ಅಮೆರಿಕದಲ್ಲಿರುವ ಭಾರತೀಯರಿಗೆ ಅವಮಾನ; ಮೌನ ಮುರಿಯಲು ಪ್ರಧಾನಿ ಮೋದಿಗೆ ಕಾಂಗ್ರೆಸ್‌ ಆಗ್ರಹ

ನವದೆಹಲಿ: ಅಮೆರಿಕದ ವಿಮಾನ ನಿಲ್ದಾಣವೊಂದರಲ್ಲಿ ಭಾರತೀಯ ವಿದ್ಯಾರ್ಥಿಗೆ ಕೈಕೋಳ ತೊಡಿಸಿ, ಅವರನ್ನು ನೆಲದ ಮೇಲೆ ಎಳೆದಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಮೌನವಹಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ವಿಮಾನ ನಿಲ್ದಾಣದಲ್ಲಿ ಅಮೆರಿಕವು ಭಾರತೀಯರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳುತ್ತಿರುವ ವಿಡಿಯೋ ಹಾಗೂ ಫೋಟೊಗಳನ್ನು ಕಾಂಗ್ರೆಸ್ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಅಮೆರಿಕದಲ್ಲಿರುವ ಭಾರತೀಯರನ್ನು ಟ್ರಂಪ್ ಸರ್ಕಾರವು ಹೀನಾಯವಾಗಿ ನೆಡೆಸಿಕೊಳ್ಳುತ್ತಿದೆ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆ ಮಾತನಾಡಿ ವಿಷಯವನ್ನು ತಿಳಿಗೊಳಿಸಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂವಹನ) ಜೈರಾಮ್ ರಮೇಶ್ ಆಗ್ರಹಪಡಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು, ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಆಡಳಿತದ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ದೇಶದ ಗೌರವವನ್ನು ಕಾಪಾಡುವುದು ಹಾಗೂ ದೇಶದ ನಾಗರೀಕರ ರಕ್ಷಣೆಯು ಪ್ರಧಾನಿಗಳ  ಜವಬ್ದಾರಿಯಾಗಿದೆ. ಆದರೆ, ಮೋದಿ ಸರ್ಕಾರವು ಭಾರತದ ಗೌರವ ಮತ್ತು ಭಾರತೀಯರ ರಕ್ಷಣೆಯ ವಿಷಯದಲ್ಲಿ ನಿರಂತರವಾಗಿ ಸೋಲುತ್ತಾ ಬಂದಿದೆ ಎಂದು ಜೈರಾಮ್ ರಮೇಶ್ ಟೀಕಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಅಮೆರಿಕದಲ್ಲಿರುವ ಭಾರತೀಯ ನಾಗರೀಕರು ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಪ್ರಧಾನಿ ಮೋದಿ ಈ ವಿಷಯ ಕುರಿತು ಮೌನ ತಾಳಿದ್ದಾರೆ. ಇಂತಹ ಗಂಭೀರ ವಿಷಯ ಕುರಿತು ಮಾತನಾಡಲು ಅವರಿಗೆ ಧೈರ್ಯವಿಲ್ಲ ಎನ್ನುವುದನ್ನು ಅವರ ಮೌನವೇ ಸೂಚಿಸುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

ನವದೆಹಲಿ: ಅಮೆರಿಕದ ವಿಮಾನ ನಿಲ್ದಾಣವೊಂದರಲ್ಲಿ ಭಾರತೀಯ ವಿದ್ಯಾರ್ಥಿಗೆ ಕೈಕೋಳ ತೊಡಿಸಿ, ಅವರನ್ನು ನೆಲದ ಮೇಲೆ ಎಳೆದಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಮೌನವಹಿಸಿರುವ ಕಾಂಗ್ರೆಸ್, ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ವಿಮಾನ ನಿಲ್ದಾಣದಲ್ಲಿ ಅಮೆರಿಕವು ಭಾರತೀಯರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳುತ್ತಿರುವ ವಿಡಿಯೋ ಹಾಗೂ ಫೋಟೊಗಳನ್ನು ಕಾಂಗ್ರೆಸ್ ನಾಯಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ಅಮೆರಿಕದಲ್ಲಿರುವ ಭಾರತೀಯರನ್ನು ಟ್ರಂಪ್ ಸರ್ಕಾರವು ಹೀನಾಯವಾಗಿ ನೆಡೆಸಿಕೊಳ್ಳುತ್ತಿದೆ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆ ಮಾತನಾಡಿ ವಿಷಯವನ್ನು ತಿಳಿಗೊಳಿಸಬೇಕು ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ(ಸಂವಹನ) ಜೈರಾಮ್ ರಮೇಶ್ ಆಗ್ರಹಪಡಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು, ಘಟನೆಗೆ ಸಂಬಂಧಿಸಿದಂತೆ ಸ್ಥಳೀಯ ಆಡಳಿತದ ಜೊತೆ ಸಂಪರ್ಕದಲ್ಲಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ದೇಶದ ಗೌರವವನ್ನು ಕಾಪಾಡುವುದು ಹಾಗೂ ದೇಶದ ನಾಗರೀಕರ ರಕ್ಷಣೆಯು ಪ್ರಧಾನಿಗಳ  ಜವಬ್ದಾರಿಯಾಗಿದೆ. ಆದರೆ, ಮೋದಿ ಸರ್ಕಾರವು ಭಾರತದ ಗೌರವ ಮತ್ತು ಭಾರತೀಯರ ರಕ್ಷಣೆಯ ವಿಷಯದಲ್ಲಿ ನಿರಂತರವಾಗಿ ಸೋಲುತ್ತಾ ಬಂದಿದೆ ಎಂದು ಜೈರಾಮ್ ರಮೇಶ್ ಟೀಕಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಅಮೆರಿಕದಲ್ಲಿರುವ ಭಾರತೀಯ ನಾಗರೀಕರು ಹಾಗೂ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಪ್ರಧಾನಿ ಮೋದಿ ಈ ವಿಷಯ ಕುರಿತು ಮೌನ ತಾಳಿದ್ದಾರೆ. ಇಂತಹ ಗಂಭೀರ ವಿಷಯ ಕುರಿತು ಮಾತನಾಡಲು ಅವರಿಗೆ ಧೈರ್ಯವಿಲ್ಲ ಎನ್ನುವುದನ್ನು ಅವರ ಮೌನವೇ ಸೂಚಿಸುತ್ತಿದೆ ಎಂದು ಲೇವಡಿ ಮಾಡಿದ್ದಾರೆ.

More articles

Latest article

Most read