ಗೌರಿ ಲಂಕೇಶ್ ಹತ್ಯೆ ಆರೋಪಿಗಳಿಗೆ ಹಿಂದುತ್ವ ಸಂಘಟನೆಯಿಂದ ಸನ್ಮಾನ

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಹಾಗೂ ಮನೋಹರ್ ಯಡವೆಗೆ ಎನ್ನುವವರಿಗೆ ಈಚೆಗೆ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಜಾಮೀನಿನ ಮೇಲೆ ಬಂದ ಈ ಆರೋಪಿಗಳನ್ನು ರಾಜ್ಯದ ಹಿಂದುತ್ವ ಸಂಘಟನೆಗಳು ಹಾರ ಹಾಕಿ ಸನ್ಮಾನ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಜೈಲಿನಿಂದ ಜಾಮೀನಿನ ಮೇಲೆ ಹೊರಗೆ ಬಂದಿರುವ ಪರಶುರಾಮ್ ಹಾಗೂ ಮನೋಹರ್ ನನ್ನು ಹಿಂದುತ್ವ ಸಂಘಟನೆಗಳಿಂದ ಸ್ವಾಗತಿಸಿ, ಗೌರವಿಸಿರುವ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಸಂದರ್ಭದಲ್ಲಿ ಕೆಲವರು ಸನಾತನ ಧರ್ಮಕ್ಕೆ ಜೈ.. ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಇನ್ನು ಆರೋಪಿಗಳು ಕಾಳಿಕಾದೇವಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಂತರ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಹೂವಿನ ಹಾರಹಾಕಿ ಪೂಜೆ ಮಾಡಿದ್ದಾರೆ.

ಈ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಆರೋಪಿಗಳಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಂಬಂಧವಿಲ್ಲ ಎಂದು ಹಿಂದುತ್ವ ಸಂಘಟನೆಯ ಸದಸ್ಯರು ವಾದ ಮಾಡಿದ್ದಾರೆ. ಆದರೆ, ಆರೋಪಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಹಾಗೂ ಮನೋಹರ್ ಯಡವೆಗೆ ಎನ್ನುವವರಿಗೆ ಈಚೆಗೆ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಜಾಮೀನಿನ ಮೇಲೆ ಬಂದ ಈ ಆರೋಪಿಗಳನ್ನು ರಾಜ್ಯದ ಹಿಂದುತ್ವ ಸಂಘಟನೆಗಳು ಹಾರ ಹಾಕಿ ಸನ್ಮಾನ ಮಾಡಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ಜೈಲಿನಿಂದ ಜಾಮೀನಿನ ಮೇಲೆ ಹೊರಗೆ ಬಂದಿರುವ ಪರಶುರಾಮ್ ಹಾಗೂ ಮನೋಹರ್ ನನ್ನು ಹಿಂದುತ್ವ ಸಂಘಟನೆಗಳಿಂದ ಸ್ವಾಗತಿಸಿ, ಗೌರವಿಸಿರುವ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಸಂದರ್ಭದಲ್ಲಿ ಕೆಲವರು ಸನಾತನ ಧರ್ಮಕ್ಕೆ ಜೈ.. ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ಇನ್ನು ಆರೋಪಿಗಳು ಕಾಳಿಕಾದೇವಿ ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ನಂತರ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗೆ ಹೂವಿನ ಹಾರಹಾಕಿ ಪೂಜೆ ಮಾಡಿದ್ದಾರೆ.

ಈ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಳ್ಳಲಾಗಿದೆ. ಆರೋಪಿಗಳಿಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಸಂಬಂಧವಿಲ್ಲ ಎಂದು ಹಿಂದುತ್ವ ಸಂಘಟನೆಯ ಸದಸ್ಯರು ವಾದ ಮಾಡಿದ್ದಾರೆ. ಆದರೆ, ಆರೋಪಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

More articles

Latest article

Most read