ದರ್ಶನ್‌ ಪ್ರಕರಣ; ಅಭಿಮಾನಿಗಳು ಸೇರುವ ಹಿನ್ನೆಲೆ ಕೋರ್ಟ್ ಹಾಗೂ ಪರಪ್ಪನ ಅಗ್ರಹಾರ ಜೈಲಿನ ಬಳಿ ಬಿಗಿ ಭದ್ರತೆ!

Most read

ರೇಣುಕಾಸ್ವಾಮಿಯ ಹತ್ಯೆ ಪ್ರಕರಣ ಸಂಬಂದಿಸಿದಂತೆ ಬಂಧಿತನಾಗಿರುವ ನಟ ದರ್ಶನ್ ಸೇರಿ ನಾಲ್ವರು ಆರೋಪಿಗಳನ್ನು ಇಂದು ಪೊಲೀಸ್‌ ಕಸ್ಟಡಿ ಅಂತ್ಯವಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಈ ವೇಳೆ ಕೋರ್ಟ್‌ ಬಳಿ ದರ್ಶನ್ ಅಭಿಮಾನಿಗಳು ಸೇರುವ ಸಾಧ್ಯತೆ ಹಿನ್ನೆಲೆ ಸೂಕ್ತ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ ಎಂಧು ತಿಳಿದುಬಂದಿದೆ.

ಇಂದು ಪೊಲೀಸ್‌ ಕಸ್ಟಡಿ ಮುಗಿದಿದ್ದು, ನ್ಯಾಯಾಲಯ ನಟ ದರ್ಶನ್‌ ಮತ್ತವರ ಮೂವರು ಸ್ನೇಹಿತರನ್ನು  ಮತ್ತೆ ನ್ಯಾಯಾಂಗ ಹಾಜರುಪಡಿಸುವ ವೇಳೆ ಅಭಿಮಾನಿಗಳು ನೂಕು ನುಗ್ಗಲು ಆಗಿ ಶಾಂತಿ ಕೆಡಬಹುದು ಎಂದೇಳಿ KSRP ಪೊಲೀಸ್ ಸಹಿತ ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಕೋರ್ಟ್‌ ನ್ಯಾಯಾಂಕ ಬಂದನಕ್ಕೆ  ಆದೇಶ ನೀಡಿದರೆ ಪರಪ್ಪನ ಅಗ್ರಹಾರ ಜೈಲಿಗೂ ದೊಡ್ಡ ಮಟ್ಟದಲ್ಲಿ ಅಭಿಮಾನಿಗಳು ಸೇರುವ ಸಾಧ್ಯತೆ ಇದ್ದು, ಪರಪ್ಪನ ಅಗ್ರಹಾರ ಜೈಲಿನ ಸುತ್ತಮುತ್ತಲು ಸೂಕ್ತ ಬಂದೋಬಸ್ತ್ ಗೆ ಸೂಚನೆ ನೀಡಲಾಗಿದೆ.

ಕಳೆದ ಗುರುವಾರ ದರ್ಶನ್‌ ಮತ್ತು ಪವಿತ್ರಾ ಗೌಡ ಸೇರಿ 17 ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ದರ್ಶನ್ ಅಭಿಮಾನಿಗಳು ಮಾಧ್ಯಮ ಪ್ರತಿನಿಧಿಯ ಮೇಲೆ ನ್ಯಾಯಾಲಯ ಆವರಣದಲ್ಲೇ ಥಳಿಸಿದ ಘಟನೆ ದಾಖಲಾಗಿತ್ತು. ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರು ಬಿಗಿಭದ್ರತೆ ಏರ್ಪಡಿಸಿದ್ದಾರೆ.

More articles

Latest article