ಬೆಂಗಳೂರು: ಇಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ಇಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ವಿವರಿಸಿದರು.
ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಹೀಗಿವೆ.
ಕುಡಿಯುವ ನೀರು, ಸಮಿತಿ ರಚನೆ:
ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ನೀಗಿಸಲು ರಾಜ್ಯದ ಪ್ರಮುಖ ಜಲಾಶಯಗಳನ್ನು ನಿರ್ವಹಣೆ ಹಾಗೂ ಕುಡಿಯುವ ನೀರಿಗೆ ವಿಶೇಷ ಒತ್ತು ಕೊಟ್ಟು ನಿರ್ವಹಣೆ ಮಾಡಲು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ತಾಂತ್ರಿಕ ವ್ಯಕ್ತಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲು ಸಚಿವ ಸಂಪುಟ ಅನುಮೋದಿಸಿದೆ. ಕುಡಿಯುವ ನೀರಿಗೆ ಆಗುವ ಸಮಸ್ಯೆಗಳ ಕುರಿತಂತೆ ಹಾಗೂ ಜಲಾಶಯಗಳಿಂದ ನೀರು ಬಿಡುಗಡೆ ನಿರ್ವಹಣೆ ಮಾಡಲು ಸಮಿತಿಯು ವಿವರಗಳನ್ನು ಪರಿಶೀಲಿಸಿ ಸೂಕ್ತ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಸಚಿವರು ತಿಳಿಸಿದರು.
ಕೆ.ಕೆ.ಆರ್.ಡಿ.ಬಿ ರಸ್ತೆ – ಆಡಳಿತಾತ್ಮಕ ಅನುಮೋದನೆ:
“ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ 2024-25ನೇ ಸಾಲಿನ ಅಧ್ಯಕ್ಷರ ವಿವೇಚನಾ ನಿಧಿಯಡಿ ಕೈಗೊಳ್ಳಲಾಗುತ್ತಿರುವ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಎಸ್.ಎಚ್-156 ನರಿಬೋಳದಿಂದ ಗಂವ್ಹಾರ ವಯಾ ಬಿರಾಳ ಬಿ ಕಿ.ಮೀ 15.00 ರಿಂದ 36.00 ವರೆಗೆ ರಸ್ತೆ ನಿರ್ಮಾಣ ಕಾಮಗಾರಿಯ ರೂ.23.60 ಕೋಟಿಗಳ ಅಂದಾಜಿಗೆ ಮತ್ತು ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಎಸ್.ಎಚ್ 171 ಕೆಲ್ಲೂರು ಬಿ ದಿಂದ ಜವಳಗಾ ಕ್ರಾಸ್ ವರೆಗೆ (ವಯಾ ನೆಲೋಗಿ, ಸೊನ್ನ, ಮುತ್ತುಖೋಡ, ಕರಭೋಸಗಾ) ಕಿ.ಮೀ 165 ರಿಂದ 193.55 ವರೆಗೆ ರಸ್ತೆ ನಿರ್ಮಾಣ ಕಾಮಗಾರಿಯ ರೂ.24.10 ಕೋಟಿಗಳ ಅಂದಾಜಿನ ಎರಡು ಕಾಮಗಾರಿಗಳ ಒಟ್ಟಾರೆ ರೂ.47.70 ಕೋಟಿಗಳ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.
ಕುಶಾಲನಗರ ಮಸಗೋಡು-ಯಲಕನೂರು-ಕಣಿವೆ ರಸ್ತೆ ಅಭಿವೃದ್ಧಿ:
ಕೊಡಗು ಜಿಲ್ಲೆ, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಶಾಲನಗರ ತಾಲ್ಲೂಕು ಮಸಗೋಡು – ಯಲಕನೂರು-ಕಣಿವೆ ರಸ್ತೆ ಸರಪಳಿ 2.00 ರಿಂದ 10.00 ಕಿ.ಮೀ ಹಾಗೂ 11.00 ರಿಂದ 12.10 ಕಿ.ಮೀ ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ರೂ.15.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.
ಪ್ರಜಾಸೌಧ ಕಟ್ಟಡಗಳಿಗೆ ಅನುಮೋದನೆ:
ವಿಜಯಪುರ ಜಿಲ್ಲೆಯ ಸಿಂಧಗಿ ತಾಲ್ಲೂಕಿನ “ಪ್ರಜಾಸೌಧ” ಕಟ್ಡಡ ಕಾಮಗಾರಿಗೆ ಈಗಾಗಲೇ ರೂ.9.75 ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿರುವುದನ್ನು ಒಳಗೊಂಡAತೆ, ಸದರಿ ಕಟ್ಟಡಕ್ಕೆ ಅವಶ್ಯವಿರುವ 2ನೇ ಹಂತದ ಕಾಮಗಾರಿಯ ರೂ.5.00 ಕೋಟಿಗಳ ಅಂದಾಜು ಮೊತ್ತ ಸೇರಿದಂತೆ ಒಟ್ಟಾರೆ ರೂ.14.75 ಕೋಟಿಗಳ ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲು; ಹಾಗೂ ಸಂಬಂಧಪಟ್ಟ ಕಾರ್ಯನಿರ್ವಾಹಕ ಅಭಿಯಂತರರು ಲೋಕೋಪಯೋಗಿ ಇಲಾಖೆ ಇವರ ವಿರುದ್ಧ ಶಿಸ್ತು ವ್ಯವಹರಣೆ ಹೂಡಲು ಹಾಗೂ ಜಿಲ್ಲಾ ಆಡಳಿತಕ್ಕೆ ಎಚ್ಚರಿಕೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.
ನೋಂದಣಿ ಕಚೇರಿಗಳಿಗೆ ಹೊಸ ಕಟ್ಟಡ:
ಬೆಂಗಳೂರಿನಲ್ಲಿ ಇರುವ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ 2 ಜಿಲ್ಲಾ ನೊಂದಣಿ ಕಚೇರಿ ಹಾಗೂ 34 ಉಪನೋಂದಣಿ ಕಚೇರಿಗಳನ್ನು ಸ್ವಂತ ಕಟ್ಟಡಗಳಿಗೆ ಸ್ಥಳಾಂತರಿಸಲು ಬಿಬಿಎಂಪಿ/ಬೆಂಗಳೂರು ನಗರ ಜಿಲ್ಲಾಧಿಕಾರಿ/ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಗಳಿಂದ ಹಂಚಿಕೆಯಾಗುವ ನಿವೇಶನದಲ್ಲಿ ತಲಾ ಒಂದು ಕಟ್ಟಡವನ್ನು ಗರಿಷ್ಠ ರೂ.2.50 ಕೋಟಿಗಳ ವೆಚ್ಚದಲ್ಲಿ ಹೊಸದಾಗಿ ನಿರ್ಮಾಣ ಮಾಡಲು ಅಥವಾ ನಿವೇಶನ ಲಭ್ಯವಾಗದಿದ್ದಲ್ಲಿ ಬಿಬಿಎಂಪಿ/ಬೆಂಗಳೂರು ನಗರ ಜಿಲ್ಲಾಧಿಕಾರಿ / ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಗಳು ಹೊಂದಿರುವ ಕಟ್ಟಡಗಳಲ್ಲಿ ಸ್ಥಳಾವಕಾಶ ಲಭ್ಯವಾದಲ್ಲಿ ಕಚೇರಿಗಳನ್ನು ಸ್ಥಳಾಂತರಿಸಲು ತಲಾ ಒಂದು ಕಛೇರಿಗಳನ್ನು ಗರಿಷ್ಠ ರೂ.50.00 ಲಕ್ಷಗಳ ವೆಚ್ಚದಲ್ಲಿ ನವೀಕರಿಸಲು ಅಥವಾ ಈಗಾಗಲೇ ನಿರ್ಮಾಣಗೊಂಡಿರುವ ಕಟ್ಟಡದ ಮೇಲೆ ಮತ್ತೊಂದು ಮಹಡಿಯನ್ನು ನಿರ್ಮಿಸಲು ತಗಲುವ ವಾಸ್ತವಿಕ ವೆಚ್ಚವನ್ನು ಭರಿಸಲು, ಗರಿಷ್ಠ ರೂ.1.50 ಕೋಟಿಗಳಿಗೆ ಸೀಮಿತಗೊಳಿಸಲು ನಿರ್ಧರಿಸಲಾಗಿದೆ.
ನೋಂದಣಿ ಕಚೇರಿಗಳಲ್ಲಿ ಆಧುನಿಕ ತಂತ್ರಜ್ಞಾನ:
ನೊಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಗಳಿಗೆ Procurement, Installation, Operations and Maintenance of IT Infrastructure along with Deployment of Operational Manpower ಆಧಾರದ ಮೇಲೆ BOO Model ಆಧಾರದ ಮೇಲೆ Go-Live ದಿನಾಂಕದಿಂದ 5 ವರ್ಷಗಳ ಅವಧಿಗೆ ಹಾಗೂ ಗೋ-ಲೈವ್ ಪೂರ್ವದ ಅವಧಿಯು ಸೇರಿದಂತೆ ಪೂರೈಸಲು, ಆರ್ಎಫ್ಪಿ ಹಾಗೂ ನೆಗೋಷಿಯೇಶನ್ ಮೂಲಕ ಸ್ಕಾö್ಯನ್ ಮಾಡಿದ ದಾಖಲೆಗಳ ಪ್ರತಿ ಪುಟಕ್ಕೆ ರೂ.47.20 ದರದಲ್ಲಿ (ಶೇ.18% ರಷ್ಟು ಜಿಎಸ್ಟಿ ಸೇರಿದಂತೆ) ರೂ.637.45 ಕೋಟಿಗಳ ಪರಿಷ್ಕೃತ ಅಂದಾಜಿಗೆ ಹಾಗೂ ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಗೋ-ಲೈವ್ಗಾಗಿ ನೀಡಿದ್ದ 90 ದಿನಗಳ ಅವಧಿಯನ್ನು 464 ದಿನಗಳಿಗೆ ವಿಸ್ತರಿಸಲು/ ಸ್ಥೀರಿಕರಿಸಲು, “ಕರ್ನಾಟಕ ಸರ್ಕಾರ (ವ್ಯವಹಾರ ನಿರ್ವಹಣೆ) ನಿಯಮಗಳು, 1977ರ ಮೊದಲ ಅನುಸೂಚಿ ಸಂಖ್ಯೆ: 15ರ ಪ್ರಕಾರ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.
ಮಾರ್ಪಾಡುಗಳೊಂದಿಗೆ ಆರೋಗ್ಯ ಸಂಜೀವಿನಿ ಜಾರಿಗೆ ನಿರ್ಣಯ:
ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಸೌಲಭ್ಯ ಒದಗಿಸುವ “ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಯನ್ನು ಕೆಲವು ಮಾರ್ಪಾಡುಗಳೊಂದಿಗೆ ಜಾರಿಗೊಳಿಸಲು; ಸಚಿವ ಸಂಪುಟ ನಿರ್ಣಯಿಸಿದೆ.
ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ಆಚರಣೆ ಮಾಡಲು ದಲಿತ ಸಂಘಟನೆಗಳು ಬೇಡಿಕೆ ಸಲ್ಲಿಸಿದ್ದ ಮೇರೆಗೆ ಲೋಕೋಪಯೋಗಿ ಇಲಾಖೆ ವತಿಯಿಂದ ವಿಕಾಸಸೌಧದ ಮುಂದಿನ ಖಾಲಿ 29.85 ಗುಂಟೆ ಜಾಗದಲ್ಲಿ 87 ಕೋಟಿ ವೆಚ್ಚದಲ್ಲಿ ಸ್ಪೂರ್ತಿಸೌಧ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
ಗದಗ ಮೆಡಿಕಲ್ ಕಾಲೇಜಿಗೆ ಕೆ.ಎಚ್ ಪಾಟೀಲ ಹೆಸರು:
ಗದಗಿನ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಹೆಸರನ್ನು ಸಹಕಾರಿ ರಂಗದ ಭೀಷ್ಮ ಕೆ.ಎಚ್. ಪಾಟೀಲ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಎಂದು ಹೆಸರಿಸಲು ಸಂಪುಟ ನಿರ್ಧರಿಸಿದೆ. ಈ ವಿಷಯವನ್ನು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ರವರು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು.
ಸಹಕಾರಿ ರಂಗದಲ್ಲಿ ಅನುಪಮ ಸೇವೆ ಸಲ್ಲಿಸಿದ ಕೆ.ಎಚ್. ಪಾಟೀಲರು ರಾಜ್ಯದಲ್ಲಿ ಸಚಿವರಾಗಿ, ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಇಂತಹ ಮಹಾನ ನಾಯಕನ ಹೆಸರನ್ನು ಸಾರ್ವಜನಿಕ ಸೇವೆ ಮಾಡುತ್ತಿರುವ ಗದಗ ಮೆಡಿಕಲ್ ಕಾಲೇಜಿಗೆ ನಾಮಕರಣ ಮಾಡುವ ಮೂಲಕ ಅವರ ಸೇವೆಯನ್ನು ಗೌರವಿಸುವ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಸಚಿವರು ವಿವರಿಸಿದರು.