಹುದು ಹಾಗೂ ಹತ್ತು ಹಲವು ಸಮಸ್ಯೆಗಳು ಆಗಬಹುದು ಎಂದು ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿದೆ. ಎ-8-ರವಿಶಂಕರ್, ಎ-15 ಕಾರ್ತಿಕ್ , ಎ-16 ಕೇಶವ್, ಎ7 – ನಿಖಿಲ್ ತುಮಕೂರು ಜೈಲಿಗೆ ಶಿಫ್ಟ್. 24ನೇ ಎಸಿಎಂಎಂ ಕೋರ್ಟ್ ನಿಂದ ಆದೇಶ ನೀಡಿದೆ.

ತುಮಕೂರು ಜೈಲಿಗೆ ಶಿಫ್ಟ್ ಮಾಡುವ ಕುರಿತು ಸೋಮವಾರ ಅರ್ಜಿ ಸಲ್ಲಿಸುವಂತೆ ಕೋರ್ಟ್ ಸೂಚಿಸಿತ್ತು. ಹಾಗಾಗಿ ಇಂದು ಈ ಸಂಬಂಧ ವಾದ  ಮಂಡಿಸಿದ ಪೊಲೀಸ್‌ ಪರ ವಕೀಲರು ನಾಲ್ವರನ್ನು ತುಮಕೂರು ಜೈಲಿಗೆ ಕಳಿಸಿದೆ.

More articles

Latest article