ಅಸ್ಸಾಂ ಸೇರಿ ಈಶಾನ್ಯ ಭಾರತದಲ್ಲಿ ಭೂಕಂಪ: ಭಯಭೀತರಾದ ಜನ

ಗುವಾಹಟಿ: ಅಸ್ಸಾಂನ ಕೇಂದ್ರ ಭಾಗದಲ್ಲಿ 5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ  ತಿಳಿಸಿದೆ. ಯಾರಿಗೂ ಯಾವುದೇ ಗಾಯ ಅಥವಾ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ತಕ್ಷಣದ ವರದಿಯಾಗಿಲ್ಲ ಎಂದು ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ಬ್ರಹ್ಮಪುತ್ರದ ದಕ್ಷಿಣ ದಂಡೆಯ ಮೋರಿಗಾಂವ್ ಜಿಲ್ಲೆಯ 16 ಕಿ.ಮೀ ಆಳದಲ್ಲಿ ತಡರಾತ್ರಿ 2.25ಕ್ಕೆ ಭೂಕಂಪ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರವು ಹೇಳಿದೆ. ಭೂಕಂಪದ ಕೇಂದ್ರಬಿಂದುವು ಗುವಾಹಟಿಯಿಂದ ಪೂರ್ವಕ್ಕೆ 52 ಕಿ.ಮೀ ದೂರದಲ್ಲಿ ದಾಖಲಾಗಿದೆ.

ನೆರೆಯ ಕಾಮ್ರೂಪ್ ಮೆಟ್ರೋಪಾಲಿಟನ್, ನಾಗಾಂವ್, ಪೂರ್ವ ಕರ್ಬಿ ಆಂಗ್ಲಾಂಗ್, ಪಶ್ಚಿಮ ಕರ್ಬಿ ಆಂಗ್ಲಾಂಗ್, ಹೊಜೈ, ದಿಮಾ ಹಸಾವೊ, ಗೋಲಾಘಾಟ್, ಜೋರ್ಹತ್, ಶಿವಸಾಗರ್, ಕ್ಯಾಚಾರ್, ಕರೀಮ್‌ಗಂಜ್, ಹೈಲಕಂಡಿ, ಧುಬ್ರಿ, ದಕ್ಷಿಣ ಸಲ್ಮಾರಾ-ಮಂಕಚಾರ್ ಮತ್ತು ಗೋಲ್ಪಾರಾ ಜಿಲ್ಲೆಗಳ ಜನರಿಗೂ ಕಂಪನದ ಅನುಭವವಾಗಿದೆ.

ದರ್ರಾಂಗ್, ತಮುಲ್‌ಪುರ್, ಸೋನಿತ್‌ಪುರ್, ಕಮ್ರೂಪ್, ಬಿಸ್ವನಾಥ್, ಉದಲ್‌ಗುರಿ, ನಲ್ಬರಿ, ಬಜಾಲಿ, ಬರ್ಪೇಟಾ, ಬಕ್ಸಾ, ಚಿರಾಂಗ್, ಕೊಕ್ರಜಾರ್, ಬೊಂಗೈಗಾಂವ್ ಮತ್ತು ಬ್ರಹ್ಮಪುತ್ರದ ಉತ್ತರ ದಂಡೆಯಲ್ಲಿರುವ ಲಖಿಂಪುರದಲ್ಲೂ ಕಂಪನದ ಅನುಭವವಾಗಿದೆ.

ಮಧ್ಯ-ಪಶ್ಚಿಮ ಅರುಣಾಚಲ ಪ್ರದೇಶದ ಕೆಲವು ಪ್ರದೇಶಗಳು, ಸಂಪೂರ್ಣ ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದ ಹಲವು ಪ್ರದೇಶಗಳಲ್ಲಿ ಭೂಮಿ ನಡುಗಿದೆ. ಮಧ್ಯ-ಪೂರ್ವ ಭೂತಾನ್, ಚೀನಾ ಮತ್ತು ಬಾಂಗ್ಲಾದೇಶದ ಕೆಲವು ಭಾಗಗಳಲ್ಲೂ ಭೂಕಂಪ ಆಗಿದೆ ಎಂದು ವರದಿ ತಿಳಿಸಿದೆ.

ಕಂಪನದಿಂದಾಗಿ ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಈಶಾನ್ಯ ಭಾರತವು ಭೂಕಂಪನ ವಲಯದಲ್ಲಿ ಬರುತ್ತದೆ. ಇದರಿಂದಾಗಿ ಈ ಪ್ರದೇಶದಲ್ಲಿ ಆಗಾಗ್ಗೆ ಭೂಕಂಪಗಳು ಸಂಭವಿಸುತ್ತವೆ.

ಗುವಾಹಟಿ: ಅಸ್ಸಾಂನ ಕೇಂದ್ರ ಭಾಗದಲ್ಲಿ 5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ  ತಿಳಿಸಿದೆ. ಯಾರಿಗೂ ಯಾವುದೇ ಗಾಯ ಅಥವಾ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ತಕ್ಷಣದ ವರದಿಯಾಗಿಲ್ಲ ಎಂದು ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.

ಬ್ರಹ್ಮಪುತ್ರದ ದಕ್ಷಿಣ ದಂಡೆಯ ಮೋರಿಗಾಂವ್ ಜಿಲ್ಲೆಯ 16 ಕಿ.ಮೀ ಆಳದಲ್ಲಿ ತಡರಾತ್ರಿ 2.25ಕ್ಕೆ ಭೂಕಂಪ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರವು ಹೇಳಿದೆ. ಭೂಕಂಪದ ಕೇಂದ್ರಬಿಂದುವು ಗುವಾಹಟಿಯಿಂದ ಪೂರ್ವಕ್ಕೆ 52 ಕಿ.ಮೀ ದೂರದಲ್ಲಿ ದಾಖಲಾಗಿದೆ.

ನೆರೆಯ ಕಾಮ್ರೂಪ್ ಮೆಟ್ರೋಪಾಲಿಟನ್, ನಾಗಾಂವ್, ಪೂರ್ವ ಕರ್ಬಿ ಆಂಗ್ಲಾಂಗ್, ಪಶ್ಚಿಮ ಕರ್ಬಿ ಆಂಗ್ಲಾಂಗ್, ಹೊಜೈ, ದಿಮಾ ಹಸಾವೊ, ಗೋಲಾಘಾಟ್, ಜೋರ್ಹತ್, ಶಿವಸಾಗರ್, ಕ್ಯಾಚಾರ್, ಕರೀಮ್‌ಗಂಜ್, ಹೈಲಕಂಡಿ, ಧುಬ್ರಿ, ದಕ್ಷಿಣ ಸಲ್ಮಾರಾ-ಮಂಕಚಾರ್ ಮತ್ತು ಗೋಲ್ಪಾರಾ ಜಿಲ್ಲೆಗಳ ಜನರಿಗೂ ಕಂಪನದ ಅನುಭವವಾಗಿದೆ.

ದರ್ರಾಂಗ್, ತಮುಲ್‌ಪುರ್, ಸೋನಿತ್‌ಪುರ್, ಕಮ್ರೂಪ್, ಬಿಸ್ವನಾಥ್, ಉದಲ್‌ಗುರಿ, ನಲ್ಬರಿ, ಬಜಾಲಿ, ಬರ್ಪೇಟಾ, ಬಕ್ಸಾ, ಚಿರಾಂಗ್, ಕೊಕ್ರಜಾರ್, ಬೊಂಗೈಗಾಂವ್ ಮತ್ತು ಬ್ರಹ್ಮಪುತ್ರದ ಉತ್ತರ ದಂಡೆಯಲ್ಲಿರುವ ಲಖಿಂಪುರದಲ್ಲೂ ಕಂಪನದ ಅನುಭವವಾಗಿದೆ.

ಮಧ್ಯ-ಪಶ್ಚಿಮ ಅರುಣಾಚಲ ಪ್ರದೇಶದ ಕೆಲವು ಪ್ರದೇಶಗಳು, ಸಂಪೂರ್ಣ ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದ ಹಲವು ಪ್ರದೇಶಗಳಲ್ಲಿ ಭೂಮಿ ನಡುಗಿದೆ. ಮಧ್ಯ-ಪೂರ್ವ ಭೂತಾನ್, ಚೀನಾ ಮತ್ತು ಬಾಂಗ್ಲಾದೇಶದ ಕೆಲವು ಭಾಗಗಳಲ್ಲೂ ಭೂಕಂಪ ಆಗಿದೆ ಎಂದು ವರದಿ ತಿಳಿಸಿದೆ.

ಕಂಪನದಿಂದಾಗಿ ಜನರು ಭಯಭೀತರಾಗಿ ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದಾರೆ. ಈಶಾನ್ಯ ಭಾರತವು ಭೂಕಂಪನ ವಲಯದಲ್ಲಿ ಬರುತ್ತದೆ. ಇದರಿಂದಾಗಿ ಈ ಪ್ರದೇಶದಲ್ಲಿ ಆಗಾಗ್ಗೆ ಭೂಕಂಪಗಳು ಸಂಭವಿಸುತ್ತವೆ.

More articles

Latest article

Most read