Saturday, July 27, 2024

‘ಇಂಡಿಯಾ’ ಮೈತ್ರಿಕೂಟದ ನಾಯಕರು ಗಾಂಧೀಜಿಯ 3 ಮಂಗಗಳಂತೆ: ಪ್ರಧಾನಿ ಮೋದಿ ವ್ಯಂಗ್ಯ

Most read

ಇಂಡಿಯಾ ಕೂಟದ ನಾಯಕರು ಗಾಂಧೀಜಿಯ ಮೂರು ಮಂಗಗಳಿದ್ದಂತೆ ಎಂದು ಇಂಡಿಯಾ ಮೈತ್ರಿಕೂಟದ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ಹೂಗ್ಲಿ ಜಿಲ್ಲೆಯಲ್ಲಿ ಶುಕ್ರವಾರ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮಹಿಳೆಯರು ಹಾಗೂ ಜನಸಾಮಾನ್ಯರ ಮೇಲೆ ನಡೆದ ದೌರ್ಜನ್ಯದ ಬಗ್ಗೆ ಇಂಡಿಯಾ ಕೂಟದ ನಾಯಕರು ಮೌನವಾಗಿದ್ದಾರೆ. ಅವರು ಗಾಂಧೀಜಿಯ ಮೂರು ಮಂಗಗಳಿದ್ದಂತೆ. ಈ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷರು
ನ್ನು ಪ್ರಶ್ನಿಸಿದರೆ, ‘ಇದೆಲ್ಲ ಆಗುತ್ತಿರುತ್ತದೆ ಬಿಟ್ಹಾಕಿ’ ಎಂದು ಹೇಳಿದರಂತೆ’ ಎಂದೂ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಡೀ ದೇಶ ಇಂದು ಸಾಧನೆಯ ಹಾದಿಯಲ್ಲಿ ಸಾಗುತ್ತಿದ್ದರೆ ಬಂಗಾಳ ಸರ್ಕಾರ ಮಾತ್ರ ಮಹಿಳೆಯರ ಮೇಲಿನ ದೌರ್ಜನ್ಯವನ್ನು ನೋಡಿಕೊಂಡು ಸುಮ್ಮನೆ ಕುಳಿತಿದೆ. ತೃಣಮೂಲ ಕಾಂಗ್ರೆಸ್‌ನ ಕೃತ್ಯಗಳನ್ನು ನೋಡಿ ಇಡೀ ದೇಶದ ಜನರು ಕ್ರುದ್ಧರಾಗಿದ್ದಾರೆ. ಮಾ, ಮಾಟಿ, ಮಾನುಷ್‌ ಎಂದು ಜಪ ಮಾಡುವ ಟಿಎಂಸಿ ಪಕ್ಷ ಸಂದೇಶ್‌ಖಾಲಿಯ ಅಕ್ಕತಂಗಿಯರಿಗೆ ಏನು ಮಾಡಿದೆ ನೋಡಿ. ಇದು ನಾಚಿಕೆಗೇಡಿನ ಸಂಗತಿ’ ಎಂದು ವಾಗ್ದಾಳಿ ನಡೆಸಿದರು

ಗುರುವಾರವಷ್ಟೇ ಆರೋಪಿ ಶಾಜಹಾನ್‌ನನ್ನು ಬಂಧಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಬಂಗಾಳಕ್ಕೆ ಶುಕ್ರವಾರ ಭೇಟಿ ನೀಡಿ TMC ವಿರುದ್ಧ ರಾಜಕೀಯವಾಗಿ ವಾಗ್ದಾಳಿ ಮಾಡಿದ್ದಾರೆ.

More articles

Latest article