ರೂ.10.27 ಲಕ್ಷ ಕೋಟಿ ಹೂಡಿಕೆ ಆಕರ್ಷಣೆ; ಅನುಷ್ಠಾನ ಹಂತದಲ್ಲಿ ಶೇ.60ರಷ್ಟು ಹೂಡಿಕೆ: ಸಿಎಂ ಸಿದ್ದರಾಮಯ್ಯ

Most read

ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 66 ನೇ ಸಭೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್,

ಸಚಿವರಾದ ಎಂ ಬಿ ಪಾಟೀಲ್,  ಕೆ ಜೆ ಜಾರ್ಜ್, ಪ್ರಿಯಾಂಕ ಖರ್ಗೆ, ಡಾ ಎಂ ಸಿ ಸುಧಾಕರ್, ಸಂತೋಷ್ ಲಾಡ್, ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್,  ಜಿಬಿಎ ಆಯುಕ್ತ ಮಹೇಶ್ವರ ರಾವ್ ಹಾಗೂ  ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಬಂಡವಾಳ ಹೂಡಿಕೆ ಆಕರ್ಷಣೆ ಸಭೆಯ ಮುಖ್ಯಾಂಶಗಳು:

• ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಗಿ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು.

• ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು.

• ಕೈಗಾರಿಕೆಗಳಿಗೆ ರಸ್ತೆ, ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.

• ರಾಜ್ಯದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರೂ.10.27 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲಾಗಿದ್ದು, ಈಗಾಗಲೇ ಶೇ.60ರಷ್ಟು ಹೂಡಿಕೆಗಳು  ಅನುಷ್ಠಾನ ಹಂತದಲ್ಲಿವೆ.

• ಸುಮಾರು ರೂ.1.5ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ವಿವಿಧ ಹಂತದಲ್ಲಿವೆ.

*ಸುಪ್ರೀಂಕೋರ್ಟ್ ನೆಪ ಹೇಳಿಕೊಂಡು ಅಧಿಕಾರಿಗಳು ಕೂರಬಾರದು. ಅಕ್ಕ ಪಕ್ಕದ ರಾಜ್ಯಗಳಿಗೂ ಇರುವುದೂ ಇದೇ ಸುಪ್ರೀಂಕೋರ್ಟ್. ಬೇರೆ ರಾಜ್ಯಗಳಿಗೆ ಆಗದ ಸಮಸ್ಯೆ ನಮಗೆ ಆಗುತ್ತದೆ ಎಂಬ ನೆಪ ಹೇಳಿದರೆ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ.

* ರಾಜ್ಯದಲ್ಲಿ work force ಹೆಚ್ಚಾಗಿದೆ. ಕೌಶಲ್ಯಯುತ labour force ಕೂಡ ರಾಜ್ಯದಲ್ಲಿ ಹೆಚ್ಚಾಗಿದೆ. ಹೀಗಾಗಿ ಉದ್ಯೋಗ ಸೃಷ್ಟಿ ರಾಜ್ಯದಲ್ಲಿ ಹೆಚ್ಚೆಚ್ಚು ಆಗುತ್ತಿದೆ. ಕೈಗಾರಿಕೆಗಳಿಗೆ ಅನುಮತಿ ನೀಡುವ ಮತ್ತಿತರ ವಿಚಾರದಲ್ಲಿ ಪ್ರಕ್ರಿಯೆ ಇನ್ನಷ್ಟು ವೇಗ ಪಡೆಯಬೇಕು. ಇದನ್ನು ಅಧಿಕಾರಿಗಳು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ನೆಪಗಳನ್ನು ಹೇಳಿಕೊಂಡು ವಿಳಂಭ ಮಾಡಬಾರದು ಎನ್ನುವ ಅಭಿಪ್ರಾಯವನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಪ್ರಸ್ತಾಪ.

* ತಮಿಳುನಾಡಿನಲ್ಲಿ 51 SEZ ಗಳಿದ್ದು ಒಟ್ಟಾರೆ 8.9% ಕೊಡುಗೆ ನೀಡುತ್ತಿವೆ.

* ಆದರೆ, ರಾಜ್ಯದಲ್ಲಿ ಕೇವಲ 37 SEZ (special economic zone)ಗಳಿದ್ದು ನಾವು 8.2% ರಷ್ಟು ಕೊಡುಗೆ ನೀಡುತ್ತಿದ್ದೇವೆ. ಇದರಲ್ಲೂ ರಾಜ್ಯದ ಕೊಡುಗೆಯೇ ಹೆಚ್ಚಾಗಿದೆ. ಇಂಥಾ ಅನುಕೂಲಕರ ಪರಿಸ್ಥಿತಿಯನ್ನು ಅಧಿಕಾರಿಗಳು ಗಮನಿಸುತ್ತಿಲ್ಲ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದ ಪ್ರಿಯಾಂಕ್ ಖರ್ಗೆ.

• ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹೆಚ್ಚಾದರೆ ಮಾತ್ರ ಉದ್ಯೋಗ ಸೃಷ್ಟಿ ಮಾಡಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಬಂಡವಾಳ ಹೂಡಿಕೆದಾರ ಸ್ನೇಹಿ ವಾತಾವರಣವನ್ನು ಇನ್ನಷ್ಟು ಉತ್ತಮಪಡಿಸಬೇಕು. ಇದಕ್ಕಾಗಿ ಭೂ ಬಳಕೆ ಬದಲಾವಣೆ ಪ್ರಕ್ರಿಯೆ ಸೇರಿದಂತೆ ವಿವಿಧ ಎನ್‌ಒಸಿಗಳ ನೀಡಿಕೆಯ ಕಾಲಮಿತಿಯನ್ನು ಕಡಿಮೆ ಮಾಡಬೇಕು. ಕಾಲಮಿತಿಯನ್ನು ಕಡಿಮೆ ಮಾಡುವ ಬಗ್ಗೆ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ವಿಳಂಬಕ್ಕೆ ಅವಕಾಶ ನೀಡಬಾರದು.

• ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅಗ್ನಿಶಾಮಕ ಇಲಾಖೆ ಅನುಮೋದನೆ ವಿಳಂಬವಾಗುತ್ತಿದ್ದು, ಇದನ್ನು ತ್ವರಿತಗೊಳಿಸಬೇಕು. ಇದಕ್ಕಾಗಿ ಮಂಡಳಿಯ ನಿಯಮಾವಳಿಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು. ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಅನುಮೋದನೆ ನೀಡುವ ಕಾಲಮಿತಿಯನ್ನು ಮರು ನಿಗದಿಪಡಿಸಬೇಕು. ಕಾಲಮಿತಿಯಲ್ಲಿ ಅನುಮೋದನೆಗಳನ್ನು ನೀಡಲು ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.

• ಕೈಗಾರಿಕೆಗಳಿಗೆ ರಸ್ತೆ, ನೀರು, ವಿದ್ಯುತ್‌ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸುವ ಕುರಿತಾಗಿ ಸಂಬಂಧಪಟ್ಟ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚಿಸಿದರು.

• ರಾಜ್ಯದಲ್ಲಿ ಈ ವರ್ಷದ ಆರಂಭದಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ರೂ.10.27 ಲಕ್ಷ ಕೋಟಿ ಹೂಡಿಕೆ ಆಕರ್ಷಿಸಲಾಗಿದ್ದು, ಈಗಾಗಲೇ ಶೇ.60ರಷ್ಟು ಹೂಡಿಕೆಗಳು  ಅನುಷ್ಠಾನ ಹಂತದಲ್ಲಿವೆ.

• ಸುಮಾರು ರೂ.1.5ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ವಿವಿಧ ಹಂತದಲ್ಲಿವೆ.

More articles

Latest article