ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಮಹಾನ್‌ ವ್ಯಕ್ತಿ: ಅಮರ್ತ್ಯ ಸೇನ್ ಬಣ್ಣನೆ

ಶಾಂತಿನಿಕೇತನ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಉತ್ತಮ ರಾಜಕೀಯ ನಾಯಕರಲ್ಲಿ ಒಬ್ಬರು ಮತ್ತು ಜಗತಿನ ಅಗತ್ಯತೆಯನ್ನು ಅರ್ಥಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಬಣ್ಣಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿರ್‌ಭೂಮ್‌ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನಮೋಹನ ಸಿಂಗ್ ಮತ್ತು ನಾನು ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಒಟ್ಟಿಗೆ ವ್ಯಾಸಂಗ ಮಾಡುವುದರ ಜತೆಗೆ ಉತ್ತಮ ಸ್ನೇಹಿತರಾಗಿದ್ದೆವು. ವಜ್ರಚ್ಛೇದಿಕ ಪ್ರಜ್ಞಾಪರಮಿತಾ (ಬುದ್ಧಿವಂತಿಕೆಯ ಪರಿಪೂರ್ಣತೆ) ಸೂತ್ರದಲ್ಲಿ ಗೌತಮ ಬುದ್ಧ ವಿವರಿಸಿದ ಸಂದೇಶದ ಸಾರವನ್ನು ಮನಮೋಹನ ಸಿಂಗ್ ಅಳವಡಿಸಿಕೊಂಡಿದ್ದರು ಎಂದು ಅವರು ಹೇಳಿಸಿದ್ದಾರೆ.

ಗೌತಮ ಬುದ್ಧನ ‘ವಜ್ರಚ್ಛೇದಿಕ ಪ್ರಜ್ಞಾಪರಮಿತಾ’ ಸೂತ್ರ ಅಥವಾ ‘ವಜ್ರ ಸೂತ್ರ’ದಲ್ಲಿರುವ ಮನುಷ್ಯರ ವಿಭಿನ್ನ ನಂಬಿಕೆಗಳ ಅಸ್ತಿತ್ವವನ್ನು ಗುರುತಿಸುವುದು ಮುಖ್ಯ ಎಂಬ ಸಂದೇಶವನ್ನು ಸಿಂಗ್ ಅರ್ಥಮಾಡಿಕೊಂಡಿದ್ದರು. ಹಾಗಾಗಿ ಭಾರತದ ನೆಲದಲ್ಲಿ ಪಾಕಿಸ್ತಾನದ ಭಯೋತ್ಪಾದನೆಯ ಪುರಾವೆಗಳು ಕಂಡುಬಂದಾಗ ಪ್ರಜ್ಞಾಪೂರ್ವಕವಾಗಿ ಹೀಗೆ ಪ್ರತಿಕ್ರಿಯಿಸಬೇಕು ಎಂಬುದನ್ನು ಅರಿತಿದ್ದರು ಎಂದು ಸೇನ್ ವಿವರಿಸಿದ್ದಾರೆ. ಮನಮೋಹನ ಸಿಂಗ್‌ ಅವರಿಗೆ ‘ವಜ್ರ ಸೂತ್ರ’ದಲ್ಲಿ ವಿವರಿಸಲಾದ ಗೌತಮ ಬುದ್ಧನ ಸಂದೇಶ ಚೆನ್ನಾಗಿ ತಿಳಿದಿತ್ತು ಎಂದು ನಾನು ಭಾವಿಸುತ್ತೇನೆ. ನಾವು ಒಟ್ಟಿಗೆ ವಿದ್ಯಾರ್ಥಿಗಳಾಗಿದ್ದಾಗ ಮತ್ತು ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಸಹೋದ್ಯೋಗಿಗಳಾಗಿದ್ದಾಗ ನಾನು ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದೇನೆ ಎಂದು ಅಮರ್ತ್ಯ ಸೇನ್ ನೆನಪುಗಳನ್ನು ಮೆಲುಕು ಹಾಕಿದರು.

ಮನಮೋಹನ ಅವರು ಸಿಖ್ ಸಮುದಾಯಕ್ಕೆ ಸೇರಿದವರಾಗಿದ್ದರೂ ಸಹ ಗೌತಮ ಬುದ್ಧನ ಸಂದೇಶವನ್ನು ಇತರ ಧರ್ಮಗಳು ಮತ್ತು ಸಮುದಾಯಗಳ ಜನರಿಗೆ ತಿಳಿಸುವ ಪ್ರಮಾಣಿಕ ಪ್ರಯತ್ನ ಮಾಡಿದ್ದರು. ನಾನು, ಮನಮೋಹನ ಸಿಂಗ್ ಅವರನ್ನು ತುಂಬಾ ಇಷ್ಟಪಟ್ಟಿದ್ದೇನೆ. ಸ್ನೇಹಿತ ಎಂಬ ಕಾರಣಕ್ಕಾಗಿ ಅಲ್ಲ ಎಂದು ಸೇನ್ ಪ್ರತಿಪಾದಿಸಿದ್ದಾರೆ.

ಶಾಂತಿನಿಕೇತನ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಉತ್ತಮ ರಾಜಕೀಯ ನಾಯಕರಲ್ಲಿ ಒಬ್ಬರು ಮತ್ತು ಜಗತಿನ ಅಗತ್ಯತೆಯನ್ನು ಅರ್ಥಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಬಣ್ಣಿಸಿದ್ದಾರೆ.

ಪಶ್ಚಿಮ ಬಂಗಾಳದ ಬಿರ್‌ಭೂಮ್‌ ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮನಮೋಹನ ಸಿಂಗ್ ಮತ್ತು ನಾನು ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಒಟ್ಟಿಗೆ ವ್ಯಾಸಂಗ ಮಾಡುವುದರ ಜತೆಗೆ ಉತ್ತಮ ಸ್ನೇಹಿತರಾಗಿದ್ದೆವು. ವಜ್ರಚ್ಛೇದಿಕ ಪ್ರಜ್ಞಾಪರಮಿತಾ (ಬುದ್ಧಿವಂತಿಕೆಯ ಪರಿಪೂರ್ಣತೆ) ಸೂತ್ರದಲ್ಲಿ ಗೌತಮ ಬುದ್ಧ ವಿವರಿಸಿದ ಸಂದೇಶದ ಸಾರವನ್ನು ಮನಮೋಹನ ಸಿಂಗ್ ಅಳವಡಿಸಿಕೊಂಡಿದ್ದರು ಎಂದು ಅವರು ಹೇಳಿಸಿದ್ದಾರೆ.

ಗೌತಮ ಬುದ್ಧನ ‘ವಜ್ರಚ್ಛೇದಿಕ ಪ್ರಜ್ಞಾಪರಮಿತಾ’ ಸೂತ್ರ ಅಥವಾ ‘ವಜ್ರ ಸೂತ್ರ’ದಲ್ಲಿರುವ ಮನುಷ್ಯರ ವಿಭಿನ್ನ ನಂಬಿಕೆಗಳ ಅಸ್ತಿತ್ವವನ್ನು ಗುರುತಿಸುವುದು ಮುಖ್ಯ ಎಂಬ ಸಂದೇಶವನ್ನು ಸಿಂಗ್ ಅರ್ಥಮಾಡಿಕೊಂಡಿದ್ದರು. ಹಾಗಾಗಿ ಭಾರತದ ನೆಲದಲ್ಲಿ ಪಾಕಿಸ್ತಾನದ ಭಯೋತ್ಪಾದನೆಯ ಪುರಾವೆಗಳು ಕಂಡುಬಂದಾಗ ಪ್ರಜ್ಞಾಪೂರ್ವಕವಾಗಿ ಹೀಗೆ ಪ್ರತಿಕ್ರಿಯಿಸಬೇಕು ಎಂಬುದನ್ನು ಅರಿತಿದ್ದರು ಎಂದು ಸೇನ್ ವಿವರಿಸಿದ್ದಾರೆ. ಮನಮೋಹನ ಸಿಂಗ್‌ ಅವರಿಗೆ ‘ವಜ್ರ ಸೂತ್ರ’ದಲ್ಲಿ ವಿವರಿಸಲಾದ ಗೌತಮ ಬುದ್ಧನ ಸಂದೇಶ ಚೆನ್ನಾಗಿ ತಿಳಿದಿತ್ತು ಎಂದು ನಾನು ಭಾವಿಸುತ್ತೇನೆ. ನಾವು ಒಟ್ಟಿಗೆ ವಿದ್ಯಾರ್ಥಿಗಳಾಗಿದ್ದಾಗ ಮತ್ತು ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ಸಹೋದ್ಯೋಗಿಗಳಾಗಿದ್ದಾಗ ನಾನು ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದ್ದೇನೆ ಎಂದು ಅಮರ್ತ್ಯ ಸೇನ್ ನೆನಪುಗಳನ್ನು ಮೆಲುಕು ಹಾಕಿದರು.

ಮನಮೋಹನ ಅವರು ಸಿಖ್ ಸಮುದಾಯಕ್ಕೆ ಸೇರಿದವರಾಗಿದ್ದರೂ ಸಹ ಗೌತಮ ಬುದ್ಧನ ಸಂದೇಶವನ್ನು ಇತರ ಧರ್ಮಗಳು ಮತ್ತು ಸಮುದಾಯಗಳ ಜನರಿಗೆ ತಿಳಿಸುವ ಪ್ರಮಾಣಿಕ ಪ್ರಯತ್ನ ಮಾಡಿದ್ದರು. ನಾನು, ಮನಮೋಹನ ಸಿಂಗ್ ಅವರನ್ನು ತುಂಬಾ ಇಷ್ಟಪಟ್ಟಿದ್ದೇನೆ. ಸ್ನೇಹಿತ ಎಂಬ ಕಾರಣಕ್ಕಾಗಿ ಅಲ್ಲ ಎಂದು ಸೇನ್ ಪ್ರತಿಪಾದಿಸಿದ್ದಾರೆ.

More articles

Latest article

Most read