ಮರಕ್ಕೆ ಸಾರಿಗೆ ಸಂಸ್ಥೆ ಬಸ್‌ ಡಿಕ್ಕಿ; ಹಲವು ಶಾಲಾ ಮಕ್ಕಳಿಗೆ ಗಂಭೀರ ಗಾಯ

ಕೆಆರ್‌ ಪೇಟೆ: ಕೆಎಸ್ಆರ್‌ ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು  25ಕ್ಕೂ ಹೆಚ್ಚು ಜನರು ಹಾಗು ಶಾಲಾ ಮಕ್ಕಳು ಹಾಗೂ ಪ್ರಯಾಣಿಕರ  ಕೈ ಕಾಲು ಮುರಿದಿರುವ ದುರಂತ ಘಟನೆ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲ್ಲೂಕಿ‌ನ ಕುಂದನಹಳ್ಳಿ ಗೇಟ್ ಬಳಿ ನಡೆದಿದೆ. ಇವರಲ್ಲಿ 5 ಮಂದಿಯ ಸ್ಥಿತಿ  ಚಿಂತಾಜನಕ ಎಂದು ತಿಳಿದು ಬಂದಿದೆ.

ಈ ಬಸ್‌ ಅಲೇನಹಳ್ಳಿ ಗ್ರಾಮದಿಂದ ಕೆ ಆರ್ ಪೇಟೆಗೆ ಆಗಮಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಬಸ್‌ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೆಆರ್‌ ಪೇಟೆ: ಕೆಎಸ್ಆರ್‌ ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು  25ಕ್ಕೂ ಹೆಚ್ಚು ಜನರು ಹಾಗು ಶಾಲಾ ಮಕ್ಕಳು ಹಾಗೂ ಪ್ರಯಾಣಿಕರ  ಕೈ ಕಾಲು ಮುರಿದಿರುವ ದುರಂತ ಘಟನೆ ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲ್ಲೂಕಿ‌ನ ಕುಂದನಹಳ್ಳಿ ಗೇಟ್ ಬಳಿ ನಡೆದಿದೆ. ಇವರಲ್ಲಿ 5 ಮಂದಿಯ ಸ್ಥಿತಿ  ಚಿಂತಾಜನಕ ಎಂದು ತಿಳಿದು ಬಂದಿದೆ.

ಈ ಬಸ್‌ ಅಲೇನಹಳ್ಳಿ ಗ್ರಾಮದಿಂದ ಕೆ ಆರ್ ಪೇಟೆಗೆ ಆಗಮಿಸುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿ ಬಸ್‌ ಮರಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ ಆರ್ ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

More articles

Latest article

Most read