ಕೃಷಿ ಹೊಂಡದಲ್ಲಿ ಸ್ಫೋಟ: ಡ್ರೋನ್ ಪ್ರತಾಪ್‌ಗೆ 10 ದಿನಗಳ ನ್ಯಾಯಾಂಗ ಬಂಧನ

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಫೋಟಿಸಿದ್ದ ಆರೋಪದ ಮೇಲೆ ಬಂಧಿತನಾಗಿರುವ ಡ್ರೋನ್ ಪ್ರತಾಪ್ ಗೆ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಡಿಸೆಂಬರ್. 26 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ತಾಲ್ಲೂಕಿನ ಐ.ಡಿ.ಹಳ್ಳಿ ಹೋಬಳಿಯ ಜನಕಲೋಟಿ ಗ್ರಾಮದ ರಾಯರ ಬೃಂದಾವನ ಫಾರ್ಮ್‌ನ ಕೃಷಿ ಹೊಂಡದಲ್ಲಿ ಡ್ರೋನ್ ಪ್ರತಾಪ್ ಕಳೆದ ವಾರ
ಸೋಡಿಯಂ ಬಳಸಿ ಸ್ಫೋಟಿಸಿದ್ದರು. ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಮಿಡಿಗೇಶಿ ಠಾಣೆ ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಿಚಾರಣೆಗಾಗಿ ಪೊಲೀಸರು ಡ್ರೋನ್ ಪ್ರತಾಪ್ ನನ್ನು ತಮ್ಮ ವಶಕ್ಕೆ ಪಡೆದಿದ್ದರು. ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ
ಒಪ್ಪಿಸಲಾಗಿದೆ.

ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಫೋಟಿಸಿದ್ದ ಆರೋಪದ ಮೇಲೆ ಬಂಧಿತನಾಗಿರುವ ಡ್ರೋನ್ ಪ್ರತಾಪ್ ಗೆ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಡಿಸೆಂಬರ್. 26 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ತಾಲ್ಲೂಕಿನ ಐ.ಡಿ.ಹಳ್ಳಿ ಹೋಬಳಿಯ ಜನಕಲೋಟಿ ಗ್ರಾಮದ ರಾಯರ ಬೃಂದಾವನ ಫಾರ್ಮ್‌ನ ಕೃಷಿ ಹೊಂಡದಲ್ಲಿ ಡ್ರೋನ್ ಪ್ರತಾಪ್ ಕಳೆದ ವಾರ
ಸೋಡಿಯಂ ಬಳಸಿ ಸ್ಫೋಟಿಸಿದ್ದರು. ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಮಿಡಿಗೇಶಿ ಠಾಣೆ ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಿಚಾರಣೆಗಾಗಿ ಪೊಲೀಸರು ಡ್ರೋನ್ ಪ್ರತಾಪ್ ನನ್ನು ತಮ್ಮ ವಶಕ್ಕೆ ಪಡೆದಿದ್ದರು. ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋಮವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ
ಒಪ್ಪಿಸಲಾಗಿದೆ.

More articles

Latest article

Most read