ವಯನಾಡಿನಲ್ಲಿ ಭಾರೀ ಮಳೆ : ಸುರಂಗ ಕಾಮಗಾರಿ ಸ್ಥಳದಲ್ಲಿ ಭೂಕುಸಿತ

ವಯನಾಡು :  ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಸಮೀಪದ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಮಣ್ಣಿನಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. 
ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆಯ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯ ಮೀನಾಕ್ಷಿ ಸೇತುವೆಯ ಸಮೀಪ ಈ ಭೂಕುಸಿತ ಸಂಭವಿಸಿದೆ.

ಅವಶೇಷಗಳಡಿ ಕೆಲವರು ಸಿಕ್ಕಿಹಾಕಿಕೊಂಡಿರಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದು, ಅಗ್ನಿಶಾಮಕ ಮತ್ತು ರಕ್ಷಣಾ ದಳದ ಅಧಿಕಾರಿಗಳು ಸ್ಥಳಕ್ಕೆ ತೆರಳಲಿದ್ದಾರೆ. ಕಲ್ಪೆಟ್ಟಾದಿಂದ ಅಗ್ನಿಶಾಮಕ ಮತ್ತು ರಕ್ಷಣಾ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಶೀಘ್ರದಲ್ಲೇ ಶೋಧ ಕಾರ್ಯ ಆರಂಭವಾಗಲಿದೆ.
ವಯನಾಡು :  ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಸಮೀಪದ ಕಲ್ಲಾಡಿಯಲ್ಲಿ ಮಂಗಳವಾರ ಭಾರಿ ಭೂಕುಸಿತ ಸಂಭವಿಸಿದೆ. ಮಣ್ಣಿನಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. 
ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆಯ ಕಾಮಗಾರಿ ನಡೆಯುತ್ತಿದ್ದ ಕಲ್ಲಾಡಿಯ ಮೀನಾಕ್ಷಿ ಸೇತುವೆಯ ಸಮೀಪ ಈ ಭೂಕುಸಿತ ಸಂಭವಿಸಿದೆ.

ಅವಶೇಷಗಳಡಿ ಕೆಲವರು ಸಿಕ್ಕಿಹಾಕಿಕೊಂಡಿರಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದು, ಅಗ್ನಿಶಾಮಕ ಮತ್ತು ರಕ್ಷಣಾ ದಳದ ಅಧಿಕಾರಿಗಳು ಸ್ಥಳಕ್ಕೆ ತೆರಳಲಿದ್ದಾರೆ. ಕಲ್ಪೆಟ್ಟಾದಿಂದ ಅಗ್ನಿಶಾಮಕ ಮತ್ತು ರಕ್ಷಣಾ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಶೀಘ್ರದಲ್ಲೇ ಶೋಧ ಕಾರ್ಯ ಆರಂಭವಾಗಲಿದೆ.

More articles

Latest article

Most read