ಸುಳ್ಳು ಆರೋಪದೊಂದಿಗೆ ಬೆದರಿಕೆ ಹಾಕುತ್ತಿದ್ದಾರೆ, ಹಂದಿಗಳ ಜೊತೆ ಗುದ್ದಾಡಲ್ಲ: HDK ಮಾತಿಗೆ ಎಡಿಜಿಪಿ ಚಂದ್ರಶೇಖರ್ ತಿರುಗೇಟು

Most read

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿ ಕರೆದು ಲೋಕಾಯುಕ್ತ ಅಧಿಕಾರಿ ವಿರುದ್ಧ ಸರಣಿ ಆರೋಪಗಳನ್ನು ಮಾಡಿದ್ದರು. ಈ ಬೆನ್ನಲ್ಲೇ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್, ತಮ್ಮ ಲೋಕಾಯುಕ್ತ ಎಸ್​ಐಟಿ ಅಧಿಕಾರಿಗಳಿಗೆ ಪತ್ರ ಬರೆದು ಮುಕ್ತ ಮತ್ತು ನ್ಯಾಯ ಸಮ್ಮತ ತನಿಖೆ ನಡೆಸೋಣ, ಆದರೆ ಹಂದಿಗಳ ಜೊತೆ ಗುದ್ದಾಡುವುದು ಬೇಡ ಎಂದು ನಿರ್ದೇಶನ ನೀಡಿದ್ದಾರೆ.

ಆರೋಪಗಳ ಸಂಬಂಧ ಎಸ್​ಐಟಿ ಅಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಕುಮಾರಸ್ವಾಮಿ ಮಾಡಿರುವ ಆರೋಪಗಳು ಶುದ್ಧ ಸುಳ್ಳು ಹಾಗೂ ದುರುದ್ದೇಶದ್ದಿಂದ ಕೂಡಿದೆ ಎಂದಿದ್ದಾರೆ.”ಕುಮಾರಸ್ವಾಮಿ ಅವರು ಆರೋಪಗಳ ಮೂಲಕ ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕುವ ಕೆಲಸ ಮಾಡಿದ್ದಾರೆ. ಎಸ್​​ಐಟಿ ತಂಡ ಕುಮಾರಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ಪ್ರಾಸಿಕ್ಯೂಷನ್​​ಗೆ ಅನುಮತಿ ಕೋರಿದ ಹಿನ್ನೆಲೆಯಲ್ಲಿ ಈ ರೀತಿ ಆರೋಪಿಸಿದ್ದಾರೆ. ಜಾಮೀನಿನ ಮೇಲೆ ಹೊರಗಿರುವ ಆರೋಪಿಯಾಗಿರುವ ಹೆಚ್.ಡಿ.ಕುಮಾರಸ್ವಾಮಿ ಕರ್ತವ್ಯಕ್ಕೆ ಅಡ್ಡಿಪಡಿಸುವ ಕೆಲಸ ಮಾಡಿದ್ದಾರೆ ” ಎಂದು ಪತ್ರದಲ್ಲಿ ಹೇಳಿದ್ದಾರೆ.

ಸುಳ್ಳು ಆರೋಪಗಳಿಂದ ಅಧಿಕಾರಿಗಳಿಗೆ ಭಯ ಹುಟ್ಟಿಸುವ ಪ್ರಯತ್ನ ಮಾಡುತ್ತಿದ್ದು, ಆರೋಪಿ ಎಷ್ಟೇ ಪ್ರಬಲವಾಗಿದ್ದರೂ ಆತ ಆರೋಪಿಯೇ, ಹಾಗೂ ಆರೋಪಿಯ ಆರೋಪದಿಂದ ನಾವು ಭಯಬೀಳುವುದಿಲ್ಲ. ಇಂತಹ ಆರೋಪಗಳಿಗೆ ನಾನು ಭಯಪಡುವುದಿಲ್ಲ. ಎಲ್ಲಾ ಆರೋಪಿಗಳನ್ನು ಮತ್ತು ಅಪರಾಧಿಗಳ ನ್ಯಾಯಾಲಯಕ್ಕೆ ತರೋಣ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಜಾರ್ಜ್ ಬರ್ನಾರ್ಡ್ ಶಾ ಮಾತು ಉಲ್ಲೇಖಿಸಿರುವ ಚಂದ್ರಶೇಖರ್, ”ಹಂದಿಗಳೊಂದಿಗೆ ಎಂದಿಗೂ ಕುಸ್ತಿಯಾಡಬೇಡಿ. ಆದ್ದರಿಂದ ನೀವು ಕೊಳಕಾಗುತ್ತೀರಿ. ಹಂದಿಯೂ ಕೂಡ ಅದನ್ನೇ ಇಷ್ಟಪಡುತ್ತೆ. ಅದೇ ರೀತಿ ಆರೋಪಿಗಳು ನಮ್ಮ ಮೇಲೆ ಕೊಳಕು ಎಸೆಯುತ್ತಾರೆ. ಇದ್ದರಿಂದ ಭಯಬೀಳುವ ಅಗತ್ಯವಿಲ್ಲ” ಎಂದು ಎಸ್​​ಐಟಿ ತಂಡಕ್ಕೆ ಬರೆದ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
”ಸತ್ಯವು ಯಾವಾಗಲೂ ಜಯಿಸುತ್ತೆ, ಸತ್ಯ ಮೇವ ಜಯತೆ” ಎಂಬ ಸಾಲುಗಳೊಂದಿಗೆ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಪತ್ರ ಬರೆದಿದ್ದಾರೆ. ಎಡಿಜಿಪಿಯ ಈ ಪತ್ರ ಈಗ ಸಂಚಲನ ಸೃಷ್ಟಿಸಿದೆ.

ಎಸ್‌ಐಟಿ ಮುಖ್ಯಸ್ಥ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪ ಮಾಡಿದ ಹೆಚ್‌ಡಿಕೆ ಮಾನ್ಯತಾ ಟೆಕ್ ಪಾರ್ಕ್ ಬಳಿ 38 ಫ್ಲೋರ್ ಮನೆ ಕಟ್ಟುತ್ತಿದ್ದಾರೆ. ಈ ಹಿಂದೆ ಚಂದ್ರಶೇಖರ್ ಮೇಲೆ ಎಫ್‌ಐಆರ್ ಆಗಿದೆ ತನಿಖೆ ಮಾಡಬೇಕು ಈ ಸಂಬಂಧ ಕೇಂದ್ರದ ಗೃಹ ಕಾರ್ಯದರ್ಶಿಗೂ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದರು. ಹೀಗೆ ಸಾಲು ಸಾಲು ಫೋರ್ಜರಿ, ವಸೂಲಿ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದರು.

More articles

Latest article