ಕೇಂದ್ರ ಸಚಿವ ವಿ.ಸೋಮಣ್ಣ ಪುತ್ರನ ಮೇಲೆ FIR

Most read

ಬೆಂಗಳೂರು: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ‌ ಸೋಮಣ್ಣ ಪುತ್ರ ಅರುಣ್ ವಿರುದ್ಧ ವಂಚನೆ ಪ್ರಕರಣದಲ್ಲಿ FIR ದಾಖಲಾಗಿದೆ.

ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ FIR ದಾಖಲಾಗಿದ್ದು, ಈವೆಂಟ್ ಮ್ಯಾನೇಜ್ ಮೆಂಟ್ ಕಂಪನಿ ವ್ಯವಹಾರದಲ್ಲಿ ವಂಚನೆ ನಡೆಸಿದ್ದಾರೆ ಎಂದು ದಂಪತಿಗಳು ದೂರು ದಾಖಲಿಸಿದ ಪ್ರಕರಣ ದಾಖಲಿಸಲಾಗಿದೆ. ತಮಗೆ ಜೀವಬೆದರಿಕೆ ಇರುವುದಾಗಿಯೂ ದಂಪತಿಗಳು ದೂರಿನಲ್ಲಿ ಹೇಳಿದ್ದಾರೆ.

ಬೆಂಗಳೂರಿನ ಸಂಜಯ ನಗರ AECS ನಿವಾಸಿಯಾದ ತೃಪ್ತಿ ಹೆಗಡೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು FIR ದಾಖಲಿಸದ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ನ್ಯಾಯಾಲಯದ ಆದೇಶದಂತೆ ಈಗ ಅರುಣ್ ಸೋಮಣ್ಣ ವಿರುದ್ಧ FIR ದಾಖಲಾಗಿದೆ.

More articles

Latest article