ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧದ ಗಡಿಪಾರು ಆದೇಶ ರದ್ದು

Most read

ಬೆಂಗಳೂರು: ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಆದೇಶಿಸಲಾಗಿದ್ದ ಗಡಿಪಾರು ಆದೇಶವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ಇದರಿಂದ ತಿಮರೋಡಿ ಅವರು ನಿಟ್ಟುಸಿರು ಬಿಡುವಂತಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿಗೆ ಮಾಡಲಾಗಿದ್ದ ಗಡಿಪಾರು ಆದೇಶ ಪ್ರಶ್ನಿಸಿ ತಿಮರೋಡಿ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಗಡಿಪಾರು ಆದೇಶವನ್ನು ರದ್ದು ಮಾಡಿದೆ. ಜತೆಗೆ ಹೊಸದಾಗಿ ವಿಚಾರಣೆ ನಡೆಸಿ 15 ದಿನಗಳಲ್ಲಿ ಆದೇಶ ನೀಡಲು ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಉಪ ವಿಭಾಗಾಧಿಕಾರಿಗೆ ಸೂಚನೆಯನ್ನೂ ನೀಡಿದೆ. ನ್ಯಾ ಸೂರಜ್ ಗೋವಿಂದರಾಜು ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಿತು.

ಮಹೇಶ್ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ದಾಖಲಾಗಿದ್ದವು. ಅವುಗಳಲ್ಲಿ ಹಲವು ಪ್ರಕರಣಗಳು ಖುಲಾಸೆಯಾಗಿದ್ದವು. ಧರ್ಮಸ್ಥಳದಲ್ಲಿ ಎಸ್‌ ಐಟಿ ತನಿಖೆ ಆರಂಭವಾದ ನಂತರ ಬೇರೆ ಬೇರೆ ಕಾರಣಗಳಿಗೆ ಅವರ ವಿರುದ್ಧ ನಾನಾರೀತಿಯ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತ ಸ್ಟೆಲ್ಲಾ ವರ್ಗೀಸ್ ಸಪ್ಟೆಂಬರ್ 20ರಂದು ಆದೇಶ ಹೊರಡಿಸಿದ್ದರು. ವಿಶೇಷವೆಂದರೆ ಖುಲಾಸೆಯಾದ ಪ್ರಕರಣಗಳಿಗೆ ಸಂಬಂಧಿಸಿದ ಆರೋಪಗಳನ್ನೂ ಸಹ ಬಂಟ್ವಾಳ ವೃತ್ತ ಆರಕ್ಷಕ ನಿರೀಕ್ಷಕರು ಉಪವಿಭಾಗಾಧಿಕಾರಿಗಳಿಗೆ ನೀಡಿದ ವರದಿಯಲ್ಲಿ ಉಲ್ಲೇಖಿಸಿದ್ದರು

More articles

Latest article