ಸೆ.30ರವರೆಗೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಅಂಡ್‌ ಗ್ಯಾಂಗ್ ಜೈಲು ಸೇರಿ ಮೂರು ತಿಂಗಳು ಆಗಿದೆ. ಸೆಪ್ಟೆಂಬರ್ 17ಕ್ಕೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿದ್ದು, ಹೀಗಾಗಿ, ದರ್ಶನ್ ಹಾಗೂ ಗ್ಯಾಂಗ್​ನ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಎದುರು ಹಾಜರುಪಡಿಸಲಾಗಿದೆ. ಅವರ ನ್ಯಾಯಾಂಗ ಬಂಧನ ಅವಧಿ  ಸೆಪ್ಟೆಂಬರ್​ 30ರವರೆಗೆ ವಿಸ್ತರಣೆ ಆಗಿದೆ.

‘ಪ್ಲಾಸ್ಟಿಕ್ ಚೇರ್ ವ್ಯವಸ್ಥೆ ಮಾಡೋಕು ಜೈಲಾಧಿಕಾರಿಗಳು ಆಗಲ್ಲ ಎಂದು ಹೇಳುತ್ತಿದ್ದಾರೆ. ಬೇರೆ ಕೈದಿಗಳಿಗೆ ಆ ವ್ಯವಸ್ಥೆ ಇದೆ.  ಆದರೆ, ದರ್ಶನ್​ಗೆ ಚೇರ್ ವ್ಯವಸ್ಥೆ ಮಾಡುತ್ತಿಲ್ಲ. ದರ್ಶನ್ ಅವರನ್ನು ಯಾರು ಏನು ಅಂದುಕೊಂಡಿದ್ದಾರೋ ಗೊತ್ತಿಲ್ಲ’ ಎಂದು ದರ್ಶನ್ ಪರ ವಕೀಲರು ಹೇಳಿದರು. ‘ಕೈದಿಗಳಿಗೆ ಏನು ವ್ಯವಸ್ಥೆ ನೀಡಬೇಕು ಎಂದು ಜೈಲಿನ ನಿಯಮ ಪಟ್ಟಿಯಲ್ಲಿ ಇದೆ. ಅದು ಕೊಡಬೇಕು ಎಂದು ಆದೇಶ ಮಾಡುತ್ತೇನೆ’ ಎಂದು ಜಡ್ಜ್ ಹೇಳಿದರು.

ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿರುವ ಪ್ರಕರಣದಲ್ಲಿ ನಟ ದರ್ಶನ್ ಅಂಡ್‌ ಗ್ಯಾಂಗ್ ಜೈಲು ಸೇರಿ ಮೂರು ತಿಂಗಳು ಆಗಿದೆ. ಸೆಪ್ಟೆಂಬರ್ 17ಕ್ಕೆ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಪೂರ್ಣಗೊಂಡಿದ್ದು, ಹೀಗಾಗಿ, ದರ್ಶನ್ ಹಾಗೂ ಗ್ಯಾಂಗ್​ನ ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಎದುರು ಹಾಜರುಪಡಿಸಲಾಗಿದೆ. ಅವರ ನ್ಯಾಯಾಂಗ ಬಂಧನ ಅವಧಿ  ಸೆಪ್ಟೆಂಬರ್​ 30ರವರೆಗೆ ವಿಸ್ತರಣೆ ಆಗಿದೆ.

‘ಪ್ಲಾಸ್ಟಿಕ್ ಚೇರ್ ವ್ಯವಸ್ಥೆ ಮಾಡೋಕು ಜೈಲಾಧಿಕಾರಿಗಳು ಆಗಲ್ಲ ಎಂದು ಹೇಳುತ್ತಿದ್ದಾರೆ. ಬೇರೆ ಕೈದಿಗಳಿಗೆ ಆ ವ್ಯವಸ್ಥೆ ಇದೆ.  ಆದರೆ, ದರ್ಶನ್​ಗೆ ಚೇರ್ ವ್ಯವಸ್ಥೆ ಮಾಡುತ್ತಿಲ್ಲ. ದರ್ಶನ್ ಅವರನ್ನು ಯಾರು ಏನು ಅಂದುಕೊಂಡಿದ್ದಾರೋ ಗೊತ್ತಿಲ್ಲ’ ಎಂದು ದರ್ಶನ್ ಪರ ವಕೀಲರು ಹೇಳಿದರು. ‘ಕೈದಿಗಳಿಗೆ ಏನು ವ್ಯವಸ್ಥೆ ನೀಡಬೇಕು ಎಂದು ಜೈಲಿನ ನಿಯಮ ಪಟ್ಟಿಯಲ್ಲಿ ಇದೆ. ಅದು ಕೊಡಬೇಕು ಎಂದು ಆದೇಶ ಮಾಡುತ್ತೇನೆ’ ಎಂದು ಜಡ್ಜ್ ಹೇಳಿದರು.

More articles

Latest article

Most read