ದೇವಸ್ಥಾನಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸಿ: ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮಿ

ತಿರುಪತಿ ಲಡ್ಡು ಪ್ರಸಾದಕ್ಕೆ ಕಲಬೆರೆಕೆ ತುಪ್ಪ ಪೂರೈಕೆ ವಿವಾದದ ಬೆನ್ನಲ್ಲೇ ರಾಜ್ಯದಲ್ಲೂ ಇದೀಗ ದೇವಸ್ಥಾನಗಳನ್ನು ಸರ್ಕಾರದ ಹಿಡಿತ ದಿಂದ ಮುಕ್ತಗೊಳಿಸುವಂತೆ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮಿ ಒತ್ತಾಯಿಸಿದ್ದಾರೆ.

ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಹಿಂದೂ ಧಾರ್ಮಿಕ ಕೇಂದ್ರಗಳು ಸರ್ಕಾರದ ಅಧೀನದಲ್ಲಿರಬಾರದು. ಹಿಂದೂ ಸಂಸ್ಥೆಗಳ ಆಡಳಿತಕ್ಕೆ ಒಳಪಡಬೇಕು ಎಂದು ಸುಪ್ರೀಂ ಕೋರ್ಟ್ ಕೊಡ ತೀರ್ಪು ಇದೆ. ಈ ಹಿನ್ನೆಲೆಯಲ್ಲಿ ಕೂಡಲೇ ಎಲ್ಲ ದೇವಸ್ಥಾನಗಳನ್ನು ಸರ್ಕಾರದಿಂದ ಮುಕ್ತಗೊಳಿಸಿ ಹಿಂದೂಗಳಿಗೆ ಒಪ್ಪಿಸಬೇಕು ಎಂದಿದ್ದಾರೆ.

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ಕೂಡ, ಸರ್ಕಾರಗಳು ಒಂದು ನಿರ್ದಿಷ್ಟವಾದ ಧರ್ಮವನ್ನು ಮಾತ್ರ ನಿಯಂತ್ರಿಸುವುದು ಸರಿಯಲ್ಲ ಎಂದಿದ್ದಾರೆ.

ಮಂತ್ರಾಲಯದ ಸುಬುಧೇಂದ್ರ ತೀರ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಸ್ವಾತಂತ್ರ್ಯ ಪೂರ್ವದಲ್ಲಿ ಊರಿನ ಮುಖಂಡರು ಹಾಗೂ ಅರ್ಚಕರ ನೇತೃತ್ವದಲ್ಲಿ ದೇವ ಸ್ಥಾನಗಳು ನಡೆಯುತ್ತಿದ್ದವು. ಕೇಂದ್ರ ಸರ್ಕಾರ ಕೂಡಲೇ ಮಠ-ಮಾನ್ಯಗಳಿಗೆ ವಿಶೇಷ ಕಾಯ್ದೆ ತರಬೇಕು ಎಂದು ಹೇಳಿದ್ದಾರೆ.

ತಿರುಪತಿ ಲಡ್ಡು ಪ್ರಸಾದಕ್ಕೆ ಕಲಬೆರೆಕೆ ತುಪ್ಪ ಪೂರೈಕೆ ವಿವಾದದ ಬೆನ್ನಲ್ಲೇ ರಾಜ್ಯದಲ್ಲೂ ಇದೀಗ ದೇವಸ್ಥಾನಗಳನ್ನು ಸರ್ಕಾರದ ಹಿಡಿತ ದಿಂದ ಮುಕ್ತಗೊಳಿಸುವಂತೆ ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮಿ ಒತ್ತಾಯಿಸಿದ್ದಾರೆ.

ಪೇಜಾವರ ಮಠದ ವಿಶ್ವಪ್ರಸನ್ನ ಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದ್ದು, ಹಿಂದೂ ಧಾರ್ಮಿಕ ಕೇಂದ್ರಗಳು ಸರ್ಕಾರದ ಅಧೀನದಲ್ಲಿರಬಾರದು. ಹಿಂದೂ ಸಂಸ್ಥೆಗಳ ಆಡಳಿತಕ್ಕೆ ಒಳಪಡಬೇಕು ಎಂದು ಸುಪ್ರೀಂ ಕೋರ್ಟ್ ಕೊಡ ತೀರ್ಪು ಇದೆ. ಈ ಹಿನ್ನೆಲೆಯಲ್ಲಿ ಕೂಡಲೇ ಎಲ್ಲ ದೇವಸ್ಥಾನಗಳನ್ನು ಸರ್ಕಾರದಿಂದ ಮುಕ್ತಗೊಳಿಸಿ ಹಿಂದೂಗಳಿಗೆ ಒಪ್ಪಿಸಬೇಕು ಎಂದಿದ್ದಾರೆ.

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ಕೂಡ, ಸರ್ಕಾರಗಳು ಒಂದು ನಿರ್ದಿಷ್ಟವಾದ ಧರ್ಮವನ್ನು ಮಾತ್ರ ನಿಯಂತ್ರಿಸುವುದು ಸರಿಯಲ್ಲ ಎಂದಿದ್ದಾರೆ.

ಮಂತ್ರಾಲಯದ ಸುಬುಧೇಂದ್ರ ತೀರ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದು, ಸ್ವಾತಂತ್ರ್ಯ ಪೂರ್ವದಲ್ಲಿ ಊರಿನ ಮುಖಂಡರು ಹಾಗೂ ಅರ್ಚಕರ ನೇತೃತ್ವದಲ್ಲಿ ದೇವ ಸ್ಥಾನಗಳು ನಡೆಯುತ್ತಿದ್ದವು. ಕೇಂದ್ರ ಸರ್ಕಾರ ಕೂಡಲೇ ಮಠ-ಮಾನ್ಯಗಳಿಗೆ ವಿಶೇಷ ಕಾಯ್ದೆ ತರಬೇಕು ಎಂದು ಹೇಳಿದ್ದಾರೆ.

More articles

Latest article

Most read