Sunday, September 8, 2024

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಬಿ.ನಾಗೇಂದ್ರ ಹೆಸರೇಳುವಂತೆ ಕಲ್ಲೇಶ್‌ಗೆ ಕಿರುಕುಳ, ಇಡಿ ಅಧಿಕಾರಿಗಳ ವಿರುದ್ಧ FIR ದಾಖಲು

Most read

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಕುರಿತು ತನಿಖೆ ಮಾಡುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳ ವಿರುದ್ಧವೇ FIR ದಾಖಲಾಗಿದೆ.

ಇಡಿ ಅಧಿಕಾರಿಗಳು ವಿಚಾರಣೆಯ ನೆಪದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹಿಂದಿನ ನಿರ್ದೇಶಕ ಕಲ್ಲೇಶ್. ಬಿ ಅವರಿಗೆ ಕಿರುಕುಳ ನೀಡಿ, ಸಿಎಂ ಮತ್ತು ಮಾಜಿ ಸಚಿವ ನಾಗೇಂದ್ರ ಹಸರೇಳುವಂತೆ ಧಮ್ಮಿ ಹಾಕಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ನಿಗಮದ ಮಾಜಿ ಎಂಡಿ ಕಲ್ವೇಶ್ ಅವರು ಶೇಷಾದ್ರಿಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಶೇಷಾದ್ರಿಪುರಂ ಠಾಣೆಯಲ್ಲಿ ಎನ್​​ಸಿಆರ್​ (NCR) ದಾಖಲಾಗಿದ್ದು, ವಿಲ್ಸನ್ ಗಾರ್ಡನ್ ಠಾಣೆಗೆ ವರ್ಗಾವಣೆ ಬಳಿಕ FIR ದಾಖಲಾಗಿದೆ.

ಸಹಾಯ ನಿರ್ದೇಶಕ ಮುರಳಿ ಕಣ್ಣನ್ ಹಾಗೂ ಐಆರ್ ಎಸ್ ಅಧಿಕಾರಿ ಮಿತ್ತಲ್ ಅನ್ನೋರ ವಿರುದ್ಧ ಇದೀಗ ದೂರು ದಾಖಲಾಗಿದೆ. ನಿಮಗೆ ಇಡಿ ಸಹಾಯ ಮಾಡಬೇಕು ಎಂದರೆ ಎಂಜಿ ರೋಡ್ ಖಾತೆಗೆ ಹಣವನ್ನು ಸಿಎಂ, ನಾಗೇಂದ್ರ ಮತ್ತು ಎಫ್ ಡಿ ನಿರ್ದೇಶನದಂತೆ ಮಾಡಲಾಗಿದೆ ಎಂದು ಬರೆದುಕೊಡು ಎಂದು ಒತ್ತಡ ಹಾಕಿದ್ದರಂತೆ. ಇದನ್ನು ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

ಎಂ.ಜಿ.ರೋಡ್ ಬ್ಯಾಂಕ್​ ಖಾತೆಗೆ ಅನುದಾನ ಜಮಾಮಾಡಲು ನಾಗೇಂದ್ರ, ಎಫ್​ಡಿ ಇಲಾಖೆಯಿಂದ ಸೂಚನೆ ಇತ್ತೆಂದು ಒಪ್ಪಿಕೊಂಡ್ರೆ ಮಾತ್ರ ನಿನ್ನ ಬಿಡುತ್ತೇವೆ. ನಂತರ ಮಿತ್ತಲ್ ಎಂಬ ಅಧಿಕಾರಿ ಬಂದು ನನಗೆ ಬೈದಿದ್ದರು. ನೀನೊಬ್ಬ ಅಪರಾಧಿ, ನಿನ್ನನ್ನು ಈಗಲೇ ಅರೆಸ್ಟ್ ಮಾಡುತ್ತೇನೆ. ಇಡಿ ಬಗ್ಗೆ ನಿನಗೆ ಗೊತ್ತಿಲ, 2-3 ವರ್ಷ ನಿನಗೆ ಬೆಲ್ ಸಿಗಲ್ಲ. ನಿನ್ನ ಹೇಳಿಕೆಯನ್ನು ನಾನು ಓದಿದ್ದೇನೆ, ಪ್ರಯೋಜನಕ್ಕೆ ಬರಲ್ಲ. ನಿನಗೆ ಇಡಿ ಸಹಾಯ ಮಾಡಬೇಕೆಂದ್ರೆ ಬರೆದು ಕೊಡಬೇಕು. ಸಿಎಂ, ನಾಗೇಂದ್ರ ನಿರ್ದೇಶನದಂತೆ ಎಂ.ಜಿ.ರೋಡ್ ಖಾತೆಗೆ ಹಣವನ್ನು ವರ್ಗಾಯಿಸಿದ್ದೇನೆ ಎಂದು ಬರೆದುಕೊಡಲು ಒತ್ತಡ ಹೇರಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಎಫ್‌ ಐ ಆರ್‌ ನ ಪೂರ್ತಿ ವಿವರ ಇಲ್ಲಿದೆ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಕುರಿತು ಜಾರಿ ನಿರ್ದೇಶನಾಲಯದ ತನಿಖೆಯನ್ನು ಮಾಡುತ್ತಿದ್ದು, ಈ ಸಂಬಂಧ ನನ್ನನ್ನು ವಿಚಾರಣೆಗೆ ಹಾಜರಾಗುವಂತೆ ಇಡಿಯವರು ದಿನಾಂಕ: 16.07.2024 ರಂದು ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದ್ದು, ಅದರಂತೆ ನಾನು ಶಾಂತಿನಗರದ ಜಾರಿ ನಿರ್ದೇಶನಾಲಯ ಕಛೇರಿಗೆ ಹೋಗಿದ್ದು, ನನ್ನ ಹೇಳಿಕೆಯನ್ನು ಶ್ರೀಮುರುಳಿ ಕಣ್ಣನ್ ಸಹಾಯ ನಿರ್ದೇಶಕರು ಇಡಿ ದಾಖಲಿಸಿಕೊಳ್ಳುತ್ತಾರೆ. ಈ ಸಂದರ್ಬದಲ್ಲಿ ನನಗೆ 17 ಪ್ರಶ್ನೆಗಳನ್ನು ಕೇಳುತ್ತಾರೆ. ನಾನು 17 ಪ್ರಶ್ನೆಗಳಿಗೂ ಉತ್ತರ ನೀಡುತ್ತೇನೆ. ಅದರಲ್ಲಿ ಮೂರು ಪ್ರಶ್ನೆಗಳಿಗೆ ಉತ್ತರಿಸಲು ನನಗೆ ಕಡತ (ಫೈಲ್‌)ಬೇಕು ಹಾಗು ನನ್ನ ಕೆಳಹಂತದ ಅಧಿಕಾರಿಗಳು ಬೇಕಾಗುತ್ತಾರೆಂದು ತಿಳಿಸಿರುತ್ತೇನೆ. ಆಗ ಕಣ್ಣನ್ ರವರು ದಿನಾಂಕ:18.07.2024 ರಂದು 2:00 ಗಂಟೆಗೆ ಬನ್ನಿ ಆಗ ಕಡತ ಮತ್ತು ಇತರೆ ಅಧಿಕಾರಿಗಳನ್ನು ಕರೆಯುತ್ತೇನೆಂದು ತಿಳಿಸಿರುತ್ತಾರೆ.

ವಿಚಾರಣೆ ಮುಗಿದು ನನ್ನ ಕಡೆಯಿಂದ ನನ್ನ ಹೇಳಿಕೆಗೆ ಸಹಿ ಪಡಿಯುತ್ತಾರೆ. ನಾನು ನನ್ನ ಹೇಳಿಕೆಯ ಪ್ರತಿಯನ್ನು ನನಗೊಂದು ಕೊಡಿ ಎಂದು ಕೇಳುತ್ತೇನೆ. ಆದರೆ ಸದರಿಯವರು ಕೊಡಲಿಲ್ಲ. ನಂತರ ಪುನಃ ನನ್ನನ್ನು ಪ್ರಶ್ನೆ ಕೇಳುತ್ತಾರೆ. ಆದರೆ ಈ ಸಲ ಯಾವುದೇ ಲಿಖಿತ ರೂಪದಲ್ಲಿ ಪ್ರಶ್ನೆ ನೀಡುವುದಿಲ್ಲ. ಎಂ.ಜಿ ರೋಡ್ ಬ್ಯಾಂಕ್ ಖಾತೆಗೆ ಖಜಾನೆಯ ಮೂಲಕ ಹಣವನ್ನು ಮಹರ್ಷಿ ಮಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮಕ್ಕೆ ಜಮಾ ಮಾಡಿರುವುದು ತಪ್ಪು ಎಂದು ಹೇಳುತ್ತಾರೆ. ಆಗ ನಾನು ಸರ್ಕಾರದ ಆದೇಶದ ಪ್ರಕಾರ ಬಿಲ್ ಮಾಡಿ, ದಿನಾಂಕ:25.03.2024 ರಂದು ಜಮಾ ಮಾಡಿದ್ದೇನೆ. ಆದರೆ ಈ ಖಾತೆಯಲ್ಲಿ ದಿನಾಂಕ:05.03.2024 ರಿಂದಲೇ ಅಕ್ರಮ ಹಣ ವರ್ಗಾವಣೆಯಾಗಿರುತ್ತದೆ. ಆದ್ದರಿಂದ ನನ್ನದು ಯಾವುದು ತಪ್ಪು ಇಲ್ಲ ಎಂದು ಹೇಳಿದರೂ ಸಹ ನಿಮ್ಮನ್ನು ಅರೆಸ್ಟ್ ಮಾಡುತ್ತೇವೆಂದು ಧಮ್ಮಿ ಹಾಕಿರುತ್ತಾರೆ. ಎರಡು ವರ್ಷ ಆದರು ನಿಮಗೆ ಬೆಲ್ ಸಿಗುವುದಿಲ್ಲ ಎಂದು ಬೈಯುತ್ತಾರೆ ಎಂದು ದೂರಿದ್ದಾರೆ.

ಇ.ಡಿಯು ನಿಮಗೆ ಸಹಾಯ ಮಾಡುತ್ತದೆ. ಆದರೆ ನೀವು ಎಂ.ಜಿ ರೋಡ್ ಖಾತೆಗೆ ಅನುದಾನ ಜಮಾ ಮಾಡಲು ಮಾಜಿ ಮಂತ್ರಿಗಳಾದ ಶ್ರೀ.ನಾಗೇಂದ್ರ, ಸರ್ಕಾರದ ಹೈಯಷ್ಟ್ಯ ಅಥಾರಿಟಿ ಮತ್ತು ಎಫ್.ಡಿ ಇಲಾಖೆಯಿಂದ ಸೂಚನೆ ಇತ್ತು ಎಂದು ಒಪ್ಪಿಕೊಂಡಲ್ಲಿ ನಿಮ್ಮನ್ನು ಬಿಡುತ್ತೇವೆ. ಇಲ್ಲದಿದ್ದರೆ ಅರೆಸ್ಟ್ ಮಾಡುತ್ತೇವೆಂದು ಮಾನಸಿಕ ಹಿಂಸೆಯನ್ನು ನೀಡಿರುತ್ತಾರೆ,

ನಂತರ ಮುರುಳಿ ಕಣ್ಣನ್ ರವರು ಶ್ರೀ.ಮಿತ್ತಲ್ ಐ.ಆರ್.ಎಸ್ ಇವರ ಹತ್ತಿರ ಕಳುಸಿರುತ್ತಾರೆ, ಮಿತ್ತಲ್ ಸರ್ ರವರು ನನ್ನನ್ನು ನಿಲ್ಲಿಸಿ, 1).. ನೀನೊಬ್ಬ ಅಪರಾಧಿ, 2) ನಿನ್ನನ್ನು ಈಗಲೇ ಅರೆಸ್ಟ್ ಮಾಡುತ್ತೇನೆ. 3) ಇ.ಡಿ ಬಗ್ಗೆ ನಿನಗೆ ಗೊತ್ತಿಲ್ಲ, 4) 2-3 ವರ್ಷ ನಿನಗೆ ಬೆಲ್ ಸಿಗುವುದಿಲ್ಲ. 5) ನಿನ್ನ ಹೇಳಿಕೆಯನ್ನು ನಾನು ಓದಿದ್ದೆನೆ. 6) ಇದು ಪ್ರಯೋಜನಕ್ಕೆ ಬರುವುದಿಲ್ಲ. 7) ನಿನಗೆ ಇ.ಡಿ ಸಹಾಯ ಮಾಡಬೇಕೆಂದರೆ, ನೀನು ಬರೆದು ಕೊಡಬೇಕು, ಎಂ.ಜಿ ರೋಡ್ ಖಾತೆಗೆ ಹಣವನ್ನು ಸಿ.ಎಂ. ಸರ್, ನಾಗೇಂದ್ರ ಸರ್ ಮತ್ತು ಎಫ್.ಡಿ ನಿರ್ದೇಶನದಂತೆ ಮಾಡಿರುತ್ತೇನೆ. ಅವರ ಒತ್ತಡ ಇತ್ತು ಎಂದು ಬರೆದುಕೊಡಲು ತಿಳಿಸಿರುತ್ತಾರೆ, ಪದೆ ಪದೆ ಇದೇ ಪ್ರಶ್ನೆ ಕೇಳಿ ನಿನಗೆ 7 ವರ್ಷ ಜೈಲ್ ಶಿಕ್ಷೆ ಮಾಡಿಸುವವರೆಗೂ ಬಿಡುವುದಿಲ್ಲ ಎಂದು ಬೈದು, ನನ್ನನ್ನು ಭಯಬಿತನನ್ನಾಗಿ ಮಾಡಿರುತ್ತಾರೆ ಎಂದು ದೂರಿದ್ದಾರೆ

ನಂತರ  ಮಿತ್ತಲ್ ರವರು ಕಣ್ಣನ್ ರವರಿಗೆ ದೂರವಾಣೆ ಕರೆ ಮಾಡಿ, ತಮ್ಮ ಛೇಂಬರ್ ಗೆ ಕರೆಯಿಸಿಕೊಳ್ಳುತ್ತಾರೆ. ಪುನಃ ಇಬ್ಬರು ಸೇರಿ, ಅದೇ ಪ್ರಶ್ನೆ ಕೇಳುತ್ತಾರೆ, ಸಿ.ಎಂ. ಸರ್, ನಾಗೇಂದ್ರ ಸರ್ ಮತ್ತು ಎಫ್.ಡಿ ರವರ ಸೂಚನೆ ಇತ್ತು ಎಂದು ಒಪ್ಪಿಕೊ ಇಲ್ಲದಿದ್ದರೆ ಈಗಲೇ ಅರೆಸ್ಟ್ ಮಾಡುತ್ತೇವೆಂದು ನನಗೆ ಭಯ ಬರುವಂತೆ ವಾತಾವರಣ ಸೃಷ್ಟಿ ಮಾಡಿರುತ್ತಾರೆ. ಕೊನೆಗೆ ಇಬ್ಬರು ಚರ್ಚಿಸಿ ಏನು ಮಾಡೋಣಾ ? ಅರೆಸ್ಟ್ ಮಾಡೋಣವೇ ? ಎಂದು ಮಾತಾನಾಡಿಕೊಳ್ಳುತ್ತಾರೆ.

ನಂತರ ಶ್ರೀ ಮುರುಳಿ ಕಣ್ಣನ್ ರವರು ಇವತ್ತು ಬೇಡ ದಿನಾಂಕ: 18.07.2024 ಕ್ಕೆ ಬರುತ್ತಾರಲ್ಲಾ ಅವತ್ತು ಮಾಡೋಣ ಎಂದು ತಿಳಿಸಿರುತ್ತಾರೆ. ಆದ್ದರಿಂದ ನಾನು ಯಾವುದೇ ತಪ್ಪು ಮಾಡದಿದ್ದರೂ ಸಹ ಕಾನೂನು ಬಾಹಿರವಾಗಿ ವಿಚಾರಣೆ ಮಾಡಿ, ನನ್ನನ್ನು ಬೈದು, ನನ್ನ ಮೇಲೆ ಬೆದರಿಕೆ ಹಾಕುತ್ತಿರುವ ಮಿತ್ತಲ್‌ ಮತ್ತು ಕಣ್ಣನ್ ರವರ ವಿರುದ್ಧ ಸೂಕ್ತ ಕಾನೂನು ಕ್ರಮವನ್ನು ಜರುಗಿಸಬೇಕೆಂದು ಕೋರಿಕೆ ಮೇರೆಗೆ ಎಫ್‌ ಐ ಆರ್‌ ದಾಖಲು ಮಾಡಿದ್ದಾರೆ.

More articles

Latest article