3 ಲಕ್ಷ ಮತಗಳ ಅಂತರದಿಂದ ಸುನೀಲ್ ಬೋಸರನ್ನು ಗೆಲ್ಲಿಸಿ: ಡಿಕೆಶಿ

Most read

ಚಾಮರಾಜನಗರ: ಕಾಂಗ್ರೆಸ್ ಪಕ್ಷದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಧ್ರುವನಾರಾಯಣ ಅವರ ಕನಸನ್ನು ನನಸು ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಮನವಿ ಮಾಡಿದರು.

ಅವರು, ನಗರದಲ್ಲಿ ಚುನಾವಣಾ ಪ್ರಚಾರಾರ್ಥ ನಡೆದ ಸಭೆಯಲ್ಲಿ ಮಾತನಾಡಿ, ಮಹದೇವಪ್ಪ ಅವರನ್ನು ಸಂಸತ್ತಿಗೆ ಕಳುಹಿಸಿ ಎರಡನೇ ಅಂಬೇಡ್ಕರ್ ಮಾಡುವ ಹಂಬಲ ನಮಗಿತ್ತು. ಆದರೆ ಅವರು ಅದಕ್ಕೆ ಒಪ್ಪಲಿಲ್ಲ. ಸುನೀಲ್ ಬೋಸ್ ನನ್ನ ಮಗನಿದ್ದಂತೆ. ಸಿದ್ದರಾಮಯ್ಯ ಚಾಮರಾಜನಗರದ ಮನೆ ಮಗ ಇದ್ದಂತೆ. ಅವರ ಮೇಲೆ ನಂಬಿಕೆ ಇಟ್ಟು ಮತ ನೀಡಬೇಕು. ಕೊರೊನಾ ಸಮಯದಲ್ಲಿ ಆಕ್ಸಿಜನ್ ಇಲ್ಲದೇ ಸತ್ತರೂ ರಕ್ಷಣೆಗೆ ಯಾವ ಬಿಜೆಪಿಯವರೂ ಬರಲಿಲ್ಲ. ಸಹಾಯ ಮಾಡಿದವರು ಕಾಂಗ್ರೆಸ್ ಪಕ್ಷದವರು. ಅಂತಹ ಸಮಯದಲ್ಲಿ ನಿಮ್ಮ ಸಹಾಯಕ್ಕೆ ಬಂದ ಕಾಂಗ್ರೆಸ್ ಪಕ್ಷವನ್ನು ಯಾರೂ ಮರೆಯಬಾರದು ಎಂದರು

ಕೊಟ್ಟ ಮಾತನ್ನು ನಾವು ಉಳಿಸಿಕೊಂಡು ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಐದು ಬೆರಳು ಸೇರಿ ಕೈ ಗಟ್ಟಿಯಾಯಿತು. ಐದು ಗ್ಯಾರಂಟಿಗಳು ಸೇರಿ ನಮ್ಮ ಪಕ್ಷದ ಕೈ ಗಟ್ಟಿಯಾಯಿತು. ಉಚಿತ ಅಕ್ಕಿ, ಬಸ್ ಪ್ರಯಾಣ, 2 ಸಾವಿರ ಗೃಹಲಕ್ಷ್ಮಿ ಹಣ ಸೇರಿದಂತೆ ಎಲ್ಲ ಯೋಜನೆಗಳು ಮನೆಗೆ ತಲುಪುತ್ತಿವೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲನೇ ದಿನವೇ ಗ್ಯಾರಂಟಿ ಜಾರಿಗೆ ತೀರ್ಮಾನ ಮಾಡಿದೆವು. ಇಂತಹ ನಿರ್ಧಾರವನ್ನು ಮೋದಿಯವರು ಮಾಡಿದ್ದಾರೆಯೇ? ಮೋದಿಯವರ 15 ಲಕ್ಷ ಎಲ್ಲಿ, ಅಚ್ಚೇದಿನ್ ಎಲ್ಲಿ, 2 ಕೋಟಿ ಉದ್ಯೋಗ ಎಲ್ಲಿ ಅವರಿಂದ ಏನೂ ಆಗಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

More articles

Latest article