ಬೆಂಗಳೂರು: ಇಂದು ನಡೆಯಲಿರುವ ಅಂತಿಮ ಪಂದ್ಯದಲ್ಲಿ ಪಂಜಾಬ್ ತಂಡದ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಗೆದ್ದು ಬರಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇಬ್ಬರೂ ಮುಖಂಡರು ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್ಸಿಬಿ ಕಪ್ ಗೆಲ್ಲಲಿ ಎಂದು ಶುಭ ಹಾರೈಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಸಿಬಿ ತಂಡದ ಸೋಲು – ಗೆಲುವು, ಏಳು – ಬೀಳುಗಳಲ್ಲಿ ಸದಾ ಜೊತೆ ನಿಂತು, ಮೊದಲ ಆವೃತ್ತಿಯಿಂದ ಇಂದಿನವರೆಗೂ ಅದೇ ರೀತಿಯ ಪ್ರೀತಿ – ಸ್ಪೂರ್ತಿ ನೀಡುತ್ತಿರುವ ಕೋಟ್ಯಂತರ ಅಭಿಮಾನಿಗಳಿಗಾಗಿ ಈ ಬಾರಿ ಆರ್ಸಿಬಿ ಕಪ್ ಗೆಲ್ಲಲಿ ಎನ್ನುವುದು ನನ್ನ ಅಂತರಾಳದ ಬಯಕೆಯಾಗಿದೆ. “ತಾಳ್ಮೆಯ ಫಲ ಸಿಹಿಯಾಗಿರುತ್ತದೆಯಂತೆ”, ಆ ಸಿಹಿ ಇಂದು ಕನ್ನಡಿಗರ ಮತ್ತು ಜಗತ್ತಿನಾದ್ಯಂತ ಇರುವ ಆರ್ ಸಿಬಿ ಅಭಿಮಾನಿಗಳ ಪಾಲಿಗಿರಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸ್ವತಃ ಆರ್ ಸಿಬಿ ಜೆರ್ಸಿ ತೊಟ್ಟು ವಿಡಿಯೋ ಮೂಲಕ ಆರ್ ಸಿಬಿ ಗೆದ್ದು ಬರಲಿ. ಗೆಲುವು ನಿಮ್ಮದೇ, ಈ ಸಲ ಕಪ್ ನಮ್ದೇ ಎಂದು ಶುಭ ಹಾರೈಸಿದ್ದಾರೆ. ನಾನು ಕ್ರಿಕೆಟ್ ಪ್ರೇಮಿ ಮತ್ತು ಕಾಲೇಜು ದಿನಗಳಲ್ಲಿ ಆಟ ಆಡಿದ್ದೂ ಉಂಟು. ನಾನು ಆರ್ ಸಿಬಿಯ ದೊಡ್ಡ ಅಭಿಮಾನಿಯೂ ಹೌದು. ಆಟಗಾರರನ್ನು ಹುರಿದುಂಬಿಸಲು ಅವರು ಅರ್ಸಿಬಿ ಜೆರ್ಸಿ ತೊಟ್ಟಿದ್ದಾರೆ. ಕಳೆದ 18 ವರ್ಷಗಳ ನಂತರ ಆರ್ ಸಿ ಬಿ ತಂಡ ಐಪಿಎಲ್ ಚಾಂಪಿಯನ್ ಶಿಪ್ ಗೆಲ್ಲಲಿ ಎಂದು ಹಾರೈಸುತ್ತೇನೆ. ಇಡೀ ಕರ್ನಾಟಕ ಮಾತ್ರ ಅಲ್ಲ ಭಾರತವೂ ನಿಮ್ಮೊಂದಿಗಿದೆ, ನಿಮ್ಮ ಪರಿಶ್ರಮ ಗಮನಿಸುತ್ತಿದ್ದೇವೆ, ಗೆಲುವು ನಿಮ್ಮದೇ, ಈ ಸಲ ಕಪ್ ನಮ್ದೇ ಎಂದು ಅವರು ಸಾಮಾಜಿಕ ಜಾಲತಾಣಗಳ ಮೂಲಕ ಹಾರೈಸಿದ್ದಾರೆ.