ಜಯದೇವ ಆಸ್ಪತ್ರೆಯಲ್ಲಿ ಉಚಿತ ಆಂಜಿಯೋಪ್ಲ್ಯಾಸ್ಟಿ ಕಾರ್ಯಾಗಾರ

ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಉಚಿತ ಇಂಡೋ ಅಮೆರಿಕನ್ ಆಂಜಿಯೋಪ್ಲ್ಯಾಸ್ಟಿ ಕಾರ್ಯಾಗಾರವನ್ನು ಜಯದೇವ ಹಾಗೂ ಅಮೆರಿಕ ವೈದ್ಯರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಇದೇ ಸೆಪ್ಟೆಂಬರ್​​ 15ರಿಂದ ಈ ಕಾರ್ಯಾಗಾರ ನಡೆಯಲಿದ್ದು, ಸೆ.24, 25ರಂದು ಬಡ ರೋಗಿಗಳಿಗೆ ಉಚಿತ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಿದ್ದಾರೆ.

ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 26, 27, 28ರಂದು ಮೂರು ದಿನಗಳ ಕಾಲ 150 ಬಡರೋಗಿಗಳಿಗೆ ಉಚಿತ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಿದ್ದಾರೆ. ಇನ್ನು ಚಿಕಿತ್ಸೆಗೆ ಬರುವ ಬಡರೋಗಿಗಳು ಬಿಪಿಎಲ್ ಕಾರ್ಡ್​ನ್ನು ಕಡ್ಡಾಯವಾಗಿ ತೆಗೆದುಕೊಂಡು ಬರಲು ಜಯದೇವ ಆಸ್ಪತ್ರೆ ತಿಳಿಸಿದೆ.

ಕಳೆದ ಆಗಸ್ಟ್ 28 ರಂದು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಿನದ 24 ಗಂಟೆಯೂ ಕೆಲಸ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದರು. ಜೊತೆಗೆ ಇದಕ್ಕೆ ಅಗತ್ಯವಿರುವ ಸಿಬ್ಬಂದಿ ಮತ್ತು ಹಣವನ್ನು ರಾಜ್ಯ ಸರಕಾರದಿಂದ ಕಲ್ಪಿಸಲಾಗುವುದು ಎಂದು  ಘೋಷಿಸಿದ್ದರು.

ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಉಚಿತ ಇಂಡೋ ಅಮೆರಿಕನ್ ಆಂಜಿಯೋಪ್ಲ್ಯಾಸ್ಟಿ ಕಾರ್ಯಾಗಾರವನ್ನು ಜಯದೇವ ಹಾಗೂ ಅಮೆರಿಕ ವೈದ್ಯರ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದೆ. ಇದೇ ಸೆಪ್ಟೆಂಬರ್​​ 15ರಿಂದ ಈ ಕಾರ್ಯಾಗಾರ ನಡೆಯಲಿದ್ದು, ಸೆ.24, 25ರಂದು ಬಡ ರೋಗಿಗಳಿಗೆ ಉಚಿತ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಿದ್ದಾರೆ.

ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 26, 27, 28ರಂದು ಮೂರು ದಿನಗಳ ಕಾಲ 150 ಬಡರೋಗಿಗಳಿಗೆ ಉಚಿತ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆ ನೀಡಲಿದ್ದಾರೆ. ಇನ್ನು ಚಿಕಿತ್ಸೆಗೆ ಬರುವ ಬಡರೋಗಿಗಳು ಬಿಪಿಎಲ್ ಕಾರ್ಡ್​ನ್ನು ಕಡ್ಡಾಯವಾಗಿ ತೆಗೆದುಕೊಂಡು ಬರಲು ಜಯದೇವ ಆಸ್ಪತ್ರೆ ತಿಳಿಸಿದೆ.

ಕಳೆದ ಆಗಸ್ಟ್ 28 ರಂದು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ದಿನದ 24 ಗಂಟೆಯೂ ಕೆಲಸ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದರು. ಜೊತೆಗೆ ಇದಕ್ಕೆ ಅಗತ್ಯವಿರುವ ಸಿಬ್ಬಂದಿ ಮತ್ತು ಹಣವನ್ನು ರಾಜ್ಯ ಸರಕಾರದಿಂದ ಕಲ್ಪಿಸಲಾಗುವುದು ಎಂದು  ಘೋಷಿಸಿದ್ದರು.

More articles

Latest article

Most read