ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಬೆದರಿಕೆ ಹಾಕಿದ್ದ ಆರೋಪಿಗಳ ಬಂಧನ

Most read

ಬೆಂಗಳೂರು: ಗ್ಯಾಂಗ್ ​ಸ್ಟರ್​​ ಬಿಷ್ಣೋಯ್ ಹೆಸರಿನಲ್ಲಿ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ್ದ ಆರೋಪಿಗಳನ್ನು ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್​ ರಫೀಕ್​, ಶಿಶುಪಾಲ್ ಸಿಂಗ್, ವನ್ಷ್​​ ಸಚ್​ದೇವ್, ಅಮಿತ್ ಚೌಧರಿ ಬಂಧಿತ ಆರೋಪಿಗಳು. ಮೊಹಮ್ಮದ್​​ ರಫೀಕ್ ಬೆಂಗಳೂರಿನ ಮಾವಳ್ಳಿ ನಿವಾಸಿ ಎಂದು ತಿಳಿದು ಬಂದಿದೆ.

ಮೊಹಮ್ಮದ್​​ ರಫೀಕ್ ವಿರುದ್ಧ ಈ ಹಿಂದೆ ದೆಹಲಿಯಲ್ಲಿ ಪ್ರಕರಣ ದಾಖಲಾಗಿತ್ತು. ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದಾನೆ. ತಿಹಾರ್​ ಜೈಲಿನಲ್ಲಿ ಹಲವು ಆರೋಪಿಗಳನ್ನು ಪರಿಚಯಿಸಿಕೊಂಡಿದ್ದ ಈತ ಜೈಲಿನಿಂದ ಹೊರಬಂದ ಬಳಿಕ ಲಾರೆನ್ಸ್ ಬಿಷ್ಣೋಯ್ ಹೆಸರಲ್ಲಿ ಸುಲಿಗೆ ಮಾಡಲು ಆರಂಭಿಸಿದ್ದ. ಬಿಷ್ಟೋಯ್​ ತಂಡ್ಕಕೂ ಈ ಮೂವರು ಆರೋಪಿಗಳಿಗೂ ಯಾವುದೇ ಸಂಬಂಧವಿಲ್ಲ. ಇದೀಗ, ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬಂಧಿತರಾಗಿದ್ದಾರೆ. ಪೊಲೀಸರು ಆರೋಪಿಗಳನ್ನು ಕೋರ್ಟ್​ಗೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ವಸತಿಗೃಹಗಳಲ್ಲಿ ಪರಿಶೀಲನೆ ನಡೆಸುವಂತೆ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿದಿನ ಲಾಡ್ಜ್​ ಗಳ ದಾಖಲಾತಿ ಪುಸ್ತಕವನ್ನು ಪರಿಶೀಲನೆ ಮಾಡುತ್ತಿದ್ದಾರೆ. ಈ ಆರೋಪಿಗಳು ಈ ಹಿಂದೆ ಬೆಂಗಳೂರಿಗೆ ಬಂದಾಗ ದೀರ್ಘ ಕಾಲ ಲಾಡ್ಜ್​ ನಲ್ಲಿ ಉಳಿದಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

More articles

Latest article