ಹನೂರು ಗುಂಡಿನ ದಾಳಿ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ಹನೂರಿನ ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿ ಕುರಿತು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಕಲಾಪದಲ್ಲಿ ಪ್ರತಿಪಕ್ಷಗಳ ಒತ್ತಾಯದ ಮೇರೆಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿ, ಗುಂಡಿನ ದಾಳಿಯಲ್ಲಿ ಮೃತಪಟ್ಟವರು ಜಮೀನಿಗೆ ಹೋಗಿರಲಿಲ್ಲ ಬದಲಾಗಿ ಕಾಡಿನೊಳಗೆ ಇದ್ದರು. ಅಕ್ರಮವಾಗಿ 5 ರಿಂದ 8 ಕಿಲೋಮೀಟರ್ ಪ್ರವೇಶಿಸಿದ್ದರು. ಹಸು ಕರೆದುಕೊಂಡು ಬರಲು ಹೋದವರ ಬಳಿ ಅಡುಗೆ ಸಾಮಾನು ಏಕಿತ್ತು ಎಂದು ಪ್ರಶ್ನಿಸಿದ್ದಾರೆ.

ಅರಣ್ಯ ಸಿಬ್ಬಂದಿ ಉದ್ದೇಶಪೂರ್ವಕವಾಗಿ ಶೂಟೌಟ್ ಮಾಡಿಲ್ಲ, ಆತ್ಮರಕ್ಷಣೆಗಾಗಿ ಹಾಗೂ ಕತ್ತಲಿನಲ್ಲಿ ಈ ಘಟನೆ ನಡೆದಿದೆ.  ಸಿಬ್ಬಂದಿ ವಿರುದ್ಧ ತಪ್ಪು ಕಂಡುಬಂದರೆ ಖಂಡಿತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. 

ಬೆಂಗಳೂರು : ಹನೂರಿನ ಅರಣ್ಯ ವ್ಯಾಪ್ತಿಯಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿ ಕುರಿತು ಅರಣ್ಯ ಸಚಿವ ರಾಮಲಿಂಗಾರೆಡ್ಡಿ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
ಕಲಾಪದಲ್ಲಿ ಪ್ರತಿಪಕ್ಷಗಳ ಒತ್ತಾಯದ ಮೇರೆಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿ, ಗುಂಡಿನ ದಾಳಿಯಲ್ಲಿ ಮೃತಪಟ್ಟವರು ಜಮೀನಿಗೆ ಹೋಗಿರಲಿಲ್ಲ ಬದಲಾಗಿ ಕಾಡಿನೊಳಗೆ ಇದ್ದರು. ಅಕ್ರಮವಾಗಿ 5 ರಿಂದ 8 ಕಿಲೋಮೀಟರ್ ಪ್ರವೇಶಿಸಿದ್ದರು. ಹಸು ಕರೆದುಕೊಂಡು ಬರಲು ಹೋದವರ ಬಳಿ ಅಡುಗೆ ಸಾಮಾನು ಏಕಿತ್ತು ಎಂದು ಪ್ರಶ್ನಿಸಿದ್ದಾರೆ.

ಅರಣ್ಯ ಸಿಬ್ಬಂದಿ ಉದ್ದೇಶಪೂರ್ವಕವಾಗಿ ಶೂಟೌಟ್ ಮಾಡಿಲ್ಲ, ಆತ್ಮರಕ್ಷಣೆಗಾಗಿ ಹಾಗೂ ಕತ್ತಲಿನಲ್ಲಿ ಈ ಘಟನೆ ನಡೆದಿದೆ.  ಸಿಬ್ಬಂದಿ ವಿರುದ್ಧ ತಪ್ಪು ಕಂಡುಬಂದರೆ ಖಂಡಿತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. 

More articles

Latest article

Most read