Sunday, September 8, 2024

ಯಾರ ಕಾಲಗುಣದಿಂದಲೂ ಮಳೆ ಬರೋದಿಲ್ಲ: ಟೀಕಿಸಿದವರನ್ನು ಗೇಲಿ ಮಾಡಿದ ಸಿದ್ಧರಾಮಯ್ಯ

Most read

ರಾಮನಗರ: ತಾಯಿ ಚಾಮುಂಡೇಶ್ವರಿ ಆಶೀರ್ವಾದದಿಂದ ರಾಜ್ಯದಲ್ಲಿ ಒಳ್ಳೆ ಮಳೆಯಾಗಿ ಜಲಾಶಯಗಳೆಲ್ಲಾ ಭರ್ತಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದಿದ್ದಾರೆ.

ರಾಮನಗರದ ತಾಯಿ ಚಾಮುಂಡೇಶ್ವರಿ ಕರಗ ಉತ್ಸವದಲ್ಲಿ ಪಾಲ್ಗೊಂಡು ಮೊದಲಿಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಕೃತಿ ನಮ್ಮ ಪರವಾಗಿದೆ. ಆದ್ದರಿಂದ ರಾಜ್ಯದಲ್ಲಿ ಮಳೆ ಚೆನ್ನಾಗಿದೆ. ನನ್ನ ಕಾಲ ಗುಣದಿಂದಲೇ ಉತ್ತಮ ಮಳೆ ಆಗ್ತಿದೆ ಎಂದು ಹೇಳುವುದಿಲ್ಲ. ಇಂಥಾ ಮೌಡ್ಯದಲ್ಲಿ ನನಗೆ ನಂಬಿಕೆ ಇಲ್ಲ ಎಂದ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಅವರ ಕಾಲ ಗುಣದಿಂದ ರಾಜ್ಯದಲ್ಲಿ ಮಳೆ ಆಗಲ್ಲ ಎನ್ನುವವರನ್ನು ಪರೋಕ್ಷವಾಗಿ ಟೀಕಿಸಿದರು.

ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯ ಅನುದಾನವನ್ನು ನೀಡಲು ನಾನು ಬದ್ದವಾಗಿದ್ದೇನೆ. ರಾಜ್ಯದ ಏಳೂವರೆ ಕೋಟಿ ಜನರ ಅಭಿವೃದ್ಧಿ ನನ್ನ ಗುರಿ ಎಂದರು.

ಶಾಸಕ ಇಕ್ಬಾಲ್ ಹುಸೇನ್, ಮಾಜಿ ಸಂಸದ ಡಿ.ಕೆ.ಸುರೇಶ್, ಮಾಗಡಿ ಶಾಸಕ ಬಾಲಕೃಷ್ಣ, ಮಾಜಿ ಶಾಸಕರಾದ ಸಿ.ಎಂ.ಲಿಂಗಪ್ಪ ಸೇರಿ ಹಲವು ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

More articles

Latest article