ಲಾರೆನ್ಸ್ ಬಿಷ್ಣೊಯಿ ಎನ್‌ಕೌಂಟರ್‌ಗೆ 1,11,11,111 ರೂಪಾಯಿ ಬಹುಮಾನ ಘೋಷಿಸಿದ ಕರ್ಣಿ ಸೇನೆ

Most read

ನವದೆಹಲಿ: ಬಂಧಿತ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೊಯಿಯನ್ನು ಎನ್‌ಕೌಂಟರ್ ಮಾಡುವ ಪೊಲೀಸ್ ಅಧಿಕಾರಿಗೆ ಬಹುಮಾನವಾಗಿ 1,11,11,111 ರೂಪಾಯಿ ಬಹುಮಾನ ನೀಡುವುದಾಗಿ ಕ್ಷತ್ರಿಯ ಕರ್ಣಿ ಸೇನೆ ಘೋಷಿಸಿದೆ.

ಈ ಸಂಬಂಧ ಎಕ್ಸ್‌ನಲ್ಲಿ ವಿಡಿಯೊವೊಂದು ಹರಿದಾಡುತ್ತಿದ್ದು, ರಜಪೂತ ರಾಷ್ಟ್ರೀಯ ಕರ್ಣಿ ಸೇನೆ ನಾಯಕ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಗೆ ಪ್ರತೀಕಾರವಾಗಿ ಈ ಬಹುಮಾನ ಘೋಷಿಸಲಾಗಿದೆ ಎಂದು ಸೇನೆ ತಿಳಿಸಿದೆ.

ನಮ್ಮ ನಾಯಕ ಗೊಗಮೆಡಿ ಹತ್ಯೆಗೆ ಲಾರೆನ್ಸ್ ಬಿಷ್ಣೊಯಿ ಕಾರಣನಾಗಿದ್ದಾನೆ. ಆತನ ಎನ್‌ಕೌಂಟರ್ ಮಾಡುವ ಪೊಲೀಸ್ ಅಧಿಕಾರಿಗೆ ಒಂದು ಕೋಟಿ ಹನ್ನೊಂದು ಲಕ್ಷದ ಹನ್ನೊಂದು ಸಾವಿರದ ನೂರಾ ಹನ್ನೊಂದು ರೂಪಾಯಿ ನೀಡುತ್ತೇವೆ ಎಂದು ಕ್ಷತ್ರಿಯ ಕರ್ಣಿ ಸೇನೆ ಅಧ್ಯಕ್ಷ ರಾಜ್ ಶೇಖಾವತ್ ವಿಡಿಯೊದಲ್ಲಿ ಹೇಳಿದ್ದಾರೆ.

More articles

Latest article