ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಬೇಳೂರು ಗೋಪಾಲಕೃಷ್ಣ ರಾಜೀನಾಮೆ!

ಬೆಂಗಳೂರು : ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ಹೊರಹಾಕಿದ್ದು, ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯಲಿದೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವವರ ಪಟ್ಟಿಯನ್ನು ಹಲವು ಬಾರಿ ಬದಲಾಯಿಸಲಾಗಿದೆ. ಮೊದಲು ಟಿ.ಬಿ.ಜಯಚಂದ್ರ ಅವರ ಹೆಸರು ಪಟ್ಟಿಯಲ್ಲಿತ್ತು, ಎರಡನೇ ಪಟ್ಟಿಯಲ್ಲಿ ಅವರ ಹೆಸರಿಲ್ಲ, ಮಂಕಾಳು ವೈದ್ಯ ಹೆಸರನ್ನು ಮತ್ತೆ ಬದಲಾಯಿಸಿ ಎಸ್‌ ಎಸ್‌ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಗಾಯತ್ರಿ ಶಾಂತೇಗೌಡ ಅವರ ಹೆಸರಿದೆ. ಆದರೆ, ಮುಖ್ಯಮಂತ್ರಿಗಳಿಂದ ಅಧಿಕೃತ ಕರೆ ಬಂದಿಲ್ಲ ಎನ್ನಲಾಗಿದೆ.
ಹಲವು ವರ್ಷಗಳಿಂದ ಕಾಂಗ್ರೆಸ್‌ ಕಟ್ಟಾಳವಾಗಿರುವ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ಹೊರಹಾಕಿದ್ದು, ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಯಶವಂತರಾಯಗೌಡ ಪಾಟೀಲ, ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವು ಶಾಸಕರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದರು.

ಬೆಂಗಳೂರು : ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ಹೊರಹಾಕಿದ್ದು, ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯಲಿದೆ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವವರ ಪಟ್ಟಿಯನ್ನು ಹಲವು ಬಾರಿ ಬದಲಾಯಿಸಲಾಗಿದೆ. ಮೊದಲು ಟಿ.ಬಿ.ಜಯಚಂದ್ರ ಅವರ ಹೆಸರು ಪಟ್ಟಿಯಲ್ಲಿತ್ತು, ಎರಡನೇ ಪಟ್ಟಿಯಲ್ಲಿ ಅವರ ಹೆಸರಿಲ್ಲ, ಮಂಕಾಳು ವೈದ್ಯ ಹೆಸರನ್ನು ಮತ್ತೆ ಬದಲಾಯಿಸಿ ಎಸ್‌ ಎಸ್‌ ಮಲ್ಲಿಕಾರ್ಜುನ ಅವರ ಹೆಸರನ್ನು ಸೇರಿಸಲಾಗಿದೆ. ಇದೀಗ ಗಾಯತ್ರಿ ಶಾಂತೇಗೌಡ ಅವರ ಹೆಸರಿದೆ. ಆದರೆ, ಮುಖ್ಯಮಂತ್ರಿಗಳಿಂದ ಅಧಿಕೃತ ಕರೆ ಬಂದಿಲ್ಲ ಎನ್ನಲಾಗಿದೆ.
ಹಲವು ವರ್ಷಗಳಿಂದ ಕಾಂಗ್ರೆಸ್‌ ಕಟ್ಟಾಳವಾಗಿರುವ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ಹೊರಹಾಕಿದ್ದು, ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಯಶವಂತರಾಯಗೌಡ ಪಾಟೀಲ, ಬೇಳೂರು ಗೋಪಾಲಕೃಷ್ಣ ಸೇರಿದಂತೆ ಹಲವು ಶಾಸಕರು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದರು.

More articles

Latest article

Most read