ಕಂಗನಾಗೆ ಹೊಡೆದ ಯೋಧೆಗೆ ನಾನು ಉತ್ತಮ ಕೆಲಸ ಕೊಡ್ತೀನಿ: ಗಾಯಕ ವಿಶಾಲ್​ ದದ್ಲಾನಿ

Most read

ಸಂಸದೆ ಕಂಗನಾ ರಣಾವತ್​ (Kangana Ranaut) ಅವರಿಗೆ ಚಂಡಿಗಢ ವಿಮಾನ ನಿಲ್ದಾಣದಲ್ಲಿ ಕಪಾಳಮೋಕ್ಷ ಮಾಡಿದ ಭದ್ರತಾ ಸಿಬ್ಬಂದಿ ಕುಲ್ವಿಂದರ್​ ಕೌರ್​ ಅವರನ್ನು ಕೆಲಸದಿಂದ ತೆಗೆದುಹಾಕಿದರೆ ಯಾರಾದರೂ ಅವರನ್ನು ನನ್ನ ಸಂಪರ್ಕಕ್ಕೆ ತನ್ನಿ. ಅವರಿಗೆ ಉತ್ತಮ ಉದ್ಯೋಗ ನೀಡುತ್ತೇನೆ’ ಎಂದು ಬಾಲಿವುಡ್ ಗಾಯಕ ವಿಶಾಲ್​ ದದ್ಲಾನಿ ಭರವಸೆ ನೀಡಿದ್ದಾರೆ.

ಗಾಯಕ ವಿಶಾಲ್​ ದದ್ಲಾನಿ ಅವರು ಇನ್​​ಸ್ಟಾಗ್ರಾಮ್​ ಸ್ಟೋರಿಯಲ್ಲಿ ತಮ್ಮ ಅನಿಸಿಕೆ ತಿಳಿಸಿದ್ದಾರೆ. ‘ನಾನು ಎಂದಿಗೂ ಹಿಂಸೆಯನ್ನು ಬೆಂಬಲಿಸುವುದಿಲ್ಲ. ಆದರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಿಳಾ ಸಿಬ್ಬಂದಿಯ ಸಿಟ್ಟು ಏನು ಎಂಬುದು ನನಗೆ ಚೆನ್ನಾಗಿ ಅರ್ಥ ಆಗುತ್ತದೆ. ಕುಲ್ವಿಂದರ್​ ಕೌರ್​ ವಿರುದ್ಧ ಸಿಐಎಸ್​ಎಫ್​ನವರು ಏನಾದರೂ ಕ್ರಮ ಕೈಗೊಂಡರೆ, ಅವರಿಗಾಗಿ ನನ್ನಲ್ಲಿ ಉದ್ಯೋಗ ಕಾದಿರುತ್ತದೆ ಎಂಬುದನ್ನು ನಾನು ಖಚಿತಪಡಿಸುತ್ತೇನೆ. ಜೈ ಹಿಂದ್​, ಜೈ ಜವಾನ್​, ಕೈ ಕಿಸಾನ್​’ ಎಂದು ವಿಶಾಲ್​ ದದ್ಲಾನಿ ಬರೆದುಕೊಂಡಿದ್ದಾರೆ.

ಕಂಗನಾಗೆ ಕಪಾಳ ಮೋಕ್ಷ ಮಾಡಿದ ಕೌರ್ ಅವರನ್ನು ಸೇವೆಯಿಂದ ಅಮಾನತು ಮಾಡಿದೆ. ಮತ್ತು ಅವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಂಗನಾ ರೈತರನ್ನು ಅಗೌರವಿಸಿದ್ದು ಕೌರ್ ಅವರ ಕೋಪಕ್ಕೆ ಕಾರಣವಾಗಿದೆ. ಅವರು ರೈತರ ಕುಟುಂಬದಿಂದ ಬಂದವರು ಎಂದು ವರದಿಯಾಗಿದೆ.

ಸ್ಕ್ಯಾನ್​ ಮಾಡಲು ಕಂಗನಾ ಅವರಿಗೆ ತಮ್ಮ ಫೋನ್​ ನೀಡಲು ಸೂಚಿಸಲಾಯಿತು. ಆದರೆ ಈಗ ತಾನು ಸಂಸದೆ ಎಂಬ ಕಾರಣಕ್ಕೆ ಅವರು ಫೋನ್​ ನೀಡಲು ನಿರಾಕರಿಸಿದರು. ಅಲ್ಲಿಂದ ವಾಗ್ವಾದ ಶುರುವಾ ಕಪಾಲಮೋಕ್ಷದವರೆಗೂ ಮುಂದುವರೆದಿದೆ.

More articles

Latest article