Tuesday, September 17, 2024

ಕೆಂಪೇಗೌಡನ ಮಗ ಯಾರಿಗೂ ಹೆದರುವ ಮಗನೇ ಅಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ

Most read

ದೊಡ್ಡ ಆಲದಹಳ್ಳಿ ಕೆಂಪೇಗೌಡನ ಮಗ ಯಾರಿಗೂ ಹೆದರುವ ಮಗ ಅಲ್ಲ ಎಂದು ಹೆಚ್‌ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಗುಡುಗಿದ್ದಾರೆ.

ಮದ್ದೂರಿನಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, 10 ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ತೆಗೆಯುವುದಾಗಿ ಕುಮಾರಸ್ವಾಮಿ ಹೇಳುತ್ತಾರೆ. ಆದರೆ ಬ್ರಿಟಿಷರ ಕೈಲೇ ಕಾಂಗ್ರೆಸ್ ಮುಗಿಸಲು ಆಗಲಿಲ್ಲ, ಇನ್ನು ಕುಮಾರಸ್ವಾಮಿ ಕೈಯಲ್ಲಿ ಆಗುತ್ತಾ? . ನಮ್ಮದು 10 ತಿಂಗಳ‌ ಸರ್ಕಾರ ಅಲ್ಲ ಕುಮಾರಣ್ಣ, ನಮ್ಮದು 10 ವರ್ಷದ ಸರ್ಕಾರ ಎಂದು ಟೀಕಿಸಿದ್ದಾರೆ.

ಮುಸ್ಲಿಮರು ಇಲ್ಲ ಎಂದಿದ್ರೆ ನೀವು MLA ಆಗ್ತಿರಲಿಲ್ಲ, ನಿಮ್ಮ‌ ತಂದೆ CM ಆಗ್ತಿರಲಿಲ್ಲ. ಈಗ ಮುಸ್ಲಿಮರಿಗೆ ವೋಟ್ ಹಾಕಿಲ್ಲ ಅಂತಾ ಧಮ್ಕಿ ಹಾಕ್ತಾರೆ. ನಿಮ್ಮ‌ ತಂದೆ ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟುತ್ತೀನಿ ಎಂದಿದ್ದು ನೆನೆಸಿಕೊಳ್ಳಿ ಕುಮಾರಸ್ವಾಮಿ ವಿರುದ್ಧ ವ್ಯಂಗವಾಡಿದ್ದಾರೆ.

ಯಡಿಯೂರಪ್ಪ ಜೈಲಿಗೆ ಹಾಕಿಸಿದ್ದು ಯಾರು‌? ಧರ್ಮಸ್ಥಳ ಶ್ರೀ ಮಂಜುನಾಥ ಸನ್ನಿಧಿಯಲ್ಲಿ ಯಾಕೆ ಆಣೆ ಪ್ರಮಾಣ ಮಾಡಲು ಹೋಗಿದ್ರಿ? ಎಲ್ಲವೂ ರಾಜ್ಯದ ಜನರಿಗೆ ಗೊತ್ತಿದೆ ಎಂದಿದ್ದಾರೆ. ತಿಮ್ಮಪ್ಪ ಕಾಸು ಬಿಡಲ್ಲ, ಮಂಜುನಾಥ ಬಿಡಲ್ಲ. ನನ್ನ ಅಜ್ಜಯ್ಯನ ಸುದ್ದಿ ನಿಮಗೆ ಬೇಡ. ಮಂಜುನಾಥ ಸ್ವಾಮಿ ಸಹವಾಸಕ್ಕೆ ಹೋಗ ಬೇಡ ಅಂತ ಹೆಚ್‌ಡಿಕೆಗೆ ಏಕವಚನದಲ್ಲೇ ಎಚ್ಚರಿಕೆ ನೀಡಿದ್ದಾರೆ.

More articles

Latest article