ಹಾಸನ | ಗದ್ದೆ ನಾಟಿ ಮಾಡುತ್ತಿರುವವರ ಮೇಲೆ ಸಿಡಿಲು ಬಡಿತ: ಓರ್ವ ಮಹಿಳೆ ಗಂಭೀರ, 15 ಜನ ಆಸ್ಪತ್ರೆಗೆ ದಾಖಲು!

Most read

ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಸಿಡಿಲು ಸಹಿತ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಆದರೆ ಹಾಸನದಲ್ಲಿ ಸಿಡುಲು ಬಡಿತಕ್ಕೆ ಒರ್ವ ಮಹಿಳೆ ಸ್ಥಿತಿ ಗಂಭೀರವಾಗಿದ್ದು, 15 ಜನರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಕೋರ್ಲಗದ್ದೆ ಗ್ರಾಮದಲ್ಲಿ ಗದ್ದೆಯೊಂದರಲ್ಲಿ 25 ಮಂದಿ ಭತ್ತ ನಾಟಿ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದ್ದು, ಓರ್ವ ಮಹಿಳೆ ಸ್ಥಿತಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಹದಿನೈದು ಮಂದಿ ಕ್ರಾಫರ್ಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಲತಾ (35) ಎಂಬುವವರ ಸ್ಥಿತಿ ಗಂಭೀರವಾಗಿದ್ದು, ರೇಣುಕಾ (49), ಸವಿತಾ (45), ಸುಮಿತ್ರ (51), ರೇಣುಕಮ್ಮಾ (55), ನೇತ್ರ (40), ನಿರ್ಮಲ (51), ವೀಣಾ (35), ಅನಿತಾ (55) ಮಂಜುಳ 45, ಪುಷ್ಪ 35 ಭಾಗ್ಯ 45, ಶಾರದಮ್ಮ 55, ಜಯಂತಿ 55 ಗಾಯತರಮ್ಮ 45, ಮಂಜುಳಮ್ಮ 60
ಸೇರಿ ಹದಿನೇಳು ಮಂದಿಗೆ ಸಿಡಿಲು ಬಡಿದು ಆಸ್ಪತ್ರೆಗೆ ದಾಖಲಾಗಿದ್ದಾರೆ.

More articles

Latest article