ಆರ್‌ ಸಿಬಿ ತಂಡಕ್ಕೆ ಇಂದು ಸಂಜೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭ

Most read

ಬೆಂಗಳೂರು: ನಡೆದ ಐಪಿಎಲ್‌ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮಣಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್.ಸಿ.ಬಿ) ತಂಡಕ್ಕೆ ಇಂದು ಸಂಜೆ ರಾಜ್ಯ ಸರ್ಕಾರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಜೆ 5 ಗಂಟೆಯಿಂದ 6 ಗಂಟೆಯವರೆಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಪಾಸ್ ಅಥವಾ ಟಿಕೆಟ್ ಇದ್ದವರಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಚಾರ ದಟ್ಟಣೆ ಮತ್ತು ಪಾರ್ಕಿಂಗ್ ಸಮಸ್ಯೆ ಉಂಟಾಗುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಆದಷ್ಟು ಮೆಟ್ರೋ ರೈಲು ಬಳಸುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ಈ ಇಹಿಂದೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ಆರ್‌ ಸಿಬಿ ಆಟಗಾರರ ಮೆರವಣಿಗೆನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಟ್ರಾಫಿಕ್‌ ಮತ್ತು ಭದ್ರತಾ ಸಮಸ್ಯೆ ಉಂಟಾಗಬಹುದು ಎಂಬ ಕಾರಣಕ್ಕೆ ನೇರವಾಗಿ ಅಭಿನಂದನಾ ಸಮಾರಂಭ ನಡೆಸಲು ತೀರ್ಮಾನಿಸಲಾಗಿದೆ.

ಆರ್.ಸಿ.ಬಿ ಗೆಲುವು ಅತೀವ ಸಂತೋಷ ತಂದಿದೆ: ಸಿಎಂ ಸಿದ್ದರಾಮಯ್ಯ:

ಐ.ಪಿ.ಎಲ್ ಹದಿನೆಂಟನೇ ಆವೃತ್ತಿಯನ್ನು  ಗೆದ್ದಿರುವ ಆರ್.ಸಿ.ಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಇಂದು ಮಾತನಾಡಿದ ಅವರು ರಾಜ್ಯ ಅತೀವ  ಹೆಮ್ಮೆ ಹಾಗೂ ಪಡುವಂತಹ ಸಾಧನೆಯನ್ನು ಆರ್.ಸಿ.ಬಿ ಮಾಡಿದ್ದುಇಂದು ತಂಡಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಈಗಾಗಲೇ ಸಲೀಂ, ಎಂ.ಎನ್. ಅನುಚೇತ್ ಗೆ ಸಿಎಂ ಸಿದ್ದರಾಮಯ್ಯ ಸೂಚನೆ. ಡಿಜಿ ಮತ್ತು ಐಜಿಪಿ ಎಂ.ಎ. ಸಲೀಂ ಅವರು ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ್‌, , ಸಂಚಾರಿ ವಿಭಾಗದ ಜಂಟಿ ಆಯುಕ್ತ M.N. ಅನುಚೇತ್ ಅವರೊಂದಿಗೆ ಸಭೆ ನಡೆಸಿ ಭದ್ರತೆ ಮತ್ತು ವಾಹ ದಟ್ಟಣೆ ನಿಭಾಯಿಸುವ ಸಂಬಂಧ ಚರ್ಚೆ ನಡೆಸಿದ್ದಾರೆ.

ಮೊಟೇರಾದ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮಂಗಳವಾರ ರಾತ್ರಿ ನಡೆದ ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿತ್ತು. ಈ ಗುರಿ ಬೆನ್ನತ್ತಿದ ಕಿಂಗ್ಸ್, 7 ವಿಕೆಟ್‌ಗೆ 184 ರನ್ ಗಳಿಸಿ ಅಲ್ಪ ಅಂತರದ ಸೋಲೊಪ್ಪಿಕೊಂಡಿತು.

ಈ ಮೂಲಕ ಐಪಿಎಲ್ ಟೂರ್ನಿಆರಂಭವಾದ  2008 ರಿಂದಲೂ ಆರ್‌ಸಿಬಿ ಗೆಲುವಿಗಾಗಿ ಕಾದಿದ್ದ ಕೋಟ್ಯಂತರ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿದೆ.

More articles

Latest article