ನ್ಯಾಯ ಕೇಳಿ ಪೊಲೀಸ್ ಠಾಣೆಗೆ ಬಂದ ಮಹಿಳೆಯನ್ನು ಮಂಚಕ್ಕೆ ಕರೆದನೇ ಸಿಪಿಐ..?

Most read

ಕೋಲಾರ: ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಲೇರಿದ ಮಹಿಳೆಗೆ ಸಿಪಿಐ ನಂಜಪ್ಪ ಎಂಬಾತ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲೈಂಗಿಕವಾಗಿ ಸಹಕರಿಸದಿದ್ದರೆ ಸುಳ್ಳು ಕೇಸ್‌ ಹಾಕಿಸಿ ಒಳಗೆ ಹಾಕಿಸುವುದಾಗಿ ಬೆದರಿಸುತ್ತಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

ಪಕ್ಕದ ಮನೆಯವರು ತಮ್ಮ ಮೇಲೆ ದೌರ್ಜನ್ಯ ಎಸಗಿದ್ದು, ಇದರ ಬಗ್ಗೆ ದೂರಲು ಪೊಲೀಸ್‌ ಠಾಣೆಗೆ ಬಂದ ನಮ್ಮನ್ನೇ ಶೋಷಿಸಲಾಗುತ್ತಿದೆ. ಠಾಣೆಗೆ ಕರೆಸಿ ನನ್ನನ್ನು ʼಮಲಗೋಕೆ ಬಾʼ ಎಂದು ಸಿಪಿಐ ಕರೆಯುತ್ತಾರೆ ಎಂದು ಮಹಿಳೆ ಅಳಲು ತೋಡಿಕೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನೊಂದ ಮಹಿಳೆ, ಅಲ್ಲಿಂದಲೇ ಈ ಬಗ್ಗೆ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

ಮಹಿಳಾ ಪೊಲೀಸರಿಲ್ಲದೆ ನನ್ನನ್ನು ಬಂಧಿಸಿ ಅವಮಾನ ಮಾಡಿದ್ದಾರೆ, ಪುರುಷ ಪೊಲೀಸರನ್ನು ಆಗಾಗ ಮನೆ ಬಳಿ ಕಳುಹಿಸಿ ಕಿರುಕುಳ, ಅವಮಾನ ನೀಡುತ್ತಿದ್ದಾರೆ, ಠಾಣೆಗೆ ಕರೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಆಕೆ‌ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ನನ್ನ ಮೇಲೆ ವೇಶ್ಯಾವಾಟಿಕೆ ಕೇಸ್‌, ನನ್ನ ಗಂಡನ ವಿರುದ್ಧ ರೌಡಿಶೀಟ್‌ ತೆರೆಯುವುದಾಗಿ ಬೆದರಿಸುತ್ತಿದ್ದಾರೆ, ನಮ್ಮಂತ ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡಿ ಎಂದು ಮಹಿಳೆ ಮನವಿ ಮಾಡಿರುವ ವಿಡಿಯೋ ವೈರಲ್ ಆಗಿದೆ.

ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣವೊಂದರಲ್ಲಿ ಮಹಿಳೆ ಮಂಜುಳ ಹಾಗೂ ಪತಿ ಕಟ್ಟಾ ಸೀನು ಆರೋಪಿಗಳಾಗಿದ್ದಾರೆ, ವಿಚಾರಣೆಗೆಂದು ಕರೆದ ವೇಳೆ ಹೀಗೆ ಅವಮಾನವಾಗಿದೆ ಎಂದು ಆರೋಪಿಸಲಾಗಿದೆ,

ಈ ಪ್ರಕರಣವನ್ನು ವಿಚಾರಣೆ ಮಾಡಿ ವರದಿ ನೀಡುವಂತೆ ಕೆಜಿಎಫ್ ಎಸ್ಪಿ ಶಾಂತರಾಜು ಅವರು ಕೆಜಿಎಫ್ ಡಿವೈಎಸ್‌ಪಿ ಪಾಂಡುರಂಗ ಅವರಿಗೆ ಆದೇಶ ನೀಡಿದ್ದಾರೆ.

More articles

Latest article