ಮುಖ್ಯ ಮಂತ್ರಿಗಳ ಬೆನ್ನಿಗೆ ನಿಂತ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ

Most read

ಕೋಲಾರ: ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ ಮತ್ತು ಬಿಜೆಪಿ-ಜೆಡಿಎಸ್ ಕುತಂತ್ರಗಳನ್ನು ವಿರೋಧಿಸಿ ನಗರದ ಗಾಂಧಿ ವನದಲ್ಲಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಮೌನ ಪ್ರತಿಭಟನೆ ನಡೆಸಿದರು.

ಕುರುಬರ ಸಂಘದ ರಾಜ್ಯ ಕಾರ್ಯದರ್ಶಿ ಅಂಜನಿ ಸೋಮಣ್ಣ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಪ್ರತಿಭಟನೆಯಲ್ಲಿ ಎಲ್ಲ ಶೋಷಿತ ಸಮುದಾಯದ ಮುಖಂಡರು ಪಾಲ್ಗೊಂಡಿದ್ದಾರೆ.

ರಾಜ್ಯ ಕಾರ್ಯದರ್ಶಿ ಅಂಜಲಿ ಸೋಮಣ್ಣ ಮಾತನಾಡಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಸಿದ್ಧರಾಮಯ್ಯನವರನ್ನು ಸಂಚು ರೂಪಿಸುವ ಮೂಲಕ ತೇಜೋವಧೆ ಮಾಡುತ್ತಿದ್ದು ಸಿದ್ಧರಾಮಯ್ಯನವರ ಬೆನ್ನಿಗೆ ಕರ್ನಾಟಕ ಶೋಷಿತ ಸಮುದಾಯಗಳ ಒಕ್ಕೂಟ ಹಾಗೂ ಅವರ ಅಭಿಮಾನಿ ಬಳಗ ಇರುತ್ತದೆ ಎಂದರು.


ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ನಗರ ಸಭೆ ಸದಸ್ಯೆ ಪ್ರಸಾದ್ ಬಾಬು ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

More articles

Latest article